• About us
  • Contact us
  • Disclaimer
Tuesday, June 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಕಂಫರ್ಟ್ ಟೆಕ್ ದಿ ಸ್ಲೀಪ್ ಕಂಪೆನಿಯ ಮೊದಲ ಮಳಿಗೆಗೆ ಚಾಲನೆ

Coastal Times by Coastal Times
May 14, 2024
in ಕರಾವಳಿ
ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಕಂಫರ್ಟ್ ಟೆಕ್ ದಿ ಸ್ಲೀಪ್ ಕಂಪೆನಿಯ ಮೊದಲ ಮಳಿಗೆಗೆ ಚಾಲನೆ
77
VIEWS
WhatsappTelegramShare on FacebookShare on Twitter

ಮಂಗಳೂರು ಮೇ 14: ಕಂಫರ್ಟ್-ಟೆಕ್ ಬ್ರಾಂಡ್ ದಿ ಸ್ಲೀಪ್ ಕಂಪೆನಿ (ಟಿಎಸ್‌ಸಿ) ಮಂಗಳೂರಿನಲ್ಲಿ ತನ್ನ ಮೊದಲ ಮಳಿಗೆಯನ್ನು ಆರಂಭಿಸಿದೆ. ಕಂಪೆನಿ ಸಿಒಒ ಕರಣ್ ಸಿಂಗ್ಲಾ ನೂತನ ಮಳಿಗೆಯನ್ನು ಉದ್ಘಾಟಿಸಿದರು.

ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್‌ನಲ್ಲಿ ಸ್ಲೀಪ್ ಕಂಪೆನಿಯ ಹೊಸ ಮಳಿಗೆ ಕಾರ್ಯಾರಂಭ ಮಾಡಿದೆ. ಹೊಸ ಮಳಿಗೆಯು ಕರ್ನಾಟಕದಲ್ಲಿ ಕಂಪೆನಿಯ 15ನೇ ಮಳಿಗೆಯಾಗಿದೆ. ಕಂಪೆನಿ ಈಗಾಗಲೇ ಬೆಂಗಳೂರಿನಲ್ಲಿ 14 ಮಳಿಗೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಮಂಗಳೂರಿನ ಮಳಿಗೆಯಲ್ಲಿ ಗ್ರಾಹಕರ ವಿವಿಧ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ಪೇಟೆಂಟ್ ಸ್ಮಾರ್ಟ್ಗ್ರಿಡ್ ಹಾಸಿಗೆಗಳು, ಸ್ಮಾರ್ಟ್ ರಿಕ್ಲೈನರ್ ಹಾಸಿಗೆಗಳು, ದಿಂಬುಗಳು, ಕಚೇರಿಯಲ್ಲಿ ಬಳಸಬಹುದಾದ ಕುರ್ಚಿಗಳು ಮತ್ತು ರಿಕ್ಲೈನರ್ ಸೋಫಾಗಳು ಸೇರಿದಂತೆ ವಿವಿಧ ಉತ್ಪನ್ನಗಳಿರಲಿವೆ. ಮಂಗಳೂರು ಮತ್ತು ಸುತ್ತಮುತ್ತಲ ಗ್ರಾಹಕರು ನಿಶ್ಚಿಂತೆಯಿಂದ ಗುಣಮಟ್ಟದ ನಿದ್ರೆ ಮಾಡುವಂತಾಗಬೇಕೆAಬ ಆಶಯವನ್ನು ಕಂಪೆನಿ ಹೊಂದಿದೆ. ಪ್ರತಿ ರಾತ್ರಿ ಏಳು ಗಂಟೆಗಳ ಆರಾಮದಾಯಕ ನಿದ್ರೆ ಅಗತ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಕಳೆದ ಒಂದು ವರ್ಷದಲ್ಲಿ, ಕರ್ನಾಟಕದಲ್ಲಿ ಸರ್ಕಾರ ನಡೆಸುತ್ತಿರುವ ಟೆಲಿ-ಮೆಂಟಲ್ ಆರೋಗ್ಯ ಸಹಾಯವಾಣಿಗೆ ಬಂದು ಹೆಚ್ಚಿನ ಕರೆಗಳು ನಿದ್ರಾಹೀನತೆಗೆ ಸಂಬಂಧಿಸಿದ್ದವು.

ಈ ಸಂದರ್ಭದಲ್ಲಿ ಮಾತನಾಡಿದ ದಿ ಸ್ಲೀಪ್ ಕಂಪೆನಿಯ ಸಿಒಒ ಕರಣ್ ಸಿಂಗ್ಲಾ ಅವರು, “ಮಂಗಳೂರಿನಲ್ಲಿ ಸ್ಲೀಪ್ ಕಂಪೆನಿ ಆರಂಭಿಸಿರುವ ಮೊದಲ ಮಳಿಗೆಯು ರಾಜ್ಯದಲ್ಲಿ ನಮ್ಮ ವ್ಯಾಪ್ತಿಯನ್ನು ವಿಸ್ತರಿಸುವ ಮತ್ತು ಜನರ ಜೀವನ ಗುಣಮಟ್ಟವನ್ನು ಹೆಚ್ಚಿಸುವ ನಮ್ಮ ಬದ್ಧತೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗುಣಮಟ್ಟದ ನಿದ್ರೆಗೆ ಅಗತ್ಯವಿರುವ ಉತ್ಪನ್ನಗಳು ಮತ್ತು ಆರಾಮದಾಯಕ ಆಸನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ದಿ ಸ್ಲೀಪ್ ಕಂಪೆನಿ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ” ಎಂದು ಹೇಳಿದರು.

ಸ್ಲೀಪ್ ಕಂಪೆನಿಯು ಗಮನಾರ್ಹ ಬೆಳವಣಿಗೆಯನ್ನು ದಾಖಲಿಸುತ್ತಿದ್ದು ಕೇವಲ ನಾಲ್ಕು ವರ್ಷಗಳಲ್ಲಿ ರಾಷ್ಟ್ರದಾದ್ಯಂತ ತನ್ನ ಅಸ್ತಿತ್ವವನ್ನು ವಿಸ್ತರಿಸಿದೆ. 2023ರ ಸಪ್ಟೆಂಬರ್‌ಗೆ ಅನ್ವಯವಾಗುವಂತೆ ಕಂಪನಿ 350 ಕೋಟಿಗಳ ವಹಿವಾಟು ನಡೆಸಿದ್ದು, ಕಳೆದ ಎರಡು ವರ್ಷಗಳಲ್ಲಿ ವಹಿವಾಟು ಪ್ರಮಾಣ ಆರು ಪಟ್ಟು ಹೆಚ್ಚಿದ 2021ರ ನವೆಂಬರ್‌ನಲ್ಲಿ ಕಂಪೆನಿಯ ವಹಿವಾಟು 60 ಕೋಟಿ ರೂಪಾಯಿಗಳಾಗಿದ್ದವು. ತನ್ನ ವಿಸ್ತರಣಾ ಕಾರ್ಯತಂತ್ರವನ್ನು ಚುರುಕುಗೊಳಿಸಿರುವ ದಿ ಸ್ಲೀಪ್ ಕಂಪನಿ ಈ ವರ್ಷದ ಅಂತ್ಯದ ವೇಳೆಗೆ ಇನ್ನೂ 150 ಮಳಿಗೆಗಳನ್ನು ತೆರೆಯುವ ಗುರಿಯನ್ನು ಹೊಂದಿದೆ. ಇತ್ತೀಚೆಗೆ ಕಂಪನಿ ಹೈದರಾಬಾದ್‌ನಲ್ಲಿ ತನ್ನ ದೇಶದ 75ನೇ ಮಳಿಗೆಯನ್ನು ಪ್ರಾರಂಭಿಸಿತ್ತು. ಕಂಫರ್ಟ್‌-ಟೆಕ್ ವಲಯದಲ್ಲಿ ಆದ್ಯ ಪ್ರವರ್ತಕ ಕಂಪೆನಿಯಾಗಿ ಗುರುತಿಸಿಕೊಂಡಿರುವ ದಿ ಸ್ಲೀಪ್ ಕಂಪೆನಿ ಕಳೆದ 18 ತಿಂಗಳುಗಳಲ್ಲಿ ಮಳಿಗೆಗಳ ಆರಂಭದ ದೃಷ್ಟಿಯಿಂದ ದೇಶದ ಅತಿ ವೇಗವಾಗಿ ಬೆಳೆಯುತ್ತಿರುವ ಓಮ್ಮೆ ಚಾನಲ್‌ ಬ್ರಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ.

About The Sleep Company: The Sleep Company is Asia’s first and only provider of SmartGRID technology, revolutionising sleep and sitting solutions. As one of India’s fastest-growing brands, it is reshaping both

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮುಂಬೈ: ಜಾಹೀರಾತು ಫಲಕ ಕುಸಿದು 12 ಮಂದಿ ಮೃತ್ಯು, 60 ಮಂದಿಗೆ ಗಾಯ

Next Post

ಪರಿಷತ್ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಕರಾವಳಿ ಬಗ್ಗೆ ನಿರ್ಲಕ್ಷ್ಯ ; ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಹರೀಶ್‌ ಆಚಾರ್ಯ ಸ್ಪರ್ಧೆ

Related Posts

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಕರಾವಳಿ

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

June 22, 2026
13
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ
ಕರಾವಳಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
111
Next Post
ಪರಿಷತ್ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಕರಾವಳಿ ಬಗ್ಗೆ ನಿರ್ಲಕ್ಷ್ಯ ; ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಹರೀಶ್‌ ಆಚಾರ್ಯ ಸ್ಪರ್ಧೆ

ಪರಿಷತ್ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಕರಾವಳಿ ಬಗ್ಗೆ ನಿರ್ಲಕ್ಷ್ಯ ; ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಹರೀಶ್‌ ಆಚಾರ್ಯ ಸ್ಪರ್ಧೆ

Discussion about this post

Recent News

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
26
ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

June 22, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

June 22, 2026
ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d