ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಶಾಸಕ ಹರೀಶ್ ಪೂಂಜಾ ಅವರ ಕಾರು ಚಾಲಕ ನವೀನ್ ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ. ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ, ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿದ್ದರು. ಆಗ ಪಡೀಲ್ನಿಂದ ಕಾರು ಬೆನ್ನಟ್ಟಿದ್ದ ದುಷ್ಕರ್ಮಿಗಳ ತಂಡ, ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವ್ಯಾಚ್ಯವಾಗಿ ಬೈದು ತಲ್ವಾರ್ ಝಳಪಿಸಿ ಪರಾರಿಯಾಗಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಕಾರಿನಲ್ಲಿ ಪ್ರಯಾಣಿಸುತ್ತಿರಲಿಲ್ಲ. ಅವರು ಸಂಬಂಧಿಕರೊಬ್ಬರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Discussion about this post