• About us
  • Contact us
  • Disclaimer
Saturday, August 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

78ನೇ ಸ್ವಾತಂತ್ರ್ಯ ಸಂಭ್ರಮ,’2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿ, 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣ: ಪ್ರಧಾನಿ ಮೋದಿ ಭಾಷಣ

Coastal Times by Coastal Times
August 15, 2024
in ರಾಷ್ಟ್ರೀಯ ಸುದ್ದಿ
78ನೇ ಸ್ವಾತಂತ್ರ್ಯ ಸಂಭ್ರಮ,’2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿ, 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣ: ಪ್ರಧಾನಿ ಮೋದಿ ಭಾಷಣ
11
VIEWS
WhatsappTelegramShare on FacebookShare on Twitter

ನವದೆಹಲಿ: ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದ್ದು, ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು.

ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಪರ್ವ. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಸೇನಾನಿಗಳಿಗೆ ಹೃದಯಪೂರ್ವಕ ನಮನ. ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೆ ನಾವು ಋಣಿಯಾಗಿದ್ದೇವೆ. ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ನೈಸರ್ಗಿಕ ವಿಕೋಪಗಳು ನಮ್ಮ ಕಳವಳಗಳನ್ನು ಹೆಚ್ಚಿಸಿವೆ. ಇದರಿಂದ ಹಾನಿಗೊಳಗಾದ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ನೈಸರ್ಗಿಕ ವಿಕೋಪಗಳಿಂದಾಗಿ ನಮ್ಮ ಆತಂಕ ಹೆಚ್ಚುತ್ತಿದೆ. ಅನೇಕ ಜನರು ಇದರಿಂದ ತಮ್ಮ ಕುಟುಂಬಗಳು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ದೇಶ ಕೂಡ ನಷ್ಟಗಳನ್ನು ಅನುಭವಿಸಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ದೇಶ ಅವರ ಜತೆಗೆ ಇದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ.

ವಿಕಸಿತ ಭಾರತ 2047 ದೃಢ ಸಂಕಲ್ಪದ ಪ್ರತಿಫಲನ ಹಾಗೂ 140 ಕೋಟಿ ಜನರ ಕನಸು. 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿಸಲು ಜನರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಇದರಲ್ಲಿ ದೇಶವನ್ನು ಉತ್ಪಾದನಾ ಹಬ್, ಬೀಜದ ರಾಜಧಾನಿಯನ್ನಾಗಿಸುವುದು ಸೇರಿದೆ. ಆಡಳಿತ ಸುಧಾರಣೆ, ತ್ವರಿತ ನ್ಯಾಯದಾನ ವ್ಯವಸ್ಥೆ, ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗೆ ಉತ್ತೇಜನದ ಸಲಹೆಗಳನ್ನೂ ನೀಡಿದ್ದಾರೆ.

ಜಲ ಜೀವನ ಯೋಜನೆಯು 15 ಕೋಟಿ ಫಲಾನುಭವಿಗಳನ್ನು ತಲುಪಿದೆ. ಜನರು ಸಿರಿಧಾನ್ಯಗಳು ಜಗತ್ತಿನ ಪ್ರತಿ ಡೈನಿಂಗ್ ಟೇಬಲ್ ಅನ್ನೂ ಸೂಪರ್ ಫುಡ್ ಅಗಿ ತಲುಪುವಂತಾಗಬೇಕು ಎಂದು ಜನರು ಬಯಸಿದ್ದಾರೆ. ಅಡೆತಡೆಗಳನ್ನು ನಿವಾರಿಸುವ ಮೂಲಕ ನಾವು ಭಾರತವನ್ನು ಸಮೃದ್ಧವಾಗಿಸಬಹುದು. ವೋಕಲ್ ಫಾರ್ ಲೋಕಲ್ ಇಂದಿನ ಆರ್ಥಿಕ ವ್ಯವಸ್ಥೆಯಲ್ಲಿ ಹೊಸ ಮಂತ್ರವಾಗಿರುವುದು ನನಗೆ ಖುಷಿ ನೀಡಿದೆ. ಪ್ರತಿ ಜಿಲ್ಲೆಯೂ ತಾನು ಉತ್ಪಾದಿಸುವ ವಸ್ತುವಿನ ಬಗ್ಗೆ ಹೆಮ್ಮೆಪಟ್ಟುಕೊಳ್ಳಲು ಆರಂಭಿಸಿವೆ. ‘ಒಂದು ಜಿಲ್ಲೆ ಒಂದು ಉತ್ಪನ್ನ’ ಎಂಬ ವಾತಾವರಣ ನಿರ್ಮಾಣವಾಗಿದೆ. ‘ವೋಕಲ್ ಫಾರ್ ಲೋಕಲ್’ ಆರ್ಥಿಕತೆಯ ಹೊಸ ಮಂತ್ರ. ಯೋಜನೆಯಿಂದ ಬುಡಕಟ್ಟು ಸಮುದಾಯಕ್ಕೆ ಲಾಭ ಆಗಿದೆ.

ಭಾರತೀಯ ಸೇನೆ ಸರ್ಜಿಕಲ್ ಹಾಗೂ ಏರ್​​ ಸ್ಟ್ರೈಕ್​ ಮಾಡುವಷ್ಟು ಬೆಳೆದಿದೆ. ಬಾಹ್ಯಾಕಾಶ ಹಾಗೂ ಸೇನೆಯಲ್ಲಿ ಅಗಾಧ ಬದಲಾವಣೆ ತರಲಾಗಿದೆ. ಭಾರತೀಯ ಸೇನೆ ಉಗ್ರರ ತಾಣಗಳಿಗೆ ನುಗ್ಗಿ ಹೊಡೆಯುತ್ತೆ. ನಮಗೆ ದೇಶ ಮೊದಲು ಇದು ನಮ್ಮ ಸಂಕಲ್ಪ. ಭಾರತದ ಶಕ್ತಿ ಏನೆಂದು ಇಡೀ ಜಗತ್ತಿಗೆ ಗೊತ್ತಿದೆ. ಸಶಸ್ತ್ರ ಪಡೆಗಳು ಸರ್ಜಿಕಲ್ ದಾಳಿಗಳನ್ನು ನಡೆಸಿದಾಗ, ವಾಯುದಾಳಿಗಳನ್ನು ಮಾಡಿದಾಗ ಯುವಜನರು ಹೆಮ್ಮೆಪಟ್ಟಿದ್ದರು. ಇದಕ್ಕಾಗಿಯೇ ದೇಶದ 140 ಕೋಟಿ ಜನತೆ ಹೆಮ್ಮೆಯಿಂದ ಇದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನಕಲಿ ಸಿಮ್ ಸಂಗ್ರಹಿಸಿ ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ಪೂರೈಸುತ್ತಿದ್ದ ಖದೀಮರಿಬ್ಬರ ಸೆರೆ, 86 ಸಿಮ್ ಕಾರ್ಡ್ ಪೊಲೀಸರ ವಶಕ್ಕೆ

Next Post

ಬಂಟ್ವಾಳ: ಕಾರಿನಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಹಲ್ಲೆ ನಗದು-ಚಿನ್ನದ ಸರ ದರೋಡೆ

Related Posts

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್
ರಾಷ್ಟ್ರೀಯ ಸುದ್ದಿ

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್

July 29, 2025
87
ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ
ರಾಷ್ಟ್ರೀಯ ಸುದ್ದಿ

ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ

July 24, 2025
51
Next Post
ಬಂಟ್ವಾಳ: ಕಾರಿನಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಹಲ್ಲೆ ನಗದು-ಚಿನ್ನದ ಸರ ದರೋಡೆ

ಬಂಟ್ವಾಳ: ಕಾರಿನಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಹಲ್ಲೆ ನಗದು-ಚಿನ್ನದ ಸರ ದರೋಡೆ

Discussion about this post

Recent News

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
25
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

ಬೆಳುವಾಯಿ ಸಿಸಿಬಿ ಪೊಲೀಸರಿಂದ 123 ಕೆಜಿ ಗಾಂಜಾ ಸಹಿತ ಮೂವರ ಬಂಧನ

August 2, 2025
13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d