• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 12 ವರ್ಷ ಕಠಿಣ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

Coastal Times by Coastal Times
October 14, 2021
in ಕ್ರೈಮ್ ನ್ಯೂಸ್
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 12 ವರ್ಷ ಕಠಿಣ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್
53
VIEWS
WhatsappTelegramShare on FacebookShare on Twitter

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್‌ 12 ವರ್ಷಗಳ ಕಠಿಣ ಸಜೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಮೂಲತಃ ಗದಗ ಜಿಲ್ಲೆಯವನಾಗಿದ್ದು, ಕಾವೂರು ಬಳಿ ವಾಸವಾಗಿದ್ದ ಕೂಲಿ ಕಾರ್ಮಿಕ ಮಲ್ಲಿಕ್‌ ಯಾನೆ ಮಲ್ಲಿಕಾರ್ಜುನ ಹನುಮಂತಪ್ಪ (27) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು, ಈತ ಮತ್ತು ಸಂತ್ರಸ್ತೆ ಬಾಲಕಿಯ ಮನೆ ಅಕ್ಕಪಕ್ಕದಲ್ಲಿತ್ತು. ಆತ ಮತ್ತು ಸಂತ್ರಸ್ತೆಯ ತಂದೆ ಸ್ನೇಹಿತರಾಗಿದ್ದು, ಜತೆಯಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮಲ್ಲಿಕಾರ್ಜುನ ತನ್ನ ಸ್ನೇಹಿತನ ಪುತ್ರಿಯಾದ 16 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ ಪುಸಲಾಯಿಸಿ 2017ರ ಮೇ ತಿಂಗಳಿನಲ್ಲಿ ಅಪಹರಿಸಿದ್ದ. ಬಾಲಕಿ ನಾಪತ್ತೆಯಾದ ಬಗ್ಗೆ ಹೆತ್ತವರು ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಆರೋಪಿ ಗೋವಾದಲ್ಲಿ ಬಾಲಕಿಯ ಜತೆಗಿದ್ದು, ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭ ಧರಿಸಿದ್ದಳು. ಬಾಲಕಿ ಗೋವಾದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆರೋಪಿಯು ಬಾಲಕಿ ಮತ್ತು ಮಗುವನ್ನು ಬಿಟ್ಟು ಪರಾರಿಯಾಗಿದ್ದ. ಹೆತ್ತವರಿಗೆ ಈ ವಿಚಾರ ತಿಳಿಸದಂತೆ ಬೆದರಿಕೆಯನ್ನೂ ಹಾಕಿದ್ದ. ವಿಚಾರ ತಿಳಿದ ಬಾಲಕಿಯ ಹೆತ್ತವರು ಬಾಲಕಿಯನ್ನು ಆಕೆಯ ಮನೆಗೆ ಕರೆದುಕೊಂಡು ಬಂದು ಕಾವೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಅಪಹರಣ, ಅತ್ಯಾಚಾರ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಎಸಿಪಿಗಳಾದ ರಾಜೇಂದ್ರ, ಮಂಜುನಾಥ ಶೆಟ್ಟಿ ಮತ್ತು ಶ್ರೀನಿವಾಸ ಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ 6 ವರ್ಷ ಕಠಿಣ ಸಜೆ ಹಾಗೂ 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 4 ತಿಂಗಳು ಸಜೆ, ಅಪಹರಣ ನಡೆಸಿರುವುದಕ್ಕೆ ಆರು ವರ್ಷ ಕಠಿಣ ಸಜೆ ಹಾಗೂ 25 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 2 ತಿಂಗಳು ಹೆಚ್ಚುವರಿ ಸಜೆ, ಮದುವೆ ಆಗುವುದಾಗಿ ಹೇಳಿ ವಂಚಿಸಿರುವುದಕ್ಕೆ ಆರು ತಿಂಗಳು ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಜೆ, ಪೋಕ್ಸೊ ಕಾಯಿದೆಯ ಕಲಂನಡಿ 12 ವರ್ಷಗಳ ಕಠಿನ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಶ್ರೀ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಬೊಮ್ಮಾಯಿ

Next Post

ಇನ್ನೂ ತೆರೆಕಾಣದ ‘ಕೋಟಿಗೊಬ್ಬ-3’ ಸಿನಿಮಾ: ರಾಜ್ಯದೆಲ್ಲೆಡೆ ರೊಚ್ಚಿಗೆದ್ದ ಕಿಚ್ಚನ ಅಭಿಮಾನಿಗಳು

Related Posts

ಮಂಗಳೂರು: ಮದುವೆ ಹಾಲ್‌ನಿಂದ 4.97 ಲಕ್ಷ ರೂ. ಮೌಲ್ಯದ ಸೊತ್ತುಗಳಿದ್ದ ಎರಡು ಬ್ಯಾಗ್‌ ಕಳವು
ಕ್ರೈಮ್ ನ್ಯೂಸ್

ಮಂಗಳೂರು: ಮದುವೆ ಹಾಲ್‌ನಿಂದ 4.97 ಲಕ್ಷ ರೂ. ಮೌಲ್ಯದ ಸೊತ್ತುಗಳಿದ್ದ ಎರಡು ಬ್ಯಾಗ್‌ ಕಳವು

May 6, 2025
82
ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಶರಣ್​ ಪಂಪ್ವೆಲ್, ಭರತ್‌ ಕುಮ್ಡೇಲುವಿಗೆ ಜೀವ ಬೆದರಿಕೆ ; ಸುಮೊಟೋ ಪ್ರಕರಣ ದಾಖಲು

May 5, 2025
204
Next Post
ಇನ್ನೂ ತೆರೆಕಾಣದ ‘ಕೋಟಿಗೊಬ್ಬ-3’ ಸಿನಿಮಾ: ರಾಜ್ಯದೆಲ್ಲೆಡೆ ರೊಚ್ಚಿಗೆದ್ದ ಕಿಚ್ಚನ ಅಭಿಮಾನಿಗಳು

ಇನ್ನೂ ತೆರೆಕಾಣದ ‘ಕೋಟಿಗೊಬ್ಬ-3’ ಸಿನಿಮಾ: ರಾಜ್ಯದೆಲ್ಲೆಡೆ ರೊಚ್ಚಿಗೆದ್ದ ಕಿಚ್ಚನ ಅಭಿಮಾನಿಗಳು

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
40
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
90
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d