• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

Coastal Times by Coastal Times
November 13, 2025
in ಕರಾವಳಿ
ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ
15
VIEWS
WhatsappTelegramShare on FacebookShare on Twitter

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಈ ಋತುವಿನ ತಿರುಗಾಟದ ಆರಂಭೋತ್ಸವ ಮತ್ತು 7ನೇ ಮೇಳದ ಪದಾರ್ಪಣೆ ನ.16ರಂದು ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಇದರ ಅಂಗವಾಗಿ 15ರಂದು ಮೆರವಣಿಗೆ ನಡೆಯಲಿದೆ.

ಏಳೂ ಮೇಳಗಳ ದೇವರು, ತೊಟ್ಟಿಲು, ಚಿನ್ನ, ಬೆಳ್ಳಿ ಆಯುಧಗಳು, ಆಭರಣ ಇತ್ಯಾದಿಗಳ ಮೆರವಣಿಗೆ 15ರಂದು ಮಧ್ಯಾಹ್ನ 3 ಗಂಟೆಗೆ ಬಜಪೆ ಪೇಟೆಯಿಂದ ಆರಂಭಗೊಳ್ಳಲಿದೆ. ಎಕ್ಕಾರು ವರೆಗೆ ವಾಹನದಲ್ಲಿ ಸಾಗುವ ಮೆರವಣಿಗೆ ನಂತರ ಕಾಲ್ನಡಿಗೆಯ ಮೂಲಕ ಮುಂದುವರಿಯಲಿದೆ ಎಂದು ದೇವಸ್ಥಾನದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸ್ತಬ್ಧಚಿತ್ರಗಳು, ಆಟದ ಪರಿಕರಗಳೊಂದಿಗೆ ವೇದಘೋಷ, 3 ಸಾವಿರ ಮಂದಿಯ ಭಜನೆ, ಚೆಂಡೆ, ಡೋಲು, ಕೊಂಬು, ಸ್ಯಾಕ್ಸೊಫೋನ್‌, ನಾಗಸ್ವರ, ಬೇತಾಳ, ಕೀಲು ಕುದುರೆ, ಹುಲಿವೇಷ ಇತ್ಯಾದಿಗಳು ಇರುವ ಮೆರವಣಿಗೆಯಲ್ಲಿ ಸುಮಾರು 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮೆರವಣಿಗೆಯ ನಂತರ ಪರಿಕರಗಳನ್ನು ದೇವರಿಗೆ ಸಮರ್ಪಿಸಲಾಗುವುದು ಎಂದು ಅವರು ತಿಳಿಸಿದರು.

14ರಂದು ಹೋಮ, ಯಾಗಾದಿಗಳು ನಡೆಯಲಿದ್ದು 16ರಂದು ಬೆಳಿಗ್ಗೆ 10.30ಕ್ಕೆ ‍‍ಪೂಜಾ ಕಿರೀಟಗಳ ಸ್ಥಾಪನೆ, ಮಧ್ಯಾಹ್ನ 3 ಗಂಟೆಗೆ ತಾಳಮದ್ದಲೆ ನಡೆಯಲಿದ್ದು 5 ಗಂಟೆಗೆ ಗೆಜ್ಜೆ ಕಟ್ಟಲಾಗುವುದು. 6 ಗಂಟೆಗೆ 7ನೇ ಮೇಳದ ಉದ್ಘಾಟನೆ, 8.30ಕ್ಕೆ ಮೇಳಗಳ ದೇವರ ಪೂಜೆ ಮತ್ತು ಪಾಂಡವಾಶ್ವಮೇಧ ಬಯಲಾಟ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದು ಮೇಳಗಳ ತಿರುಗಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡುವರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸುವರು. ಸಚಿವರಾದ ಶಿವರಾಜ ತಂಗಡಗಿ, ದಿನೇಶ್‌ ಗುಂಡೂರಾವ್‌, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು ಭಾಗವಹಿಸುವರು ಎಂದು ಅವರು ವಿವರಿಸಿದರು.

ಆನುವಂಶಿಕ ಅರ್ಚಕರಾದ ವಾಸುದೇವ ಆಸ್ರಣ್ಣ, ಲಕ್ಷ್ಮಿನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಆಡಳಿತ ಸಮಿತಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ, ಕೊಡೆತ್ತುರುಗುತ್ತು ಕಿಶೋರ್ ಶೆಟ್ಟಿ, ಪ್ರವೀಣ್ ದಾಸ್ ಭಂಡಾರಿ, ಬಿಪಿನ್ ಚಂದ್ರ ಶೆಟ್ಟಿ, ಉಮೇಶ್ ಎನ್.ಶೆಟ್ಟಿ ಮತ್ತು ಕಟೀಲು ಯಕ್ಷಗಾನ ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹರಿನಾರಾಯಣ ಆಸ್ರಣ್ಣ ಮಾತನಾಡಿದರು. ಸನತ್ ಕುಮಾರ್ ಶೆಟ್ಟಿ, ವಾಸುದೇವ ಆಸ್ರಣ್ಣ, ಲಕ್ಷ್ಮಿನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಬಿಪಿನ್ ಚಂದ್ರ ಶೆಟ್ಟಿ ಮತ್ತು ದೇವಿಪ್ರಸಾದ್ ಶೆಟ್ಟಿ ಪಾಲ್ಗೊಂಡಿದ್ದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

Next Post

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
27
Next Post
ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
49
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d