ಮಂಗಳೂರು, ಅ.13: ಮಂಗಳೂರಿನಲ್ಲಿ PFI ಮತ್ತು SDPI ಮುಖಂಡರ ಮನೆಗಳಿಗೆ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ ಯಾನೆ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Discover more from Coastal Times Kannada
Subscribe to get the latest posts sent to your email.
Discussion about this post