• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್

Coastal Times by Coastal Times
November 14, 2023
in ಕೋಸ್ಟಾಲ್ ಟೈಮ್ಸ್ ವಿಶೇಷ
ಉಡುಪಿ: ನಾಲ್ವರ ಹತ್ಯೆ ಪ್ರಕರಣ – ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್
137
VIEWS
WhatsappTelegramShare on FacebookShare on Twitter

ಉಡುಪಿ: ಸಂತೆಕಟ್ಟೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಪೋನ್ ಕರೆ ಮೂಲಕ ಧೈರ್ಯ ನೀಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂದಿಸಿ ಜನರನ್ನು ಭಯದಿಂದ ಮುಕ್ತಿಗೊಳಿಸಿ. ಸ್ಥಳೀಯರು ಈ ಘಟನೆಯ ಬಳಿಕ ದೀಪಾವಳಿಯನ್ನು ಕೂಡಾ ಆಚರಣೆ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರಲ್ಲಿ ನೂರ್ ಮಹಮ್ಮದ್ ಅವರು ಮನವಿ ಮಾಡಿಕೊಂಡಿದ್ದಾರೆ. ಇನ್ನು ಗೃಹ ಸಚಿವ ಪರಮೇಶ್ವರ್ ಅವರು ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿ, ನೂರ್ ಮಹಮ್ಮದ್ ಅವರಿಗೆ ಧೈರ್ಯ ನೀಡಿದ್ದಾರೆ.

ನಮ್ಮಲ್ಲಿ ಯಾವುದೇ ಕೌಟುಂಬಿಕ ಕಲಹ ಇರಲಿಲ್ಲ. ಈ ಬಗ್ಗೆ ಯಾವುದೇ ವಿವಾದಗಳು ಬೇಡ. ನನ್ನ ಕುಟುಂಬಕ್ಕೆ ಭಯವಿತ್ತು ಎನ್ನುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನ್ನ ಪಕ್ಕದ ಮನೆಯವರಿಗೂ ನಿಲ್ಲಲು ಭಯವಾಗುತ್ತಿದೆ. ನನ್ನ ಮಗನನ್ನು ಒಬ್ಬನೇ ಬಿಡಲು ಭಯವಾಗುತ್ತಿದೆ. ನಮ್ಮ ಹಿಂದೆ ಯಾರಿದ್ದಾರೆ ನನಗೆ ಗೊತ್ತಾಗುತ್ತಿಲ್ಲ ಎಂದು ಉಡುಪಿಯ ನೇಜಾರಿನಲ್ಲಿ ಕಳೆದ ರವಿವಾರ ನಡೆದ ಕೊಲೆಯಲ್ಲಿ ಕುಟುಂಬವನ್ನು ಕಳೆದುಕೊಂಡ ನೂರ್ ಮೊಹಮ್ಮದ್ ಹೇಳಿದರು.

ನೂರ್ ಮೊಹಮ್ಮದ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ “15 ವರ್ಷ ನನ್ನ ಕುಟುಂಬ ರಿಯಾದ್ ನಲ್ಲಿ ಇತ್ತು. ರಂಜಾನ್ ಸಂದರ್ಭದಲ್ಲಿ ಉಮ್ರಾ ಮಾಡಿ ಬಂದಿದ್ದೆವು. ಮುಂದಿನ 15 ದಿನದಲ್ಲಿ ಮತ್ತೆ ರಿಯಾದಿಗೆ ಬರಲು ಸಿದ್ದತೆ ನಡೆಸಿದ್ದರು. ನಾನು ತುಂಬಾ ತುರ್ತಾಗಿ ಬಂದಿದ್ದೇನೆ. ಕೊಲೆಯಾದ ದಿನ ನಾನು ಮನೆಗೆ ಕರೆ ಮಾಡಿದೆ. ನಂತರ ಈ ದುರ್ಘಟನೆ ಬಗ್ಗೆ ತಿಳಿಯಿತು. ಅಲ್ಲಿ ಮ್ಯಾನೇಜರ್ ನ ನೆರವು ಪಡೆದು ಬಂದಿದ್ದೇನೆ. ನನಗೆ ಇಬ್ಬರನ್ನು ಭದ್ರತೆಗಾಗಿ ಕೊಟ್ಟು ಕಳುಹಿಸಿದ್ದರು” ಎಂದರು.

ನನ್ನ ಚಿಕ್ಕ ಮಗಳು ಏರ್ ಇಂಡಿಯಾದಲ್ಲಿ ಸಿಬ್ಬಂದಿಯಾಗಿದ್ದಾಳೆ. 11 ಗಂಟೆಗೆ ಆಕೆ ವಿಮಾನ ಹಿಡಿಯಬೇಕಾಗಿತ್ತು. ದೊಡ್ಡ ಮಗಳು ಪಿಜಿ ಮಾಡುತ್ತಿದ್ದಳು. ನನ್ನ ಮಗನಿಗೆ ಮದುವೆ ಮಾಡಿ ಈ ಮನೆಯನ್ನು ಬಿಟ್ಟುಕೊಡಬೇಕು ಎಂದಿದ್ದೆ. ಮಗಳಿಗೂ ಮದುವೆ ಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದ್ದೆ. ಆದಷ್ಟು ಬೇಗ ಈ ಪ್ರಕರಣವನ್ನು ಇತ್ಯರ್ಥ ಮಾಡಿಕೊಡಿ ಎಂದು ಸರಕಾರದ ಜೊತೆ ಕಳಕಳಿಯಿಂದ ವಿನಂತಿ ಮಾಡುತ್ತೇನೆ. ಈ ಕೃತ್ಯ ಮಾಡಿದ ಅಪರಾಧಿಯನ್ನು ಕೂಡಲೇ ಹಿಡಿಯಬೇಕು. ಈ ಪರಿಸರದ ಜನರು ನಂತರ ನೆಮ್ಮದಿಯಿಂದ ಇರಬಹುದು ಎಂದು ನೂರ್ ಮೊಹಮ್ಮದ್ ಹೇಳಿದರು.

ಹಣಕಾಸಿನ ಸಮಸ್ಯೆ ವಿಚಾರದ ಬಗ್ಗೆ ನಾನು ಸಾರ್ವಜನಿಕವಾಗಿ ಏನು ಹೇಳಲು ಸಾಧ್ಯವಿಲ್ಲ. ನನಗೆ ಏನಾದರೂ ನಷ್ಟವಾಗಿದ್ದರೆ ಅದು ನನ್ನ ನಷ್ಟ. ಈ ಬಗ್ಗೆ ಜನರಿಗೆ ಹೇಳುವುದಿಲ್ಲ. ಎಲ್ಲ ವಿಚಾರಗಳನ್ನು ತನಿಖಾ ಅಧಿಕಾರಿಗೆ ಹೇಳಿದ್ದೇನೆ ಎಂದರು. ನನ್ನ ತಾಯಿಗೆ ಏನು ಕೇಳಿದರೂ ಹೇಳುವ ಸ್ಥಿತಿಯಲ್ಲಿಲ್ಲ. ಆಕೆಗೆ ವಯಸ್ಸಾಗಿದೆ. ನಾನು ಅವರನ್ನು ಸ್ವಂತ ಮನೆಗೆ ಕಳುಹಿಸಿಕೊಟ್ಟಿದ್ದೇನೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದರು.

ಪೊಲೀಸರ ತನಿಖೆಗೆ ನಾನು ಸಂಪೂರ್ಣ ಸಹಕಾರ ಕೊಡುತ್ತೇನೆ. ತನಿಖಾಧಿಕಾರಿಗಳು ನಮಗೆ ಸಂಪೂರ್ಣ ಭರವಸೆ ಕೊಟ್ಟಿದ್ದಾರೆ. ಕುಟುಂಬದ ಬಳಿ ಇರುವ ಎಲ್ಲ ಮಾಹಿತಿಗಳನ್ನು ಹಂಚಿಕೊಂಡಿದ್ದೇವೆ. ನಾಲ್ಕು ಫೋನ್ ಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ನನ್ನ ಮತ್ತು ಮಗನ ಫೋನನ್ನು ಪೊಲೀಸರು ತಪಾಸಣೆ ಮಾಡಿ ವಾಪಸ್ ಕೊಟ್ಟಿದ್ದಾರೆ. ಫೋನ್ ಗಳಲ್ಲಿ ಕೆಲವು ಮಾಹಿತಿಗಳು ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ನೂರ್ ಮೊಹಮ್ಮದ್ ಅವರು ಹೇಳಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ; ಆರೋಪಿಗೆ ಮರಣ ದಂಡನೆ ವಿಧಿಸಿದ ಪೋಕ್ಸೊ ಕೋರ್ಟ್

Next Post

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ

Related Posts

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
ಕೋಸ್ಟಾಲ್ ಟೈಮ್ಸ್ ವಿಶೇಷ

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

June 25, 2025
167
ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ
ಕೋಸ್ಟಾಲ್ ಟೈಮ್ಸ್ ವಿಶೇಷ

ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

March 15, 2025
73
Next Post
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d