• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

Coastal Times by Coastal Times
January 15, 2026
in ಕರಾವಳಿ
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ
24
VIEWS
WhatsappTelegramShare on FacebookShare on Twitter

ಮಂಗಳೂರು: ಜ 13 ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶನದಲ್ಲಿ ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಆಯೋಜಿಸಲಾದ “ಬಾಲ ಭಜನ ವೈಭವ” ಮಕ್ಕಳ ಭಜನಾ ಸ್ಪರ್ಧಾಕೂಟದ ಅಂತಿಮ ಸುತ್ತು ಭಕ್ತಿ, ಶ್ರದ್ಧೆ ಮತ್ತು ಸಂಗೀತ ಸಂಸ್ಕಾರದ ಅಪೂರ್ವ ಸಂಗಮವಾಗಿ ನಡೆಯಿತು.

ಡಿಸೆಂಬರ್ 19 , 20,21 ರಂದು ನಡೆದ ಪ್ರಥಮ ಸುತ್ತಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವಿವಿಧ ಭಾಗಗಳಿಂದ ಭಾಗವಹಿಸಿದ್ದ ಮಕ್ಕಳ ಭಜನಾ ತಂಡಗಳ ಪೈಕಿ ಆಯ್ಕೆಯಾದ ತಂಡಗಳು ಅಂತಿಮ ಸುತ್ತಿನಲ್ಲಿ ತಮ್ಮ ಶ್ರೇಷ್ಠ ಭಕ್ತಿಗಾನವನ್ನು ಪ್ರದರ್ಶಿಸಿವೆ.

ಕಾರ್ಯಕ್ರಮವನ್ನು ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಲಾಯಿತು. ಕಾಶಿ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮಿಜಿಗಳು ಭಜನಾ ತಂಡಗಳಿಗೆ ಫಲಮಂತ್ರಾಕ್ಷತೆಯನ್ನು ಕೊಟ್ಟು ಆಶೀರ್ವದಿಸಿದರು.
ಅಂತಿಮ ಸುತ್ತಿನ ಸ್ಪರ್ಧೆಗಳಿಗೆ ಖ್ಯಾತ ಸುಗಮ ಸಂಗೀತ ಗಾಯಕ ಹಾಗೂ ಭಕ್ತಿ ಸಂಗೀತ ಕ್ಷೇತ್ರದ ಅನುಭವೀ ಕಲಾವಿದ ಪುತ್ತೂರು ನರಸಿಂಹ ನಾಯಕ್, ಶಾಸ್ತ್ರೀಯ ಸಂಗೀತ ಗಾಯಕಿ ಡಾ ಚೇತನ ಆಚಾರ್ಯ, ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೀಮತಿ ಸಂಗೀತ ಬಾಲಚಂದ್ರ ತೀರ್ಪುಗಾರರಾಗಿದ್ದರು. ಮಕ್ಕಳ ಭಕ್ತಿ, ರಾಗಬದ್ಧತೆ, ಲಯ ಮತ್ತು ತಂಡಶಿಸ್ತು ಆಧಾರದಲ್ಲಿ ತೀರ್ಪು ನೀಡಲಾಯಿತು.

ಕಾರ್ಯಕ್ರಮಕ್ಕೆ IRE-TEX ಪ್ರೈವೇಟ್ ಲಿಮಿಟೆಡ್, ಐಡಿಯಲ್ ಐಸ್ ಕ್ರೀಮ್, ಹ್ಯಾಂಗ್ಯೋ ಐಸ್ ಕ್ರೀಮ್, ತ್ರಾಯಿ ಜುವೆಲ್ಲರ್ಸ್, ರತ್ನ ಸಾಗರ್ ಪಬ್ಲಿಕೇಶನ್, ಶ್ರೀ ರಾಮ್ ಪೇಂಟ್ಸ್ ಅಂಡ್ ಹಾರ್ಡ್ವೇರ್, ಅಮೋಘ ಗಾರ್ಮೆಂಟ್ಸ್, ಎಲ್ ವಿ ಸಿಲ್ಕ್ಸ್ ಅಂಡ್ ಸೂಟ್ಸ್ ಸೇರಿದಂತೆ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಪ್ರಾಯೋಜಕರಾಗಿ ಸಹಕಾರ ನೀಡಿದವು.

ಕೆನರಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಡಿ ವಾಸುದೇವ ಕಾಮತ್ , ಉಪಾಧ್ಯಕ್ಷ ಶ್ರೀ ಕೆ ಸುರೇಶ್ ಕಾಮತ್, ಕಾರ್ಯದರ್ಶಿ ರಂಗನಾಥ ಭಟ್, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಸಂಚಾಲಕ ನರೇಶ್ ಶೆಣೈ, ಸದಸ್ಯ ಶ್ರೀ ವಿಕ್ರಂ ಪೈ, ಶ್ರೀಯೋಗೀಶ್ ಕಾಮತ್ ,ನಮ್ಮ ಕುಡ್ಲ ಚಾನೆಲ್ ನ ಶ್ರೀ ಲೀಲಾಕ್ಷ ಕರ್ಕೇರ, ಕೆನರಾ ಮ್ಯೂಸಿಯಂ ನ ನಿರ್ದೇಶಕ ಪಯ್ಯನೂರು ರಮೇಶ್ ಪೈ, IRE-TEX ಸಂಸ್ಥೆಯ ಮಾಲೀಕರಾದ ಜಿ ಜಿ ಪೈ, ಶ್ರೀಮತಿ ಲತಿಕಾ ಪೈ, ಕೆನರಾ ಸಂಸ್ಥೆಯ PRO ಶ್ರೀಮತಿ ಉಜ್ವಲ್ ಮಲ್ಯ, ಮುಂತಾದವರು ಉಪಸ್ಥಿತರಿದ್ದರು.

ಬಾಲ ಮನಸ್ಸುಗಳಲ್ಲಿ ಭಕ್ತಿ, ಸಂಸ್ಕಾರ ಮತ್ತು ಭಾರತೀಯ ಸಂಗೀತ ಪರಂಪರೆಯನ್ನು ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಲಾದ ಈ ಬಾಲ ಭಜನ ವೈಭವವು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಂಡಿತು. ಕೆನರಾ ಬಾಲ ಭಜನ ವೈಭವ ಸ್ಪರ್ಧಾಕೂಟದ ಪ್ರಥಮ ಬಹುಮಾನ ಧ್ಯಾನ್ ಸಂಗೀತ ಅಕಾಡೆಮಿ ಮಂಗಳೂರು, ದ್ವಿತೀಯ ಬಹುಮಾನ ಕೆನರಾ ಹೈಸ್ಕೂಲ್ ಸಿಬಿಎಸ್ ಇ, ಹಾಗೂ ತೃತೀಯ ಬಹುಮಾನವನ್ನು ಭಕ್ತಿ ವಿಕಾಸ ಪಿತ್ರೋಡಿ ಉದ್ಯಾವರ ಇವರ ತಂಡ ಗೆದ್ದುಕೊಂಡಿತು. ಶ್ರೇಷ್ಠ ಹಾರ್ಮೋನಿಯಂ ವಾದಕ ಪ್ರಶಸ್ತಿಯನ್ನು ನಿಖಿಲ್ ಕಾಮತ್, ಶ್ರೇಷ್ಠ ತಬಲವಾದಕ ಪ್ರಶಸ್ತಿಯನ್ನು ಶುಭಂ ಪಡೆದುಕೊಂಡರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ನಗರಕ್ಕೆ ಹೆದ್ದಾರಿಯನ್ನು 6-ಲೇನ್ ಗೆ ವಿಸ್ತರಿಸುವ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

Next Post

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

Related Posts

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ
ಕರಾವಳಿ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
31
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ
ಕರಾವಳಿ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
60
Next Post
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

Discussion about this post

Recent News

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
31
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ತೀವ್ರ ಗಾಯ

April 25, 2026
ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d