ಉಳ್ಳಾಲ, ಜು 15 : ನಟಿ ಕತ್ರಿನಾ ಕೈಫ್ ಅವರು ಮುಸ್ಲಿಂ. ಹಿಂದೂ ವ್ಯಕ್ತಿಯನ್ನು ಅವರು ವರಿಸಿದ್ದಾರೆ. ಈ ಕಾರಣಕ್ಕೆ ಅವರು ಹಿಂದೂ ಹಾಗೂ ಮುಸ್ಲಿಂ ಧರ್ಮ ಎರಡನ್ನೂ ಆಚರಿಸುತ್ತಾರೆ. ಅವರಿಗೆ ಹಿಂದೂ ದೇವರ ಬಗ್ಗೆಯೂ ಭಕ್ತಿ ಇದೆ. ಜುಲೈ 16ರಂದು ಅವರ ಜನ್ಮದಿನ. ಬರ್ತ್ಡೇಗೂ ಮುನ್ನ ಅವರು ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.
ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕತ್ರಿನಾ ಕೈಫ್ ಅವರು ಪ್ರೆಗ್ನೆಂಟ್ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಅವರು ನಟ ವಿಕ್ಕಿ ಕೌಶಲ್ ಅವರನ್ನು ವಿವಾಹ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಪ್ರೆಗ್ನೆಂಟ್ ವಿಚಾರ ಬಂದಾಗಲೆಲ್ಲ ಇವರು ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಾರೆ.
Discover more from Coastal Times Kannada
Subscribe to get the latest posts sent to your email.
Discussion about this post