
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದಾರೆ, ಜೈಲಿಗೆ ಹೋದ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ ನೆನೆದು ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಕಣ್ಣೀರು ಹಾಕಿ, ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಬೆಂಬಲವನ್ನು ನೆನೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಕನ್ನಡಿಗರಿಗೆ ಸಾಷ್ಟಾಂಗ ನಮಸ್ಕಾರ ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ. ಇದೇ ಸಂದರ್ಭದಲ್ಲಿ ತಾವು ಜೈಲಿಗೆ ಹೋದ ದಿನಗಳನ್ನು ನೆನೆದು ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದರು. ಅಲ್ಲದೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲವನ್ನು ನೆನೆದಿದ್ದಾರೆ ಡಿ.ಕೆ.ಶಿವಕುಮಾರ್.
1 ಲಕ್ಷ ಮತಗಳ ಅಂತರದ ಗೆಲುವು : ಸತತ 7 ಗೆಲುವು ಸಾಧಿಸಿದ್ದ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು. ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿತ್ತು. 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ.
ಬಿಜೆಪಿ ಭರ್ಜರಿ ಪ್ರಚಾರ ವರ್ಕೌಟ್ ಆಗಲಿಲ್ಲ : ಭರ್ಜರಿ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಸಿ ಗಮನ ಸೆಳೆದಿದ್ದರು. ಕಾಂಗ್ರೆಸ್ ಕೂಡ ಬಿಜೆಪಿಗೆ ಠಕ್ಕರ್ ಕೊಡುವ ರೀತಿ ಪ್ರಚಾರ ಸಭೆ ನಡೆಸಿತ್ತು. ಆದ್ರೆ ಕನಕಪುರದ ಮತದಾರ ಪ್ರಭು ತನ್ನ ಮತವನ್ನ ಕಾಂಗ್ರೆಸ್ಗೆ ನೀಡಿ, ಡಿಕೆಶಿಗೆ ಗೆಲುವು ನೀಡಿದ್ದಾನೆ. ಕನಕಪುರ ಕೋಟೆಯ ಸೋಲು ಗೆಲುವಿನ ಲೆಕ್ಕಾಚಾರ ಕಾಂಗ್ರೆಸ್ ಗೆದ್ದು ಬೀಗಿದೆ. ಡಿ.ಕೆ. ಶಿವಕುಮಾರ್ ಮತ್ತೆ ತಮ್ಮ ಕ್ಷೇತ್ರದ ಹಿಡಿತವನ್ನ ತೋರಿಸಿದ್ದಾರೆ. ಈ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post