ಮಂಗಳೂರು, ಜೂ 14 : ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು. ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 155 ಮಂದಿಗೆ ಪಿ.ಎಚ್.ಡಿ. ಡಾಕ್ಟರೇಟ್ ಪದವಿ (ಕಲೆ -51, ವಿಜ್ಞಾನ -73, ವಾಣಿಜ್ಯ 26, ಶಿಕ್ಷಣ -05) ಇವರಲ್ಲಿ 60 ಮಹಿಳೆಯರು ಮತ್ತು 95 ಪುರುಷರು. ಈ ಬಾರಿ 18 ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ 4 ಅಂತಾರಾಷ್ಟ್ರೀಯ ಮಹಿಳಾ ವಿದ್ಯಾರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿರುವರು.
58 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಕೋರ್ಸ್ ಗಳ ಒಟ್ಟು 168 ಯಾಂಕ್ಗಳಲ್ಲಿ ಪ್ರಥಮ ಬ್ಯಾಂಕ್ ಪಡೆದ 72 ಮಂದಿಗೆ ರ್ಯಾಂಕ್ ಪ್ರಮಾಣ ಪತ್ರ ನೀಡಲಾಗುವುದು. ಇವರಲ್ಲಿ ಸ್ನಾತಕೋತ್ತರ ಪದವಿ -52 ಮತ್ತು 20 ಪದವೀಧರರು ಸೇರಿದ್ದಾರೆ ಎಂದು ತಿಳಿಸಿದರು.
ಜೂ.15ರಂದು ಮಧ್ಯಾಹ್ನ 12:15ಕ್ಕೆ ಮಂಗಳೂರು ವಿವಿ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಹೊಸದಿಲ್ಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾ ನಿರ್ದೇಶಕ ಪ್ರೊ.ಸಚಿನ್ ಚತುರ್ವೇದಿ ಮುಖ್ಯ ಅತಿಥಿಯಾಗಿ ಭಾಷಣ ಮಾಡುವರು. ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಡಾ.ರಾಜು ಮೊಗವೀರ, ಪ್ರೊ.ಸಂಗಪ್ಪ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post