• About us
  • Contact us
  • Disclaimer
Sunday, December 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ: (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್

Coastal Times by Coastal Times
October 15, 2021
in ರಾಷ್ಟ್ರೀಯ ಸುದ್ದಿ
ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ: (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್
10
VIEWS
WhatsappTelegramShare on FacebookShare on Twitter

ನಾಗ್ಪುರ: ವಿಶ್ವ ಭೂಪಟದಲ್ಲಿ ಭಾರತದ ಸ್ಥಾನ ಮತ್ತಷ್ಟು ಎತ್ತರಕ್ಕೆ ಏರುತ್ತಿದ್ದು, ಜಾಗತಿಕ ವಿದ್ಯಮಾನಗಳು ಭಾರತದ ಅಭಿಪ್ರಾಯ ಮತ್ತು ಸಮ್ಮಿತುಯ ಹೊರತಾಗಿ ಜರುಗಲಾರವು ಎಂಬುದು ಸಾಬೀತಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ವಿಜಯದಶಮಿ ಅಂಗವಾಗಿ ನಾಗ್ಪುರದ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ ಸುದೀರ್ಘ ಭಾಷಣ ಮಾಡಿದ ಮೋಹನ್ ಭಾಗವತ್, ಜಾಗತಿಕ ವಿದ್ಯಮಾನಗಳಲ್ಲಿ ಭಾರತದ ಪಾತ್ರ ಮತ್ತು ಜಾಗತಿಕ ವೇದಿಕೆಗಳಲ್ಲಿ ಭಾರತದ ಧ್ವನಿ ಗಟ್ಟಿಯಾಗುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಕೊರೊನಾ ವಿರುದ್ಧದ ಭಾರತದ ಹೋರಾಟವನ್ನು ಇಡೀ ಜಗತ್ತು ಕೊಂಡಾಡಿದೆ. ನಮ್ಮ ಸಂಘಟಿತ ಪ್ರಯತ್ನ ಕೇವಲ ಭಾರತಕ್ಕೆ ಮಾತ್ರವಲ್ಲದೇ ವಿಶ್ವದ ಇತರ ರಾಷ್ಟ್ರಗಳಿಗೂ ಸಹಾಯ ಒದಗಿಸಲು ನೆರವು ನೀಡಿದೆ. ಕೊರೊನಾ ಕಾಲದಲ್ಲಿ ಭಾರತ ವಹಿಸಿದ ಜಾಗತಿಕ ಪಾತ್ರ ನಿಜಕ್ಕೂ ಶ್ಲಾಘನೀಯ ಎಂದು ಮೋಹನ್ ಭಾಗವತ್ ನುಡಿದರು.

ಇದೇ ವೇಳೆ ಜಾಗತಿಕ ರಾಜಕೀಯ ವಿದ್ಯಮಾನಗಳ ಕುರಿತೂ ಮಾತನಾಡಿದ ಮೋಹನ್ ಭಾಗವತ್, ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಒಳ್ಳೆಯ ಸಂದೇಶವನ್ನಂತೂ ನೀಡುತ್ತಿಲ್ಲ ಎಂದು ಹೇಳಿದರು. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಜಗತ್ತಿಗೆ ಮಾರಕ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಭಾಗವತ್ ಹೇಳಿದರು.

ನಮಗೆ ತಾಲಿಬಾನಿಗಳ ಇತಿಹಾಸ ಗೊತ್ತಿದೆ. ತಾಲಿಬಾನ್ ಸಂಘಟನೆಗೆ ಪಾಕಿಸ್ತಾನ ಮತ್ತು ಚೀನಾದ ಪ್ರತ್ಯಕ್ಷ ಮತ್ತು ಪರೋಕ್ಷ ಸಹಾಯದ ಅರಿವು ಕೂಡ ಭಾರತಕ್ಕಿದೆ. ಭವಿಷ್ಯದಲ್ಲಿ ಒಂದು ವೇಳೆ ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ. ಪಾಕಿಸ್ತಾನದ ಕುರಿತು ಜಾಗತಿಕ ಅಭಿಪ್ರಾಯ ಬದಲಾಗುವುದಿಲ್ಲ ಎಂದು ಭಾಗವತ್ ನುಡಿದರು.

ಭಾರತದ ಕುರಿತು ಚೀನಾದ ನೀತಿ ಎಂದಿಗೂ ಬದಲಾಗುವುದಿಲ್ಲ. ಹೀಗಾಗಿ ನಾವು ನಮ್ಮ ಗಡಿಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವ ಅವಶ್ಯಕತೆಯಿದೆ. ಪ್ರಸ್ತುತ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಇಟ್ಟಿರುವ ಹೆಜ್ಜೆ ಪ್ರತಿ ಭಾರತೀಯನಿಗೂ ತೃಪ್ತಿ ತಂದಿದೆ ಎಂದು ಭಾಗವತ್ ಹೇಳಿದರು.

#WATCH | "…There's no control over what's shown on OTT platforms, post Corona even children have phones. Use of narcotics is rising…how to stop it? Money from such businesses is used for anti-national activities…All of this should be controlled,"says RSS chief Mohan Bhagwat pic.twitter.com/PLELLPExdL

— ANI (@ANI) October 15, 2021

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂ ಬೊಮ್ಮಾಯಿಗೆ ಮನವಿ

Next Post

ಬೈಕ್ ಅಫಘಾತ ; ಪುಂಜಾಲಕಟ್ಟೆ ಠಾಣೆ ಹೆಡ್ ಕಾನ್ಸ್ ಟೇಬಲ್ ಮೃತ್ಯು

Related Posts

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ
ರಾಷ್ಟ್ರೀಯ ಸುದ್ದಿ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
36
ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
34
Next Post
ಬೈಕ್ ಅಫಘಾತ ; ಪುಂಜಾಲಕಟ್ಟೆ ಠಾಣೆ ಹೆಡ್ ಕಾನ್ಸ್ ಟೇಬಲ್ ಮೃತ್ಯು

ಬೈಕ್ ಅಫಘಾತ ; ಪುಂಜಾಲಕಟ್ಟೆ ಠಾಣೆ ಹೆಡ್ ಕಾನ್ಸ್ ಟೇಬಲ್ ಮೃತ್ಯು

Discussion about this post

Recent News

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
36
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d