ಮಂಗಳೂರು: ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಯ ಸಂಪೂರ್ಣ ವಿವರ: ಸತೀಶ್ ಕುಮಾರ್ ಕೆ.ಎಂ. ಎಂಬ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ನಮ್ಮ ನೆರೆಮನೆಯವರಾಗಿದ್ದು, ನನ್ನ ಜೊತೆ ಪೂರ್ವದ್ವೇಷವಿತ್ತು. ಅವರು ಸದಾಕಾಲ ನನ್ನ ಜೊತೆ ಜಗಳ ತೆಗೆದು ಗಲಾಟೆ ಮಾಡುತ್ತಿದ್ದರು. ಮಾ.13ರಂದು ಬೆಳಗ್ಗೆ 8.15ರ ಸುಮಾರಿಗೆ ಬಿಜೈ ಕಾಪಿಕಾಡ್ನ 6ನೇ ಮುಖ್ಯರಸ್ತೆಯಲ್ಲಿ ಬೈಕ್ನಲ್ಲಿ ನಾನು ಮನೆಯಿಂದ ಹೊರಹೋಗುವಾಗ ಸತೀಶ್ ಕುಮಾರ್ ಕಾದು ಕುಳಿತು, ಕೊಲೆ ಮಾಡುವ ಉದ್ದೇಶದಿಂದ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಮುರಳಿ ಪ್ರಸಾದ್ ಆರೋಪಿಸಿ, ದೂರು ನೀಡಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಬೈಕನ್ನು ತಳ್ಳುತ್ತಾ ಮುಂದಕ್ಕೆ ಚಲಿಸಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಎತ್ತೊಯ್ದು ರಸ್ತೆಬದಿಯ ಕಾಂಪೌಂಡ್ನಲ್ಲಿ ನೇತಾಡುವಂತೆ ಮಾಡಿದೆ. ಪರಿಣಾಮ ಮಹಿಳೆ ಹಾಗೂ ಮುರಳಿ ಪ್ರಸಾದ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post