• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಚದುರಂಗದಾಟಕ್ಕೆ ಭಾರತದ ಗುಕೇಶ್​​ ಬಾಸ್: ಚೆನ್ನೈ ಮೂಲದ 18ರ ತರುಣ ಚೆಸ್ ವಿಶ್ವ ಚಾಂಪಿಯನ್ ! ಈತನಿಗೆ ಸಿಕ್ಕ ಕೋಟಿಯೆಷ್ಟು ?

Coastal Times by Coastal Times
December 13, 2024
in ಕ್ರೀಡಾ ಸುದ್ದಿ
ಚದುರಂಗದಾಟಕ್ಕೆ ಭಾರತದ ಗುಕೇಶ್​​ ಬಾಸ್: ಚೆನ್ನೈ ಮೂಲದ 18ರ ತರುಣ ಚೆಸ್ ವಿಶ್ವ ಚಾಂಪಿಯನ್ ! ಈತನಿಗೆ ಸಿಕ್ಕ ಕೋಟಿಯೆಷ್ಟು ?
38
VIEWS
WhatsappTelegramShare on FacebookShare on Twitter

ಸಿಂಗಾಪುರ: ಭಾರತದ ಗ್ರ್ಯಾಂಡ್‌ಮಾಸ್ಟರ್ ದೊಮ್ಮರಾಜು ಗುಕೇಶ್ ಅವರು ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್​ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಕಳೆದ 13 ಪಂದ್ಯಗಳಲ್ಲಿ ಡ್ರಾ ಸಾಧಿಸುತ್ತಾ ಬಂದಿದ್ದ ಗುಕೇಶ್​ ಇಂದು ನಡೆದ 14ನೇ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ 2024ರ ಸಾಲಿನ ವಿಶ್ವ ಚಾಂಪಿಯನ್‌ಶಿಪ್​​ ಗೆದ್ದುಕೊಂಡರು. ಚೆಸ್​​ ಆಟದ 138 ವರ್ಷಗಳಲ್ಲಿ ಏಷ್ಯಾದ ಇಬ್ಬರು ಸ್ಪರ್ಧಿಗಳು ಫೈನಲ್​ಗೆ ತಲುಪಿದ್ದು ಇದೇ ಮೊದಲು. ಚೀನಾ ಮತ್ತು ಭಾರತದ ಆಟಗಾರರ ನಡುವಿನ ಸೆಣಸಾಟದಲ್ಲಿ ಜಯ ಗುಕೇಶ್​​ ಅವರದ್ದಾಯಿತು.

ಹಾಲಿ ವಿಶ್ವ ಚಾಂಪಿಯನ್ ಆಗಿದ್ದ ಚೀನಾದ 32 ವರ್ಷದ ಡಿಂಗ್ ಲಿರೆನ್ ಅವರು ಭಾರತದ ಗ್ರ್ಯಾಂಡ್​ಮಾಸ್ಟರ್​ಗೆ ಕಳೆದ 13 ಪಂದ್ಯಗಳಲ್ಲಿ ತೀವ್ರ ಪೈಪೋಟಿ ನೀಡಿದ್ದರು. ಇಬ್ಬರೂ 6.5 ಸಮಾನ ಅಂಕ ಗಳಿಸಿದ್ದರು. ಗೆಲುವಿನ ಬಳಿಕ ಗುಕೇಶ್ ಅವರಿಗೆ 21.21 ಕೋಟಿ ರೂಪಾಯಿ (2.5 ಮಿಲಿಯನ್ ಅಮೆರಿಕನ್​ ಡಾಲರ್​) ಬಹುಮಾನ ಲಭಿಸಿದೆ.

ವಿಶ್ವದ ಅತಿ ಕಿರಿಯ ಚಾಂಪಿಯನ್​: 18 ವರ್ಷದ ಭಾರತದ ಗ್ರ್ಯಾಂಡ್​ಮಾಸ್ಟರ್​ ಡಿ. ಗುಕೇಶ್​ ವಿಶ್ವ ಚೆಸ್​​ ಚಾಂಪಿಯನ್​​ ಗೆದ್ದ ವಿಶ್ವದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ರಷ್ಯಾದ ದಂತಕಥೆ ಗ್ಯಾರಿ ಕಾಸ್ಪರೋವ್ ಅವರು 1985ರಲ್ಲಿ 22ನೇ ವಯಸ್ಸಿನಲ್ಲಿ ಚಾಂಪಿಯನ್​ ಆಗಿದ್ದರು. ಈ ದಾಖಲೆಯನ್ನು ಭಾರತೀಯ ಮುರಿದರು.

ವಿಶ್ವ ಚಾಂಪಿಯನ್​ ಗೆದ್ದ ಗುಕೇಶ್​ ಚೆಸ್​​ ಇತಿಹಾಸದ ಮೂರನೇ ಗ್ರ್ಯಾಂಡ್​ಮಾಸ್ಟರ್ ಆಗಿದ್ದಾರೆ. ಚೆಸ್ ದಂತಕಥೆ ಜಿ.ಎಂ.ವಿಶ್ವನಾಥನ್ ಅವರ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎಂಬ ಅಭಿದಾನಕ್ಕೂ ಪಾತ್ರರಾದರು. ಆನಂದ್ ಅವರು 5 ಬಾರಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದಿದ್ದಾರೆ. 1886ರಿಂದ ಆರಂಭವಾಗಿರುವ ವಿಶ್ವ ಚೆಸ್​ ಚಾಂಪಿಯನ್​ ಪ್ರಶಸ್ತಿಯಲ್ಲಿ 17 ಆಟಗಾರರು ಚಾಂಪಿಯನ್ ಆಗಿದ್ದಾರೆ. ಗುಕೇಶ್ ಈಗ 18ನೇ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ.

ಉಕ್ಕಿದ ಆನಂದಭಾಷ್ಪ: ಡಿಂಗ್​ ಲಿರೆನ್​ ವಿರುದ್ಧ ಗೆಲುವು ಖಚಿತವಾಗುತ್ತಿದ್ದಂತೆಯೇ ಗುಕೇಶ್​ ಕಣ್ಣಲ್ಲಿ ಗೆಲುವಿನ ಕಣ್ಣೀರು ಸುರಿಯಿತು. ಜಯದ ಸಂಭ್ರಮವನ್ನು ತಡೆಯಲಾಗದೆ ಗ್ರ್ಯಾಂಡ್​ಮಾಸ್ಟರ್​ ಆನಂದಭಾಷ್ಪ ಸುರಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ.

10 ವರ್ಷಗಳ ಕನಸು ನನಸು: ಗೆಲುವಿನ ಬಳಿಕ ಮಾತನಾಡಿದ ವಿಶ್ವ ಚಾಂಪಿಯನ್​ ಗುಕೇಶ್​, “ಈ ದಿನಕ್ಕಾಗಿ ನಾನು 10 ವರ್ಷಗಳಿಂದ ಕಾಯುತ್ತಿದ್ದೆ. ಕೊನೆಗೂ ನನ್ನ ಕನಸು ನನಸಾಗಿದೆ. ನಾನು ಟೂರ್ನಿಯಲ್ಲಿ ನನ್ನ ಅತ್ಯುತ್ತಮ ಆಟವಾಡಿದೆ. ಇದನ್ನು ಮುಂದುವರಿಸಿಕೊಂಡು ಹೋಗುವೆ” ಎಂದು ಹೇಳಿದರು. ಮುಂದುವರೆದು, “ಹಾಲಿ ವಿಶ್ವ ಚಾಂಪಿಯನ್​​ ಡಿಂಗ್​ ಲಿರೆನ್​ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದು ಅತ್ಯುತ್ತಮ ಕ್ಷಣವಾಗಿದೆ. ಆತ ಯಾರೆಂಬುದು ಪ್ರಪಂಚಕ್ಕೆ ಗೊತ್ತಿದೆ” ಎಂದರು.

ಗುಕೇಶ್ ಗೆ ಸಿಕ್ಕ ಪ್ರಶಸ್ತಿ ಮೊತ್ತ ಎಷ್ಟು ? : 2024ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಒಟ್ಟು $2.5 ಮಿಲಿಯನ್ ಪ್ರಶಸ್ತಿ ಮೊತ್ತ ಹೊಂದಿದೆ. FIDE ನಿಯಮದ ಪ್ರಕಾರ, ಪ್ರತಿ ಗೆಲುವಿಗೆ ಒಬ್ಬ ಆಟಗಾರನಿಗೆ $200,000 (ಸುಮಾರು ₹1.68 ಕೋಟಿ) ಸಿಗುತ್ತೆ, ಉಳಿದ ಪ್ರಶಸ್ತಿ ಹಣವನ್ನ ಸಮಾನವಾಗಿ ಹಂಚಿಕೊಳ್ಳಲಾಗುತ್ತದೆ.‌ ಗುಕೇಶ್ ಮೂರು ಪಂದ್ಯಗಳನ್ನ (3, 11 ಮತ್ತು 14) ಗೆದ್ದಿದ್ದು, 3 ಗೆಲುವುಗಳಿಂದ $600,000 (ಸುಮಾರು ₹5.04 ಕೋಟಿ) ಗಳಿಸಿದ್ದರು. ಆದ್ರೆ 1 ಮತ್ತು 12ನೇ ಪಂದ್ಯಗಳನ್ನ ಗೆದ್ದ ಡಿಂಗ್ $400,000 (₹3.36 ಕೋಟಿ) ಗಳಿಸಿದ್ರು. ಉಳಿದ $1.5 ಮಿಲಿಯನ್‌ ಅನ್ನು ಇಬ್ಬರು ಆಟಗಾರರಿಗೂ ಸಮಾನವಾಗಿ ಹಂಚಲಾಗುತ್ತೆ. ಒಟ್ಟಾರೆಯಾಗಿ, ಗುಕೇಶ್ 1.35 ಮಿಲಿಯನ್ ಡಾಲರ್ (ಸುಮಾರು ₹11.34 ಕೋಟಿ) ಗೆದ್ದರೆ, ಡಿಂಗ್ $1.15 ಮಿಲಿಯನ್ (ಸುಮಾರು ₹9.66 ಕೋಟಿ) ಗೆದ್ದಿದ್ದಾರೆ.‌

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸ್ಕೂಟರ್‌ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನ ಮೇಲೆ ಲಾರಿ ಹರಿದು ಮೃತ್ಯು

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
20
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

Discussion about this post

Recent News

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
232
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d