ಮಂಗಳೂರು, ಜೂನ್ 15 : ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಇಡೀ ರಾಜ್ಯದಲ್ಲೇ ಮಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜೂನ್ 15ರ ಬೆಳಗ್ಗೆ 8.30ರ ವರೆಗಿನ 24 ಗಂಟೆಯಲ್ಲಿ ನೀರುಮಾರ್ಗ, ಫರಂಗಿಪೇಟೆಯ ಪುದು ಭಾಗದಲ್ಲಿ 18 ಸೆಮೀ ಮಳೆಯಾಗಿದೆ.
ಈ ಮಧ್ಯೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿರುವಂತಹ ಘಟನೆ ಕಂಕನಾಡಿ ಬಳಿಯ ಸುವರ್ಣ ಲೇನ್ನಲ್ಲಿ ನಡೆದಿದೆ. ಕೂದಳೆಲೆ ಅಂತರದಲ್ಲಿ ಜೋಕಿಂ ಡಿಸೋಜಾ ಕುಟುಂಬದ 6 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದು ಬಿದ್ದ ರಭಸಕ್ಕೆ ಮನೆಯ ಕಾಪೌಂಡ್ ಗೆ ಅಳವಡಿಸಿದ್ದ ಗೇಟ್ ಕಿತ್ತುಕೊಂಡು ಹೋಗಿದೆ. ಇದೇ ವೇಳೆ, ವಿದ್ಯುತ್ ಕಂಬ ಎರಡು ತುಂಡಾಗಿ ಬಿದ್ದಿದೆ. ಕಾಂಪೌಂಡ್ ಕುಸಿಯುವ ರಣಭೀಕರ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎದೆನಡುಗಿಸುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post