ಮಂಗಳೂರು: ಇಲ್ಲಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಜಂಕ್ಷನ್ ಬಳಿಯಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಕಾರುಗಳನ್ನು ಕಳವುಗೈದು ಪರಾರಿಯಾಗಿರುವ ಘಟನೆ ಬುಧವಾರ ತಡರಾತ್ರಿ ವರದಿಯಾಗಿದೆ. ಈ ಮಳಿಗೆ ಸೂರಲ್ಪಾಡಿ ನಿವಾಸಿ ಅಬಿದ್ ಅಹಮ್ಮದ್ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
ಮುಂಬಾಗಿಲ ಮೂಲಕ ಗಾಜಿನ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ತಡರಾತ್ರಿ ಕಚೇರಿಗೆ ಒಳನುಗ್ಗಿದ ಕಳ್ಳರು ಕಚೇರಿಯಲ್ಲಿ ಹುಡುಕಾರಿ ಡ್ರಾವರ್ ನಲ್ಲಿದ್ದ ಕಾರುಗಳ ಕೀ ಪಡೆದು ಹಾಗೂ ಕಾರಿನ ಕಾಗದ ಪತ್ರದ ಜೊತೆಗೆ ಎರಡು ಕಾರುಗಳನ್ನು ಕಳವುಗೈದಿದ್ದಾರೆ.
6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಹಾಗೂ 9 ಲಕ್ಷ ಮೌಲ್ಯದ ಕ್ರೇಟಾ ಕಾರು ಸೇರಿ ಒಟ್ಟು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನವಾಗಿದೆಯೆಂದು ಅಂದಾಜಿಸಲಾಗಿದೆ. ರೈನ್ ಕೋಟ್ ಮತ್ತು ಹೆಲ್ಮೆಟ್ ಧರಿಸಿದ್ದ ಕಳ್ಳರ ಕೈಚಳಕ ಕಚೆರಿಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಮಾಲಕ ಅಬಿದ್ ಅವರು ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post