• About us
  • Contact us
  • Disclaimer
Saturday, March 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೈಕಂಪಾಡಿ: ಕೋಟ್ಯಂತರ ರೂ. ಮೌಲ್ಯದ ಕಚ್ಚಾ ಸಾಮಗ್ರಿ ಕಳವು ಪ್ರಕರಣ; ಕದ್ದ ಹಣದಲ್ಲಿ ಐಷಾರಾಮಿ ಜೀವನ, ಖದೀಮರ ಸೆರೆ

Coastal Times by Coastal Times
October 14, 2022
in ಕ್ರೈಮ್ ನ್ಯೂಸ್
ಬೈಕಂಪಾಡಿ: ಕೋಟ್ಯಂತರ ರೂ. ಮೌಲ್ಯದ ಕಚ್ಚಾ ಸಾಮಗ್ರಿ ಕಳವು ಪ್ರಕರಣ; ಕದ್ದ ಹಣದಲ್ಲಿ ಐಷಾರಾಮಿ ಜೀವನ, ಖದೀಮರ ಸೆರೆ
156
VIEWS
WhatsappTelegramShare on FacebookShare on Twitter

ಮಂಗಳೂರು: ನಗರ ಹೊರವಲಯದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈ.ಲಿ. ಕಂಪೆನಿಗೆ ಗುಜರಾತ್‌ನಿಂದ ಬರುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಪ್ಲಾಸ್ಟಿಕ್ ಕಚ್ಛಾ ಸಾಮಗ್ರಿ ಕಳವುಗೈದು ಮಾರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮೂಲತಃ ಕಡಂದಲೆಯ ಪ್ರಸ್ತುತ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿರುವ ಮಹೇಶ್ ಕುಲಾಲ್  ಯಾನೆ ಮಹೇಶ್ ರಘು ಕುಲಾಲ್ (38), ಶಕ್ತಿನಗರ ಕ್ಯಾಸಲಿನ ಕಾಲನಿ ರಸ್ತೆಯ ಅನಂತ ಸಾಗರ (39), ಕಡಂದಲೆ ಗ್ರಾಮದ ಪಟ್ಲ ಹೌಸ್‌ನ ಸಾಯಿ ಪ್ರಸಾದ್ (35),  ತಮಿಳುನಾಡಿನ  ಕಿರಣ್ ಸಮಾನಿ (53) ಬಂಧಿತ ಆರೋಪಿಗಳು.

ಬೈಕಂಪಾಡಿಯ ಬ್ರೈಟ್ ಪ್ಯಾಕೆಜಿಂಗ್ ಪ್ರೈ.ಲಿ. ಎಂಬ ಕಂಪೆನಿಯಲ್ಲಿ Polypropylene Woven Sacks ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಇದಕ್ಕೆ ಬೇಕಾದ Polypropylene ಕಚ್ಚಾ ಸರಕುಗಳನ್ನು ಗುಜರಾತ್ ನಿಂದ ಕಂಪನಿಗೆ ತರಿಸಲಾಗುತ್ತಿದ್ದು, ಕಂಪನಿಗೆ ಲಾರಿಯಲ್ಲಿ ಬರುತ್ತಿದ್ದ Polypropylene ಕಚ್ಚಾ ಸರಕುಗಳನ್ನು ಕಂಪನಿಯಲ್ಲಿ ಸ್ಟೋರ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ಕುಲಾಲ್ ಎಂಬಾತ ಕಂಪನಿಯಲ್ಲಿ ಸ್ವೀಕೃತಿಗೊಂಡಂತೆ ಪೋರ್ಜರಿ ದಾಖಲೆ ಸೃಷ್ಟಿಸಿ ಕಂಪನಿಗೆ ತಿಳಿಯದಂತೆ ಇತರರೊಂದಿಗೆ ಸೇರಿಕೊಂಡು 2019ನೇ ಡಿಸೆಂಬರ್ ತಿಂಗಳಿನಿಂದ 2022 ಜನವರಿ ತಿಂಗಳ ವರೆಗೆ ಕೋಟ್ಯಾಂತರ ಮೌಲ್ಯದ 36 ಟ್ರಕ್ ಗಳಲ್ಲಿ ಬಂದ Polypropylene ಕಚ್ಚಾ ಸರಕುಗಳನ್ನು ಕಂಪನಿಗೆ ತಿಳಿಯದಂತೆ ಬೇರೆಡೆ ಸಾಗಿಸಿದ್ದ. ಕಳವುಗೈದ ಕಚ್ಚಾ ಸರಕುಗಳನ್ನು ಸ್ನೇಹಿತನಾದ ಅನಂತ ಸಾಗರ ಎಂಬಾತನಿಗೆ ನೀಡಿದ್ದು, ಕಚ್ಚಾ ಸರಕುಗಳನ್ನು ಅನಂತ ಸಾಗರ್ ಕೆಲಸ ಮಾಡುವ ಬೈಕಂಪಾಡಿಯ ವಿಧಿ ಎಂಟರ್ ಪ್ರೈಸಸ್ ನ ಹೆಸರಿನಲ್ಲಿ ನಕಲಿ ಬಿಲ್ಲುಗಳನ್ನು ತಯಾರಿಸಿ ಅದನ್ನು ಬೆಂಗಳೂರಿನ ಹೆಚ್ಎಸ್ ಪಾಲಿಮಾರ್ ನ ಕಿರಣ್ ಸಾಮಾನಿ ಎಂಬವರಿಗೆ ಮಾರಾಟ ಮಾಡಿರುತ್ತಾರೆ. ಆರೋಪಿಗಳು ಕೋಟ್ಯಂತರ ಮೌಲ್ಯದ 36 ಲೋಡ್ ಸುಮಾರು 840 ಟನ್  Polypropylene ಕಚ್ಚಾ ಸರಕುಗಳನ್ನು ಕಂಪನಿಗೆ ಗೊತ್ತಿಲ್ಲದೆ ಕಳವು ಮಾಡಿ ಅದನ್ನು ಮಾರಾಟ ಮಾಡಿ ವಂಚಿಸಿದ್ದಾರೆ.

ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಪಣಂಬೂರು ಇನ್‌ಸ್ಪೆಕ್ಟರ್ ಸೋಮಶೇಖರ್ ನೇತೃತ್ವದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಹೇಶ್ ಕುಲಾಲ್ ಕಚ್ಚಾ ಸರಕುಗಳನ್ನು ಕಳವು ಮಾಡಿ ಮಾರಾಟ ಮಾಡಿದ ಹಣದಲ್ಲಿ ನಗರದ ವಿವಿಧ ಕಡೆಗಳಲ್ಲಿ ಜಮೀನು ಖರೀದಿಸಿದ್ದಾನೆ. ಅಲ್ಲದೆ ಕಾರುಗಳನ್ನು ಖರೀದಿಸಿ ಐಶಾರಾಮಿ ಜೀವನ ನಡೆಸುತ್ತಿದ್ದನು. ತನ್ನ ಪತ್ನಿಯ ಹೆಸರಿನಲ್ಲಿ ಬ್ಯಾಂಕ್ ನಲ್ಲಿ ಹಣ ಠೇವಣಿ ಇರಿಸಿ ಇನ್ಸೂರೆನ್ಸ್, ಶೇರು ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದ್ದಾನೆ. ಪತ್ನಿಯ ಹೆಸರಿನಲ್ಲಿ ನಗರದ 3 ಕಡೆಗಳಲ್ಲಿ ಐಷಾರಾಮಿ ಸೆಲೂನ್‌ಗಳನ್ನು ಕೂಡ ಹೊಂದಿದ್ದಾನೆ. ಅನಂತ ಸಾಗರನು ಐಷಾರಾಮಿ ಕಾರು ಖರೀದಿಸಿ, ಮನೆಯನ್ನು ಕಟ್ಟಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ  ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ 6 ಮೊಬೈಲ್ ಪೋನ್‌ಗಳು, 4 ಲ್ಯಾಪ್‌ಟಾಪ್‌ಗಳು, 1 ಕಂಪ್ಯೂಟರ್, ಮಹೇಶ್ ಕುಲಾಲ್‌ನ ಹುಂಡೈ ಕಂಪೆನಿಯ  2 ಬೆಲೆಬಾಳುವ ಕಾರುಗಳು, ಅನಂತ ಸಾಗರ್‌ನಿಂದ ಕಿಯಾ ಕಂಪನಿಯ 1 ಕಾರು, ಟಾಟಾ ಕಂಪೆನಿಯ 1 ಲಾರಿಯನ್ನು ವಶಪಡಿಸಲಾಗಿದೆ. ಇವುಗಳ ಮೌಲ್ಯ ಸುಮಾರು 74 ಲಕ್ಷ ರೂ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಬಿಜೈ ಕೆನರಾ ಬ್ಯಾಂಕ್ ಮಹಿಳಾ ಮ್ಯಾನೇಜರ್ ಆತ್ಮಹತ್ಯೆ ; ಅಧಿಕಾರಿಗಳ ಕಿರುಕುಳ ಶಂಕೆ

Next Post

ಸುರತ್ಕಲ್ ಅಕ್ರಮ ಟೋಲ್‌ಗೇಟ್ ಸುಲಿಗೆ ಬಿಜೆಪಿ ಆಡಳಿತದ ಜನದ್ರೋಹ ಬಹಿರಂಗ : ಮುನೀರ್ ಕಾಟಿಪಳ್ಳ ಆರೋಪ

Related Posts

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ
ಕ್ರೈಮ್ ನ್ಯೂಸ್

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
16
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
31
Next Post
ಸುರತ್ಕಲ್ ಅಕ್ರಮ ಟೋಲ್‌ಗೇಟ್ ಸುಲಿಗೆ ಬಿಜೆಪಿ ಆಡಳಿತದ ಜನದ್ರೋಹ ಬಹಿರಂಗ : ಮುನೀರ್ ಕಾಟಿಪಳ್ಳ ಆರೋಪ

ಸುರತ್ಕಲ್ ಅಕ್ರಮ ಟೋಲ್‌ಗೇಟ್ ಸುಲಿಗೆ ಬಿಜೆಪಿ ಆಡಳಿತದ ಜನದ್ರೋಹ ಬಹಿರಂಗ : ಮುನೀರ್ ಕಾಟಿಪಳ್ಳ ಆರೋಪ

Discussion about this post

Recent News

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
16
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್ ಕ್ರಿಮಿನಲ್ ಉಳ್ಳಾಲದ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d