• About us
  • Contact us
  • Disclaimer
Wednesday, January 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸುಲಿಗೆ ಪ್ರಕರಣ – ಕುಖ್ಯಾತ ಆರೋಪಿ ಆಕಾಶಭವನ ಶರಣ್ ಸಹಿತ ಐವರ ಬಂಧನ

Coastal Times by Coastal Times
January 14, 2022
in ಕ್ರೈಮ್ ನ್ಯೂಸ್
ಮಂಗಳೂರು: ಸುಲಿಗೆ ಪ್ರಕರಣ – ಕುಖ್ಯಾತ ಆರೋಪಿ ಆಕಾಶಭವನ ಶರಣ್ ಸಹಿತ ಐವರ  ಬಂಧನ
136
VIEWS
WhatsappTelegramShare on FacebookShare on Twitter

ಮಂಗಳೂರು: ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), ಪ್ರಸಾದ್ (39), ಚೇತನ್ ಕೊಟ್ಟಾರಿ (35) ಎಂದು ಗುರುತಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ ಡಿಸೆಂಬರ್ 8ರಂದು ರಾತ್ರಿ ಹಳೆಯಂಗಡಿ ನಿವಾಸಿಯೊಬ್ಬರು ತನ್ನ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಮಯ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರಲಿದ್ದ ಮೊಬೈಲ್ ಫೋನ್, ನಗದು ರೂ. 3000 ಹಾಗೂ ದ್ವಿಚಕ್ರ ವಾಹನವನ್ನು ಸುಲಿಗೆ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪೈಕಿ ಆಕಾಶಭವನ ಶರಣ್ ಎಂಬಾತನು ಈ ಪ್ರಕರಣದ ಪ್ರಮುಖ ಸೂತ್ರದಾರಿಯಾಗಿದ್ದು, ಈತನು ಇತ್ತೀಚೆಗೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದು, ಮತ್ತೆ ತನ್ನ ಸಹಚರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ. ಈ ಕೃತ್ಯಕ್ಕೆ ಉಪಯೋಗಿಸಿದ ಬಿಳಿ ಬಣ್ಣದ ಮಹೇಂದ್ರ ಎಕ್ಸ್ ಯುವಿ ಕಾರು, 3 ಮೊಬೈಲ್ ಫೋನುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನು ಆಕಾಶಭವನ ಶರಣ್ ತನ್ನ ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದಾಖಲಾದ ಸುಲಿಗೆ ಪ್ರಕರಣದಲ್ಲಿ ಸುಲಿಗೆ ಮಾಡಿದ ಮೊಬೈಲ್ ಫೋನ್ ನಿಂದ ಆಕಾಶಭವನ ಶರಣ್ ಬೆದರಿಕೆ ಹಾಕಿರುವ ಬಗ್ಗೆ ಕೂಡ ವಿಚಾರಣೆ ವೇಳೆ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

” Bindu Beverages ” ತಂಪು ಪಾನೀಯ ಪೇಟೆಂಟ್‌ ದುರುಪಯೋಗ: 2 ಕಂಪನಿ ವಿರುದ್ಧ ಎಫ್‌ಐಆರ್‌! ಕಂಪನಿಗಳು ಸೀಝ್.

Next Post

ಸಹಕಾರ ಕ್ಷೇತ್ರ ಸರ್ವವ್ಯಾಪಿ – ಸರ್ವಸ್ಪರ್ಶಿ : ಸಾಣೂರು ನರಸಿಂಹ ಕಾಮತ್

Related Posts

ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಕ್ರೈಮ್ ನ್ಯೂಸ್

ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ

January 5, 2026
95
ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು
ಕ್ರೈಮ್ ನ್ಯೂಸ್

ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು

January 5, 2026
48
Next Post
ಸಹಕಾರ ಕ್ಷೇತ್ರ ಸರ್ವವ್ಯಾಪಿ – ಸರ್ವಸ್ಪರ್ಶಿ : ಸಾಣೂರು ನರಸಿಂಹ ಕಾಮತ್

ಸಹಕಾರ ಕ್ಷೇತ್ರ ಸರ್ವವ್ಯಾಪಿ - ಸರ್ವಸ್ಪರ್ಶಿ : ಸಾಣೂರು ನರಸಿಂಹ ಕಾಮತ್

Discussion about this post

Recent News

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

January 7, 2026
66
‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

January 7, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

January 7, 2026
‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

January 7, 2026
ಮಂಗಳೂರು: ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾನ್, ಮ್ಯಾರಥಾನ್, ಬೀಚ್ ರೆಸ್ಲಿಂಗ್ ಚಾಂಪ್ಯನ್ ಶಿಪ್

ಮಂಗಳೂರು: ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾನ್, ಮ್ಯಾರಥಾನ್, ಬೀಚ್ ರೆಸ್ಲಿಂಗ್ ಚಾಂಪ್ಯನ್ ಶಿಪ್

January 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d