ಮಂಗಳೂರು, ಎ. 11: ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ 2022-2025ರ ಅವಧಿಗೆ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. – ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗನ್ನಾಥ್ ಶೆಟ್ಟಿ ಬಾಳ ಹಾಗೂ ಜಿಲ್ಲಾ ಘಟಕದ ಖಜಾಂಚಿಯಾಗಿ ಪುಷ್ಪರಾಜ್ ಬಿ.ಎನ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. – ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟಾ ರಾಜೇಶ್ ಕೆ. ಪೂಜಾರಿ ಹಾಗೂ ಅನ್ಸಾರ್ ಇನೋಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಿತೇಂದ್ರ ಕುಂದೇಶ್ವರ, ಜಿಲ್ಲಾ ಕಾರ್ಯದರ್ಶಿಗಳಾಗಿ ವಿಜಯ್ ಕೋಟ್ಯಾನ್, ಗಂಗಾಧರ್ ಕಲ್ಲಪಳ್ಳಿ, ಭುವನೇಶ್ವರ ಗೇರುಕಟ್ಟೆ ಆಯ್ಕೆಯಾಗಿದ್ದಾರೆ.
ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆ ನಡೆದಿತ್ತು. ಆದರೆ ಹೈಕೋರ್ಟ್ ನಿರ್ದೇಶನದಂತೆ ಫಲಿತಾಂಶ ಘೋಷಣೆ ಮಾಡಿರಲಿಲ್ಲ ಸೋಮ ವಾರ ಫಲಿತಾಂಶ ಪ್ರಕಟಿಸಲು ರಾಜ್ಯ ಹೈಕೋರ್ಟ್ ಅನುಮತಿ ನೀಡಿರುವುದರಿಂದ ಫಲಿತಾಂಶ ವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಯಾಗಿರುವಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ. ತಿಳಿಸಿದ್ದಾರೆ.
Discussion about this post