• About us
  • Contact us
  • Disclaimer
Sunday, June 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹಗಳನ್ನು ಹೊತ್ತ IAF ವಿಮಾನ ಇಂದು ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮನ

Coastal Times by Coastal Times
June 14, 2024
in ರಾಷ್ಟ್ರೀಯ ಸುದ್ದಿ
ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹಗಳನ್ನು ಹೊತ್ತ IAF ವಿಮಾನ ಇಂದು ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮನ
95
VIEWS
WhatsappTelegramShare on FacebookShare on Twitter

ಅಬುಧಾಬಿ: ಕುವೈತ್‌ ಮಂಗಾಫ್‌ನಲ್ಲಿ ಬೆಂಕಿ ಅವಘಡದಲ್ಲಿ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ(IAF) ವಿಮಾನ ಇಂದು ಶುಕ್ರವಾರ ಬೆಳಗ್ಗೆ 8:30ಕ್ಕೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಭಾರತೀಯ ವಾಯುಪಡೆಯ ವಿಶೇಷ ವಿಮಾನ ಸಿ-130ಜೆ ಶುಕ್ರವಾರ ಮುಂಜಾನೆ ಕೊಚ್ಚಿಗೆ ಪ್ರಯಾಣ ಬೆಳೆಸಿದೆ. ನಿನ್ನೆ ಗುರುವಾರ ಕುವೈತ್‌ಗೆ ಆಗಮಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶೀಘ್ರವೇ ಮೃತದೇಹಗಳನ್ನು ತವರೂರಿಗೆ ಕರೆತರಲು ಕ್ರಮ ಕೈಗೊಂಡಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

45 ಮಂದಿ ಮೃತರಲ್ಲಿ 31 ಮೃತದೇಹಗಳನ್ನು ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಗುತ್ತಿದೆ. ನಂತರ ವಿಮಾನವು ಉಳಿದ ಮೃತದೇಹಗಳನ್ನು ಹೊತ್ತು ದೆಹಲಿಗೆ ತೆರಳಲಿದೆ ಎಂದು ತಿಳಿದುಬಂದಿದೆ. ತಮಿಳುನಾಡಿನಿಂದ ಏಳು ಮಂದಿ ಮತ್ತು ಕರ್ನಾಟಕದ ಒಬ್ಬರ ಮೃತದೇಹಗಳನ್ನು ಕೊಚ್ಚಿಗೆ ತರಲಾಗುತ್ತಿದೆ.

ದಕ್ಷಿಣ ಭಾರತೀಯರಲ್ಲದೆ, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಗುತ್ತಿದೆ. .

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಚಿವರು ವಿಮಾನ ನಿಲ್ದಾಣದಲ್ಲಿ ಮೃತರಿಗೆ ಗೌರವ ಸಲ್ಲಿಸಲಿದ್ದಾರೆ. ನಂತರ ಮೃತದೇಹಗಳನ್ನು ಅವರವರ ಮನೆಗೆ ಸಾಗಿಸಲು ರಾಜ್ಯ ಸರ್ಕಾರ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದೆ.

ಕಟ್ಟಡದ ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕೇರಳಿಗರು:

1. ಪತ್ತನಂತಿಟ್ಟದ ಪಂದಳಂನ ಆಕಾಶ್ ನಾಯರ್

2. ಪತ್ತನಂತಿಟ್ಟದ ವಜಮುತ್ತಂನ ಮುರಳೀಧರನ್ ನಾಯರ್

3. ಪತ್ತನಂತಿಟ್ಟದ ಕೊನ್ನಿಯ ಸಾಜು ವರ್ಗೀಸ್

4. ಪತ್ತನಂತಿಟ್ಟದ ಕೀಜ್ವೈಪುರದ ಸಿಬಿನ್ ಅಬ್ರಹಾಂ

5. ಪತ್ತನಂತಿಟ್ಟದ ತಿರುವಲ್ಲಾದ ಥಾಮಸ್ ಉಮ್ಮನ್

6. ಕೊಲ್ಲಂನ ಕರವಲೂರಿನ ಸಜನ್ ಜಾರ್ಜ್

7. ಕೊಲ್ಲಂನ ವಯ್ಯಂಕರ ಶಮೀರ್ ಉಮರುದ್ದೀನ್

8. ಕೊಲ್ಲಂನ ವೆಲಿಚಿಕ್ಕಲದ ಲೂಕೋಸ್ ವಡಕ್ಕೊಟ್ಟು

9. ಕೊಲ್ಲಂನ ಪೆರಿನಾಡಿನ ಸುಮೇಶ್ ಪಿಳ್ಳೈ

10. ಕಣ್ಣೂರಿನ ಧರ್ಮದೊಳದ ವಿಶ್ವಾಸ್ ಕೃಷ್ಣ

11. ಕಣ್ಣೂರಿನ ಕಡಲಾಯಿಯ ಅನೀಶ್ ಕುಮಾರ್

12. ಕಣ್ಣೂರಿನ ಪಡಿಯೋಚ್ಚಲ್‌ನ ನಿತಿನ್ ಕೂತೂರ್

13. ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪ್ರದೀಪ್

14. ಕೊಟ್ಟಾಯಂನ ಪಂಪಾಡಿಯ ಸ್ಟೆಫಿನ್ ಅಬ್ರಹಾಂ

15. ಕೊಟ್ಟಾಯಂನ ಪೈಪ್ಪಾಡ್‌ನ ಶಿಬು ವರ್ಗೀಸ್

16. ಮಲಪ್ಪುರಂನ ಕೂಟ್ಟಾಯಿಯ ನೂಹು ಕೆ ಪಿ

17. ಮಲಪ್ಪುರಂನ ಪುಲಮಂತೋಲ್‌ನ ಎಂ ಪಿ ಬಾಹುಲೇಯನ್

18. ತಿರುವನಂತಪುರದ ನೆಡುಮಂಗಡದ ಅರುಣ್ ಬಾಬು

19. ತಿರುವನಂತಪುರದ ಎಡವದ ಶ್ರೀಜೇಶ್ ನಾಯರ್

20. ಕಾಸರಗೋಡಿನ ತೃಕ್ಕರಿಪುರದ ಕೇಲು ಪೊನ್ಮಲೇರಿ

21. ಕಾಸರಗೋಡಿನ ಚೆರ್ಕಳದ ರೆಂಜಿತ್ ಕೆ ಆರ್

22. ತ್ರಿಶೂರ್‌ನ ಚಾವಕ್ಕಾಡ್‌ನ ಬಿನೋಯ್ ಥಾಮಸ್

23. ಅಲಪ್ಪುಳದ ಚೆಂಗನ್ನೂರಿನ ಮ್ಯಾಥ್ಯೂ ಜಾರ್ಜ್

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಪೆಟ್ರೋಲ್ ಹಾಕಿದ ಮೇಲೆ ಪೇಮೆಂಟ್ ಕೇಳಿದ್ರೆ ಪ್ಯಾಂಟ್ ಬಿಚ್ಚಿ ಚಡ್ಡಿ ತೋರಿಸುತ್ತಾಳೆ ಯುವತಿ, ವಿಡಿಯೋ ವೈರಲ್!

Next Post

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

Related Posts

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರೀಯ ಸುದ್ದಿ

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
29
ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ
ರಾಷ್ಟ್ರೀಯ ಸುದ್ದಿ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
31
Next Post
ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

Discussion about this post

Recent News

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
28
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
107
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d