• About us
  • Contact us
  • Disclaimer
Wednesday, August 27, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳದಿಂದ ಮೆಕ್ಕಾಕ್ಕೆ ಪಾದಯಾತ್ರೆ: 8,640 ಕಿ.ಮೀ ದೂರವನ್ನು 280 ದಿನಗಳಲ್ಲಿ ಕ್ರಮಿಸುವ ಗುರಿ

Coastal Times by Coastal Times
June 14, 2022
in ರಾಷ್ಟ್ರೀಯ ಸುದ್ದಿ
ಕೇರಳದಿಂದ ಮೆಕ್ಕಾಕ್ಕೆ ಪಾದಯಾತ್ರೆ: 8,640 ಕಿ.ಮೀ ದೂರವನ್ನು 280 ದಿನಗಳಲ್ಲಿ ಕ್ರಮಿಸುವ ಗುರಿ
77
VIEWS
WhatsappTelegramShare on FacebookShare on Twitter

ಭಟ್ಕಳ: ಮುಸ್ಲಿಮರು ಪವಿತ್ರ ಮೆಕ್ಕಾ ಹಜ್ ಯಾತ್ರೆಗೆ ವಿಮಾನ, ಹಡಗುಗಳಲ್ಲಿ ಪ್ರಯಾಣಿಸುವುದು ಸಾಮಾನ್ಯ. ಆದರೆ, ಕೇರಳದ ಯುವಕರೊಬ್ಬರು ನಡೆದುಕೊಂಡೇ ಸಾಗುತ್ತಿದ್ದಾರೆ. ಭಟ್ಕಳಕ್ಕೆ ಮಂಗಳವಾರ ತಲುಪಿದ ಅವರನ್ನು ಸ್ಥಳೀಯರು ಅದ್ಧೂರಿಯಾಗಿ ಸ್ವಾಗತಿಸಿದರು. ಕೇರಳದ ಮಲಪ್ಪುರಂ ಜಿಲ್ಲೆಯ ಅಟವನಾಡು ಗ್ರಾಮದ ಶಿಹಾಬ್ ಚೋಥೋರ್ (30) ಇಂಥ ಸಾಹಸ ಮಾಡುತ್ತಿದ್ದಾರೆ.  ತಮ್ಮ ಊರಿನಿಂದ ಜೂನ್ 2ರಂದು ಪ್ರಯಾಣ ಆರಂಭಿಸಿದ ಅವರು, ಸುಮಾರು 8,640 ಕಿಲೋಮೀಟರ್ ದೂರವನ್ನು 280 ದಿನಗಳಲ್ಲಿ ಕ್ರಮಿಸುವ ಗುರಿ ಹೊಂದಿದ್ದಾರೆ.

ಕರ್ನಾಟಕ, ಗೋವಾ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ ರಾಜ್ಯಗಳ ಮೂಲಕ ಸಾಗಿ ಪಂಜಾಬ್‌ನ ವಾಘಾ ಗಡಿಯ ಮೂಲಕ ಪಾಕಿಸ್ತಾನ ಪ್ರವೇಶಿಸಲಿದ್ದಾರೆ. ಬಳಿಕ ಇರಾನ್, ಇರಾಕ್ ಹಾಗೂ ಕುವೈತ್ ಮೂಲಕ ಪ್ರಯಾಣಿಸಿ ಕೊನೆಗೆ ಸೌದಿ ಅರೇಬಿಯಾ ಮಾರ್ಗವಾಗಿ ಅಲ್ಲಿಂದ ಮೆಕ್ಕಾ ತಲುಪಲು ಉದ್ದೇಶಿಸಿದ್ದಾರೆ. ಭಟ್ಕಳಕ್ಕೆ ನೆರೆಯ ಉಡುಪಿ ಜಿಲ್ಲೆಯ ಮೂಲಕ ಬಂದ ಅವರನ್ನು, ಗೊರ್ಟೆ ಭಾಗದಲ್ಲಿ ನೂರಾರು ಯುವಕರು ಸ್ವಾಗತಿಸಿದರು. ಪಟ್ಟಣದ ನೂರ್ ಮಸೀದಿಗೆ ಮೆರವಣಿಗೆಯಲ್ಲಿ ಕರೆದುಕೊಂಡು ಬಂದು ಸನ್ಮಾನಿಸಿದರು. ನಂತರ ಅಲ್ಲಿಂದ ಪಾದಯಾತ್ರೆ ಮುಂದುವರಿಸಿದ ಅವರೊಂದಿಗೆ ನೂರಾರು ಮಂದಿ ಜೊತೆಯಾಗಿ ಮುರುಡೇಶ್ವರ ತಲುಪಿಸಿ ವಾಪಸಾದರು. ಸಂಜೆ ಹೊನ್ನಾವರದ ಮಂಕಿಯ ಮಸೀದಿಯಲ್ಲಿ ವಾಸ್ತವ್ಯವಿದ್ದು, ಅಲ್ಲಿಂದ ಪ್ರಯಾಣ ಮುಂದಕ್ಕೆ ಸಾಗಲಿದ್ದಾರೆ.

‘ಊರಿನಲ್ಲಿ ಸೂಪರ್ ಮಾರ್ಕೆಟ್ ನಡೆಸುತ್ತಿದ್ದ ನಾನು, ಒಂದು ವರ್ಷದ ಹಿಂದೆಯೇ ಕಾಲ್ನಡಿಗೆಯ ಮೂಲಕ ಹಜ್ ಯಾತ್ರೆಗೆ ತೆರಳಲು ಸಂಕಲ್ಪ ಮಾಡಿದ್ದೆ. ಹಜ್‌ಗೆ ತೆರಳಲು ಭಾರತದಿಂದ ಐದು ದೇಶಗಳ ಪ್ರಯಾಣ ಮಾಡಬೇಕಾಗುತ್ತದೆ. 10 ಕೆ.ಜಿ ತೂಕದ ಚೀಲವನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಸಾಗುತ್ತಿದ್ದು, ನನಗೆ ಹೋದಲೆಲ್ಲಾ ಉತ್ತಮ ಸ್ವಾಗತ ಸಿಗುತ್ತಿದೆ. ಕೇರಳ ಹಾಗೂ ಕೇಂದ್ರ ಸರ್ಕಾರ ಕೂಡ ಯಾತ್ರೆಗೆ ಬೆಂಬಲ ಸೂಚಿಸಿವೆ’ ಎಂದು ಶಿಹಾಬ್ ಸಂತಸ ವ್ಯಕ್ತಪಡಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ” ಸಂಭ್ರಮದ ಸಂಸ್ಕೃತಿ ವೈಭವ “

Next Post

ಬಂಟ್ವಾಳ : ಬೈಕ್​​ಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರು ಸಾವು

Related Posts

ಮಗನನ್ನೇ ಕೊಂದು ಅಮೆರಿಕದಿಂದ ಪರಾರಿಯಾಗಿದ್ದ ತಾಯಿ! ಎಫ್‌ಬಿಐ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ ಮಹಿಳೆ ಭಾರತದಲ್ಲಿ ಬಂಧನ
ಕ್ರೈಮ್ ನ್ಯೂಸ್

ಮಗನನ್ನೇ ಕೊಂದು ಅಮೆರಿಕದಿಂದ ಪರಾರಿಯಾಗಿದ್ದ ತಾಯಿ! ಎಫ್‌ಬಿಐ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ ಮಹಿಳೆ ಭಾರತದಲ್ಲಿ ಬಂಧನ

August 22, 2025
82
79 ನೇ ಸ್ವಾತಂತ್ರ್ಯ ದಿನಾಚರಣೆ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ ಸುದ್ದಿ

79 ನೇ ಸ್ವಾತಂತ್ರ್ಯ ದಿನಾಚರಣೆ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

August 15, 2025
12
Next Post
ಬಂಟ್ವಾಳ : ಬೈಕ್​​ಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರು ಸಾವು

ಬಂಟ್ವಾಳ : ಬೈಕ್​​ಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರು ಸಾವು

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
35
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
65
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d