ನವದೆಹಲಿ, ಜೂನ್ 12: ಗುಜರಾತನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ (ಜೂ.12) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಮತ್ತೆಲ್ಲರೂ ಮೃತಪಟ್ಟಿದ್ದಾರೆ.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ವಿಮಾನವು ಹಾರಾಟ ನಡೆಸಿದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ. ಇದರಲ್ಲಿ 169 ಭಾರತೀಯರು, 53 ವಿದೇಶಿ ಪ್ರಜೆಗಳು ಇದ್ದರು. ಈ ದುರಂತಕ್ಕೆ ಟಾಟಾ ಗ್ರೂಪ್ನ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ. “ಈ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇವೆ” ಎಂದು ಹೇಳಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post