ಮುಂಬೈ: ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂಬೈ ವಿಶೇಷ ಎನ್ ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ.
ಡ್ರಗ್ಸ್ ಕೇಸ್ ನಲ್ಲಿ 23 ವರ್ಷದ ಆರ್ಯನ್ ಖಾನ್ ಗೆ ಇಂದು ಜಾಮೀನು ನೀಡದ ಮುಂಬೈ ಸೆಷನ್ಸ್ ಕೋರ್ಟ್, ಬುಧವಾರದವರೆಗೂ ಆದೇಶವನ್ನು ಕಾಯ್ದಿರಿಸಿದ್ದು, ಮತ್ತೆ ಜೈಲಿಗೆ ಕಳುಹಿಸಿದೆ. ಅಕ್ಟೋಬರ್ 8 ರಿಂದಲೂ ಆತ ಜೈಲಿನಲ್ಲಿಯೇ ಇದ್ದಾನೆ.
ಸದ್ಯ ಮುಂಬೈಯ ಅರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಅವರನ್ನು ಎನ್ಡಿಪಿಎಸ್ ಕಾಯಿದೆಯ ಸೆಕ್ಷನ್ಗಳಾದ 27, 20(ಬಿ), 28, 29, 8(ಸಿ) ಅಡಿ ಬಂಧಿಸಲಾಗಿದೆ. ಎನ್ಸಿಬಿ ಪ್ರತಿಕ್ರಿಯೆಯಲ್ಲಿ ಕಾನೂನುಬಾಹಿರ ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಆರ್ಯನ್ ಅವರನ್ನು ಎನ್ಡಿಪಿಎಸ್ ಕಾಯಿದೆಯ ಸೆಕ್ಷನ್ 27ಎ ಅಡಿ ಬಂಧಿಸಲಾಗಿಲ್ಲ” ಎಂದು ದೇಸಾಯಿ ಅವರು ವಿಶೇಷ ನ್ಯಾಯಾಧೀಶ ವಿ ವಿ ಪಾಟೀಲ್ ಅವರ ಏಕಸದಸ್ಯ ಪೀಠದ ಮುಂದೆ ವಾದಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post