• About us
  • Contact us
  • Disclaimer
Tuesday, June 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಂಗವೈಕಲ್ಯವಿದ್ದೂ ಸ್ವಂತ ಬದುಕು ಕಟ್ಟಿಕೊಂಡ ಮಂಗಳೂರಿನ ಪರಶುರಾಮ್‌.

Coastal Times by Coastal Times
August 13, 2024
in ಕರಾವಳಿ
ಅಂಗವೈಕಲ್ಯವಿದ್ದೂ ಸ್ವಂತ ಬದುಕು ಕಟ್ಟಿಕೊಂಡ ಮಂಗಳೂರಿನ ಪರಶುರಾಮ್‌.
38
VIEWS
WhatsappTelegramShare on FacebookShare on Twitter

ಮಂಗಳೂರು: ಮೂಲತಃ ಬಿಜಾಪುರದವರಾದ ಪರಶುರಾಮನ ಹೆತ್ತವರು ಕಳೆದ 30 ವರ್ಷಗಳಿಂದ ಮಂಗಳೂರಿನಲ್ಲಿದ್ದಾರೆ ಹುಟ್ಟಿದ ಒಂದು ವರ್ಷದವರೆಗೆ ಸರಿಯಾಗಿಯೇ ಇದ್ದ ಈ ಪರುಶುರಾಮನಿಗೆ ಜ್ವರಕ್ಕೆ ವೈದರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಒಂದು ಕಾಲು ಸಂಪೂರ್ಣ ಸ್ವಾಧೀನ ಕಳೆದುಕೊಂಡಿತು. ಮತ್ತೊಂದು ಕಾಲು ಕೊಂಚ ಬಲವಿದ್ದರೂ, ಇವರು ಜೀವನಪರ್ಯಂತದ ಅಂಗವೈಕಲ್ಯಕ್ಕೆ ತುತ್ತಾದರು. ಬಾಲ್ಯದಿಂದಲೇ ಒಂದು ಕಾಲಿನ ಸ್ವಾಧೀನ ಸಂಪೂರ್ಣ ಕಳೆದು ಕೊಂಡಿದ್ದರೂ ಛಲ ಬಿಡದೆ ಜೀವನ ನಡೆಸಲು ಫುಡ್‌ ಡೆಲಿವರಿ ಬಾಯ್‌ ಆಗಿ ಪ್ರತೀ ನಿತ್ಯ ಕಾಯಕ ನಿರ್ವಹಿಸುತ್ತಿದ್ದಾರೆ ಮಂಗಳೂರಿನ ಪರಶುರಾಮ್‌.

ಮೂಲತಃ ಬಿಜಾಪುರದ ಪರಶುರಾಮ್‌ ಅವರ ಕುಟುಂಬ ಸುಮಾರು 30 ವರ್ಷಗಳಿಂದ ಮಂಗಳೂರಿನಲ್ಲಿದೆ. ಅಪ್ಪ ಮಡಿವಾಳಪ್ಪ ಅವರಿಗೆ ಬೈಕಂಪಾಡಿ ಬಳಿ ಸಣ್ಣ ಗೂಡಂಗಡಿ ಇದೆ. ಅಮ್ಮ ರೇಣುಕಾ ಅಲ್ಲೇ ಸಹಾಯ ಮಾಡುತ್ತಿದ್ದಾರೆ. ಈ ದಂಪತಿಗೆ 7 ಮಂದಿ ಮಕ್ಕಳು. ಆರ್ಥಿಕವಾಗಿ ಹಿಂದುಳಿದ ಕಾರಣ ಶಾಲೆಯ ಫೀಸ್‌, ದಿನನಿತ್ಯದ ಖರ್ಚು ಸಹಿತ ಜೀವನದ ಬಂಡಿ ಸಾಗಿಸಲು ಕಷ್ಟಪಡುತ್ತಿದ್ದಾರೆ. ಇದೀಗ ಪರಶುರಾಮ್‌ ಅವರು ದುಡಿದು ಬಿಡಿಗಾಸು ಸಂಪಾದಿಸುತ್ತಿದ್ದು, ಇದುವೇ ಮನೆಗೆ ಆಧಾರವಾಗಿದೆ.

ಚಿಕ್ಕಂದಿನಲ್ಲೇ ಕಾಲು ಸ್ವಾಧೀನ ಕಳೆದುಕೊಂಡ ಪರಶುರಾಮ್‌ ಅವರ ಒಂದು ಕಾಲು ಊರಲೂ ಸಾಧ್ಯವಾಗುತ್ತಿಲ್ಲ. ಮತ್ತೂಂದು ಕಾಲು ಮತ್ತು ಕೈಯನ್ನು ಊರಿಯೇ ಇವರು ಚಲಿಸುತ್ತಾರೆ. ಹೀಗೇ ಕಷ್ಟ ಪಟ್ಟು ಸ್ಕೂಟರ್‌ ಏರಿ ಸ್ವಿಗ್ಗಿ, ಝೋಮ್ಯಾಟೋ ಕಂಪೆನಿಯ ಮೂಲಕ ಮನೆ ಮನೆಗೆ ಫುಡ್‌ ಡೆಲಿವರಿ ಮಾಡುತ್ತಿದ್ದಾರೆ. ಹೀಗಿದ್ದಾಗ ಕೆಲವು ಬಾರಿ ಫ್ಲ್ಯಾಟ್‌ಗಳಲ್ಲಿ ಏಳೆಂಟು ಮಾಳಿಗೆ ಮೆಟ್ಟಿಲುಗಳಲ್ಲೇ ನಡೆಯುವುದುಂಟು. ಬೆಳಗ್ಗೆ 6 ಗಂಟೆಯಿಂದ ಆರಂಭವಾಗಿ ರಾತ್ರಿಯವರೆಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಪೆಟ್ರೋಲ್‌, ಸ್ಕೂಟರ್‌ನ ನಿರ್ವಹಣೆಗೇ ಆದಾಯದ ಹೆಚ್ಚಿನ ಹಣ ಖರ್ಚಾಗುತ್ತದೆ. ಆದರೂ ಅವರು ಈವರೆಗೆ ಛಲ ಬಿಟ್ಟಿಲ್ಲ

9ನೇ ತರಗತಿಯವರೆಗೆ ಶಿಕ್ಷಣ ಪಡೆದ ಪರಶುರಾಮ ಆ ಬಳಿಕ ಮನೆಯಲ್ಲಿ ಬಡತನವಿದ್ದರಿಂದ ಭಿಕ್ಷಾಟನೆಗಿಳಿದರು. ಆದರೆ ಭಿಕ್ಷೆ ಬೇಡುವ ಕಾಯಕ ಇವರಿಗೆ ಹಿಂಸೆಯೆನಿಸಿ ಒಬ್ಬರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯಲಾರಂಭಿಸಿದರು. ಇದೀಗ ಸೆಕ್ಯುರಿಟಿ ಕಾಯಕದ ಜೊತೆ ಫುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದಾರೆ. ಪರಶುರಾಮ್‌ನ ಫುಡ್ ಡೆಲಿವರಿ ಕೆಲಸಕ್ಕೆ ಮಂಗಳೂರಿನ ಜನರು ಸಹ ಸಹಕಾರ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಎಲ್ಲವೂ ಸರಿಯಿದ್ದು, ಏನನ್ನೂ ಸಾಧಿಸದಿದ್ದವರಿಗೆ ಪರಶುರಾಮ ಮಾದರಿಯಾಗಿದ್ದಾರೆ.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಇಂದಿರಾ ಆಸ್ಪತ್ರೆಗೆ 25 ವರ್ಷಗಳ ಸಂಭ್ರಮ

Next Post

ಕಡಪ್ಪರ ಸಮೀರ್ ಹತ್ಯೆ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಮಾಫಿಯಾ..? ಸುಪಾರಿ ಕೊಲೆ ಶಂಕೆ, ಇಬ್ಬರು ವಶಕ್ಕೆ..?

Related Posts

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು
ಕರಾವಳಿ

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

June 2, 2025
44
ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ
ಕರಾವಳಿ

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

June 2, 2025
48
Next Post
ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ಅಟ್ಟಾಡಿಸಿ ಬರ್ಬರ ಹತ್ಯೆ,

ಕಡಪ್ಪರ ಸಮೀರ್ ಹತ್ಯೆ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಮಾಫಿಯಾ..? ಸುಪಾರಿ ಕೊಲೆ ಶಂಕೆ, ಇಬ್ಬರು ವಶಕ್ಕೆ..?

Discussion about this post

Recent News

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
17
ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

June 2, 2025
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಕರ್ನಾಟಕಕ್ಕೆ ಕಂಟೇನರ್ ವಾಹನದಲ್ಲಿ ಹಿಂಸಾತ್ಮಕ ಸಾಗಿಸುತ್ತಿದ್ದ 24 ಜಾನುವಾರುಗಳ ರಕ್ಷಣೆ

June 3, 2025
ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

ದ.ಕ.ಜಿಲ್ಲೆ: ಅರುಣ್ ಕುಮಾರ್ ಪುತ್ತಿಲ, ತಿಮರೋಡಿ, ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ 21 ಹಿಂದೂ 15 ಮುಸ್ಲಿಮ್ ಯುವಕರ ಗಡಿಪಾರು

June 2, 2025
ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

ಬಂಟ್ವಾಳ: 2.1 ಕಿಮೀ ಉದ್ದದ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ (ಎಡಭಾಗವನ್ನು) ಸಂಚಾರಕ್ಕೆ ಮುಕ್ತ

June 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d