• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸೋಂಕಿತರು ಓಡಾಡಿದಲ್ಲಿ ಪ್ರಕರಣ ದಾಖಲು; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

Coastal Times by Coastal Times
August 14, 2021
in ತಾಜಾ ಸುದ್ದಿ
ಮಂಗಳೂರು: ಸೋಂಕಿತರು ಓಡಾಡಿದಲ್ಲಿ ಪ್ರಕರಣ ದಾಖಲು; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ
2
VIEWS
WhatsappTelegramShare on FacebookShare on Twitter

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಹಾಗೂ ಅದರ ಪಾಸಿಟಿವಿಟಿ ದರವನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

‘ಈಗಾಗಲೇ ಕೋವಿಡ್ ಬಾಧಿತರನ್ನು ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಲಾಗುತ್ತಿದೆ. ಇದನ್ನು ‍ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ನೋಡಿಕೊಳ್ಳಬೇಕು. ಸೋಂಕು ತಗುಲಿರುವವರು ಹೊರಗೆ ಓಡಾಡಿದ್ದು ಕಂಡಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಗರ್ಭಿಣಿಯರಾಗಿದ್ದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು. ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸುವುದರಿಂದ ವಿನಾಯಿತಿ ನೀಡಬೇಕಾದಲ್ಲಿ, ಅದು ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗೆ ತಿಳಿದಿರಬೇಕು ಎಂದರು.

ಸೋಂಕು ನಿರ್ವಹಣೆಯಲ್ಲಿ ಯಾವುದೇ ಕೊರತೆ ಆಗದಂತೆ ಅಗತ್ಯ ಪರಿಕರಗಳು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇರಬೇಕು. ಸೋಂಕಿತರೊಂದಿಗೆ ಸಂಪರ್ಕ ಇದ್ದವರ ಪತ್ತೆ ಕಾರ್ಯ ಮತ್ತಷ್ಟು ಚುರುಕಾಗಬೇಕು. ಅವರ ಸಂಪರ್ಕ ಪತ್ತೆ ಹಚ್ಚಲು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಬಳಸಿಕೊಳ್ಳಬಹುದು ಎಂದು ಸಲಹೆ ಮಾಡಿದರು.

ಕೋವಿಡ್ ನಿರ್ವಹಣಾ ದೃಷ್ಟಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗೆ ಅಗತ್ಯವಿದ್ದರೆ ಅನುದಾನ ಬಿಡುಗಡೆ ಮಾಡಲಾಗುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮೂಲಕ ಪತ್ರ ಬರೆದು ಅನುದಾನ ಪಡೆಯಬಹುದು. ಅದೇ ರೀತಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗೂ ಅಗತ್ಯವಿದ್ದಲ್ಲಿ ಹಣ ನೀಡಲಾಗುವುದು. ವಾರಾಂತ್ಯ ಕರ್ಫ್ಯೂ ಅನುಷ್ಠಾನದ ಬಗ್ಗೆ ಅಧಿಕಾರಿಗಳು ಕ್ಷೇತ್ರ ಕಾರ್ಯ ನಡೆಸಬೇಕು.  ಆಂಬುಲೆನ್ಸ್‌ಗಳ ಅಗತ್ಯವಿದ್ದರೆ ಅವುಗಳನ್ನು ಬಾಡಿಗೆಗೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಿಕ್ರಿಯೆಷನ್ ಕ್ಲಬ್‌ಗಳನ್ನು ಬಂದ್ ಮಾಡಲಾಗಿದೆ, ಬಾರ್ ಹಾಗೂ ಹೋಟೆಲ್‌ಗಳಲ್ಲಿ ಶೇ 50ರ ಅನುಪಾತದಲ್ಲಿ ನಿರ್ವಹಿಸಬೇಕು. ಪರಿಸ್ಥಿತಿಯ ಗಂಭೀರತೆ ಅರಿತು ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು ಎಂದರು.

ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಇಂಡಿಯನ್‌ ಐಡೋಲ್‌ ಗಾಯನ ಸ್ಪರ್ಧೆ: ಅಂತಿಮ ಸುತ್ತಿಗೆ ಮೂಡುಬಿದಿರೆಯ ನಿಹಾಲ್‌ ತಾವ್ರೋ

Next Post

ಭಾರತದ 75ನೇ ಸ್ವಾತಂತ್ರ್ಯೋತ್ಸವ: ‘ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವತ್ತ ನಮ್ಮ ಚಿತ್ತ’: ಪ್ರಧಾನಿ ನರೇಂದ್ರ ಮೋದಿ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಭಾರತದ 75ನೇ ಸ್ವಾತಂತ್ರ್ಯೋತ್ಸವ: ‘ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವತ್ತ ನಮ್ಮ ಚಿತ್ತ’: ಪ್ರಧಾನಿ ನರೇಂದ್ರ ಮೋದಿ

ಭಾರತದ 75ನೇ ಸ್ವಾತಂತ್ರ್ಯೋತ್ಸವ: 'ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವತ್ತ ನಮ್ಮ ಚಿತ್ತ': ಪ್ರಧಾನಿ ನರೇಂದ್ರ ಮೋದಿ

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
17
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
135
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d