• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಣಚೂರು ಮೋನು, ರಾಮಕೃಷ್ಣ ಆಚಾರ್‌, ಎಂಬಿ ಪುರಾಣಿಕ್‌ಗೆ ಮಂಗಳೂರು ವಿ.ವಿ ಗೌರವ ಡಾಕ್ಟರೇಟ್‌

Coastal Times by Coastal Times
March 15, 2023
in ಕರಾವಳಿ
ಕಣಚೂರು ಮೋನು, ರಾಮಕೃಷ್ಣ ಆಚಾರ್‌, ಎಂಬಿ ಪುರಾಣಿಕ್‌ಗೆ ಮಂಗಳೂರು ವಿ.ವಿ ಗೌರವ ಡಾಕ್ಟರೇಟ್‌
32
VIEWS
WhatsappTelegramShare on FacebookShare on Twitter

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಕುಂದಾಪುರದ ಉದ್ಯಮಿ ರಾಮಕೃಷ್ಣ ಆಚಾರ್ ಮತ್ತು ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.

ಕಣಚೂರು ಮೋನು : ಕಣಚೂರು ಗ್ರೂಪ್‌ ಆಫ್ ಇಂಡಸ್ಟ್ರೀಸ್‌ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಯು.ಕೆ.ಮೋನು 2002ರಲ್ಲಿ ಕಣಚೂರು ಅಕಾಡೆಮಿ ಆಫ್‌ ಜನರಲ್‌ ಎಜುಕೇಷನ್‌ ಸಂಸ್ಥೆ ಸ್ಥಾಪಿಸಿ ಸ್ಥಳೀಯ ಮಹಿಳೆಯರು ಹಾಗೂ ಬಡವಿಗೆ ಗುಣಮಟ್ಟದ ಶಿಕ್ಷಣಕ್ಕೆ ನೆರವಾಗಿದ್ದಾರೆ. ಈ ಅಕಾಡೆಮಿಯು ಕಣಚೂರು ಪಬ್ಲಿಕ್‌ ಸ್ಕೂಲ್‌, ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜು, ಕಣಚೂರು ಉದ್ಯಮಾಡಳಿತ ಮತ್ತು ವಿಜ್ಞಾನ ಸಂಸ್ಥೆ, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಣಚೂರು ಫಿಸಿಯೋಥೆರಪಿ ಕಾಲೇಜು, ಕಣಚೂರು ನರ್ಸಿಂಗ್‌ ವಿಜ್ಞಾನ ಕಾಲೇಜು, ಕಣಚೂರು ಆರೋಗ್ಯ ವಿಜ್ಞಾನಗಳ ಸಂಸ್ಥೆ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳನ್ನು ಒಳಗೊಂಡಿದೆ. ಸಯ್ಯದ್‌ ಮದನಿ ಚಾರಿಟಬಲ್‌ ಟ್ರಸ್ಟ್‌ ಮತ್ತು ಉಳ್ಳಾಲ ದರ್ಗಾ ಅಸೋಸಿಯೇಷನ್‌ ಅಧ್ಯಕ್ಷರೂ ಆಗಿದ್ದ ಯು.ಕೆ.ಮೊನು ಅವರು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ. ಯು.ಕೆ.ಮೋನು ಬಿಜಿನೆಸ್‌ ವೆಂಚರ್‌ ಮೂಲಕ ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನೇಕರಿಗೆ ನೆರವಾಗಿದ್ದಾರೆ. ಉಚಿತ ವಿವಾಹ, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕವೂ ಬಡವರಿಗೆ ನೆರವಾಗಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಜಿ.ರಾಮಕೃಷ್ಣ ಆಚಾರ್‌: ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯ ಬಡಕುಟುಂಬದಲ್ಲಿ ಜನಿಸಿದ ಜಿ.ರಾಮಕೃಷ್ಣ ಆಚಾರ್‌, ಕುಟುಂಬವನ್ನು ಪೊರೆಯಲು ಬಾಲ್ಯದಲ್ಲಿ ಅರ್ಧದಲ್ಲೇ ಶಿಕ್ಷಣ ತೊರೆದು ಫ್ಯಾಬ್ರಿಕೇಷನ್‌ ವರ್ಕ್‌ಶಾಪ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಹದಿಹರೆಯದಲ್ಲೇ  ಪ್ಯಾಬ್ರಿಕೇಷನ್‌  ಕೆಲಸದಲ್ಲಿ ಪರಿಣಿತರಾಗಿ ಹೊರಹೊಮ್ಮಿದ್ದರು. ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ತರಬೇತಿ ಪಡೆದು ತಾಂತ್ರಿಕ ಜ್ಞಾನವನ್ನು ಸುಧಾರಿಸಿಕೊಂಡರು. ಕೇವಲ ರೂ.25ಸಾವಿರ ಬಂಡವಾಳದಲ್ಲಿ ಫ್ಯಾಬ್ರಿಕೇಷನ್‌  ಕಂಪನಿ ಆರಂಭಿಸಿದರು. ಕೃಷಿ, ನೀರಿನ ನಿರ್ವಹಣೆ, ಕೊಳಚೆ ನೀರು ಶುದ್ಧೀಕರಣವೂ ಸೇರಿದಂತೆ ವಿವಿಧ ರಂಗಗಳಲ್ಲಿ ಫ್ರಾಬ್ರಿಕೇಷನ್‌ ಉದ್ಯಮವನ್ನು ನಡೆಸುತ್ತಿರುವ ಅವರು ವಾರ್ಷಿಕ ರೂ. 250 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದ್ದಾರೆ.  ಕೌಶಲಯುಕ್ತ ಹಾಗೂ ಅರೆ ಕೌಶಲಯುಕ್ತ ಕಾರ್ಮಿಕರು ಸೇರಿ 3000ಕ್ಕೂ ಅಧಿಕ ಮಂದಿಗೆ ಉದ್ಯೋಗ ಒದಗಿಸಿದ್ದಾರೆ. 1990ರಲ್ಲಿ ಅವರು ರೂಪಿಸಿದ ಭತ್ತ ಸಂಸ್ಕರಣಾ ಘಟಕವು ಗುಣಮಟ್ಟದ ಅಕ್ಕಿ ಉತ್ಪಾದನೆಗೆ ಕೊಡುಗೆ ನೀಡಿದೆ. ವಿಶ್ವದ ವಿವಿಧ ದೇಶಗಳು ಇವರ ಕಂಪನಿಯ ಉಪಕರಣಗಳನ್ನೇ ಖರೀದಿಸುತ್ತಿವೆ. ಅಕ್ಕಿಯು ತೇವಾಂಶ ಹೀರಿಕೊಂಡು ವ್ಯರ್ಥವಾಗುವುದನ್ನು ಈ ಯಂತ್ರವು ತಪ್ಪಿಸಿದೆ.ಇದರಿಂದಾಗಿ ಪ್ರತಿ ಋತುವಿನಲ್ಲೂ ರೂ.100 ಕೋಟಿ ಮೌಲ್ಯದಷ್ಟು ಅಕ್ಕಿ ವ್ಯರ್ಥವಾಗುವುದು ತಪ್ಪಿದೆ.  ಇವರ ಸಂಶೋಧನೆಯ ಫಲವಾಗಿ ಸಾಮಾನ್ಯ ಅಕ್ಕಿಯು ಉತ್ತಮ ಸ್ವಾದ ಹಾಗೂ ರುಚಿಯನ್ನು ಹೊಂದುವಂತಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ,

ಪ್ರಧಾನಿ ನರೇಂದ್ರ ಮೋದಿ ಅವರ ಸುಜಲಾ ಕಾರ್ಯಕ್ರಮದ ಆಶಯದಂತೆ ಎಲ್ಲ ನಾಗರಿಕರಿಗೂ ಶುದ್ಧ ಕುಡಿಯುವ ನೀರು ಪೂರೈಸಲು ರಾಮಕೃಷ್ಣ ಆಚಾರ್‌ ಅವರು ಈ ಯಂತ್ರದಲ್ಲಿ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಅಳವಡಿಸಿದ್ದಾರೆ. ಅಗ್ಗದ ದರದಲ್ಲಿ ಪೂರೈಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಈ ಯಂತ್ರಗಳು ಮನೆ ಮಾತಾಗಿವೆ. ಪ್ಲಾಸ್ಟಿಕ್‌ ಬಾಟಲಿಗಳ ಬಳಕೆ ಕಡಿಮೆ ಮಾಡುವುದಕ್ಕೂ ಕೊಡುಗೆ ನೀಡಿವೆ. ಇವರ ಕಂಪನಿಯ ಬೇರೆ ಬೇರೆ ಮಾದರಿಯ ಕೊಳಚೆ ನೀರು ಶುದ್ಧೀಕರಣ ಯಂತ್ರಗಳು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊಳಚೆ ನೀರು ಶುದ್ಧೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.  ಸಂಪೂರ್ಣ ಸ್ವಯಂಚಾಲಿತ ಯಂತ್ರಗಳು ಮಾನವ ಶ್ರಮ ಇಲ್ಲದೆಯೇ ಕಾರ್ಯನಿರ್ವಹಿಸುವ ತಾಂತ್ರಿಕತೆಯನ್ನು ಹೊಂದಿವೆ. ಮನೆ, ಮನೆಗಳ ಸಮೂಹದಲ್ಲೂ ಬಳಸುವಂತ ಪುಟ್ಟ ಮಾದರಿಗಳೂ ಲಭ್ಯ. ಮೂಡುಬಿದಿರೆ ಬನ್ನಡ್ಕದಲ್ಲಿ ಇವರು ಆರಂಭಿಸಿದ ಕೈಗಾರಿಕಾ ತರಬೇತಿ ಸಂಸ್ಥೆ ಗ್ರಾಮೀಣ ಯುವಜನರಿಕೆ ತಾಂತ್ರಿಕ ಶೀಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಪ್ರೊ.ಎಂ.ಬಿ.ಪುರಾಣಿಕ್‌: ಜನಹಿತಕಾರಿ, ದೂರದೃಷ್ಟಿಯುಳ್ಳ ಶಿಕ್ಷಣತಜ್ಞ, ಉದ್ಯಮಿ, ಸಾಮಾಜಿಕ ಕರ್ಯಕರ್ತ ಹಾಗೂ ರಾಷ್ಟ್ರೀಯವಾದಿ ಚಿಂತನೆಯ ರಾಜಕಾರಣಿಯಾಗಿರುವ ಎಂ.ಬಿ.ಪುರಾಣಿಕ್‌ 34 ವರ್ಷ ಕಾಲ ಪ್ರಾಧ್ಯಾಪಕರಾಗಿ, ಸಸ್ಯವಿಜ್ಞಾನ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದವರು.  ಕೃಷಿ, ಹೈನುಗಾರಿಕೆಯಲ್ಲೂ ನಿರತರಾಗಿದ್ದಾರೆ.  ಮಂಗಳಾ ಸೇವಾ ಸಮಿತಿ ಟ್ರಸ್ಟ್‌ನ (ಬಾಲ ಸಂರಕ್ಷಣಾ ಕೇಂದ್ರ ಕುಟ್ರಪ್ಪಾಡಿ) ಅಧ್ಯಕ್ಷ. ಫಜೀರ್‌ನ ಗೋವನಿಯತಾಶ್ರಯ ಟ್ರಸ್ಟ್‌ ಅರಂಭಿಸಿರುವ ಅವರು ಅಲ್ಲಿ 400ಕ್ಕೂ ಹೆಚ್ಚು ಜಾನುವಾರುಗಳಿಗೆ ಆಶ್ರಯ ನೀಡಿದ್ದಾರೆ.  ಆರ್ಥಿಕವಾಗಿ ದುರ್ಬಲರಾಗಿರುವ ಅಂಗವಿಕಲರಿಗೆ ಶಿಕ್ಷಣ ನೀಡುವ ಆರ್‌ಸಿಪಿಎಚ್‌ಡಿ ಟ್ರಸ್ಟ್‌ನ ಅಧ್ಯಕ್ಷ. ವಿಶ್ವಹಿಂದೂ ಪರಿಷತ್‌ನ  ಕರ್ನಾಟಕ ಪ್ರಾಂತದ ಕಾರ್ಯಾಧ್ಯಕ್ಷರೂ ಆಗಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸಕ್ರಿಯರಾಗಿದ್ದ ಅವರು, ವಿಭಾಗ ಸಂಘಚಾಲಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್‌ನ ರಾಜ್ಯ ಸಮಿತಿ ಸದಸ್ಯರಾಗಿ, ಗೋಸೇವಾ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪಚ್ಚನಾಡಿಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ, ಸ್ಥಳದಲ್ಲಿ ಆವರಿಸಿದ ದಟ್ಟ ಹೊಗೆ, ಆಸುಪಾಸಿನ ನಿವಾಸಿಗಳಲ್ಲಿ ಆತಂಕ

Next Post

ತಾಯಿಯ ಗರ್ಭದಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್‌ ವೈದ್ಯರು

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ತಾಯಿಯ ಗರ್ಭದಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್‌ ವೈದ್ಯರು

ತಾಯಿಯ ಗರ್ಭದಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್‌ ವೈದ್ಯರು

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d