ಮಂಗಳೂರು: ಯುವಕನೋರ್ವ ಮನೆ ಪಕ್ಕದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲ್ ನ ಕೊಡಕ್ಕಲ್ ಎಂಬಲ್ಲಿ ನಡೆದಿದೆ. ಶ್ರವಣ್ ರಾಜ್ ಕಂಬ್ಳಿ (23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಶ್ರವಣ್ರಾಜ್ ಕಂಬಳಿ (23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶ್ರವಣ್ರಾಜ್ ಶುಕ್ರವಾರ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದರು ಎನ್ನಲಾಗಿದೆ. ಸಂಜೆ ವೇಳೆ ಮನೆಯಿಂದ ಹೊರಗೆ ಹೋಗಿದ್ದು, ರಾತ್ರಿಯಾದರೂ ವಾಪಸ್ ಬಂದಿರಲಿಲ್ಲ. ಸ್ನೇಹಿತರೊಂದಿಗೆ ಇರಬಹುದು ಎಂದು ಮನೆ ಮಂದಿ ಭಾವಿಸಿದ್ದರು. ಆದರೆ ಬೆಳಗ್ಗೆಯಾದರೂ ಬಾರದ ಕಾರಣ ಹುಡುಕಾಟ ನಡೆಸಿದಾಗ ಮನೆಯ ಪಕ್ಕದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಂಕನಾಡಿ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post