• About us
  • Contact us
  • Disclaimer
Friday, August 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ

Coastal Times by Coastal Times
November 15, 2021
in ಕರಾವಳಿ
ಮುಸ್ಲಿಮರ ದುಡ್ಡು ಆಗುತ್ತದೆ, ಕೋಮು ಪ್ರಚೋದನೆ ಮಾಡುತ್ತೀರಿ ; ಶರಣ್ ಪಂಪ್ವೆಲ್ ವಿರುದ್ಧ ಬಿರುವೆರ್ ಕುಡ್ಲ ಆಕ್ರೋಶ
124
VIEWS
WhatsappTelegramShare on FacebookShare on Twitter

ಮಂಗಳೂರು, ನ.15: ಬಳ್ಳಾಲ್ ಬಾಗ್ ನಲ್ಲಿ ನಡೆದ ಹಲ್ಲೆ ಕೃತ್ಯದ ನೆಪದಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಿರುವೆರ್ ಕುಡ್ಲ ಸಂಘಟನೆಯ ಹೆಸರೆತ್ತಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂಘಟನೆಯ ಮುಖಂಡರು ಸುದ್ದಿಗೋಷ್ಠಿ ಕರೆದು ಶರಣ್ ಪಂಪ್ವೆಲ್ ಬಗ್ಗೆ ತೀವ್ರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು.

ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲದ ಬಗ್ಗೆ ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಬಿರುವರ್ ಕುಡ್ಲ ಕಾನೂನು ಹೋರಾಟ ನಡೆಸಲಿದೆ ಎಂದು ಲಕ್ಷ್ಮೀಶ್ ತಿಳಿಸಿದರು.

ಬಿರುವೆರ್ ಕುಡ್ಲದ ದೀಪು ಶೆಟ್ಟಿಗಾರ್ ಮಾತನಾಡಿ ಶರಣ್ ಪಂಪ್ವೆಲ್ ಪ್ರತಿ ಬಾರಿ ಮುಸ್ಲಿಂ, ಮುಸ್ಲಿಂ ಎಂದು ಹೇಳುತ್ತಾರೆ. ಇವರಿಗೆ ಮುಸ್ಲಿಮರ ದುಡ್ಡು ಆಗುತ್ತದೆ. ಮುಸ್ಲಿಮರ ಜೊತೆಗೆ ವ್ಯವಹಾರ ನಡೆಸಲಿಕ್ಕೆ ಆಗುತ್ತದೆ. ಸಿಟಿ ಸೆಂಟರಲ್ಲಿ ಮೆಂಟೆನೇನ್ಸ್ ಹೆಸರಲ್ಲಿ ಎಷ್ಟು ಹಣದ ವ್ಯವಹಾರ ಇಟ್ಟುಕೊಂಡಿಲ್ಲ. ನಮ್ಮ ಸಂಘಟನೆ ಯಾವುದೇ ಜಾತಿಗೆ ಸೀಮಿತ ಆಗಿಲ್ಲ. ಎಲ್ಲ ಮತೀಯರು, ಜಾತಿಯವರೂ ನಮ್ಮ ಜೊತೆ ಇದ್ದಾರೆ. ಮುಸ್ಲಿಮರೂ ಇದ್ದಾರೆ. ಮುಸ್ಲಿಂ ಅಂದ ಕೂಡಲೇ ಕೆಟ್ಟವರು ಅನ್ನುವುದು ತಪ್ಪು. ನಮ್ಮ ಪ್ರಧಾನಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಇವರದೇ ಸಂಘಟನೆಯ ವ್ಯಕ್ತಿಯಾಗಿ ಇವರು ಮುಸ್ಲಿಮರನ್ನು ನಿಂದಿಸುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು..

ಬಳ್ಳಾಲ್ ಬಾಗ್ ಪರಿಸರದಲ್ಲಿ ಕುಡಿದು, ಕೆಟ್ಟ ಚಟುವಟಿಕೆಗಳಲ್ಲಿ ತೊಡಗಿಸುವುದು, ಮಹಿಳೆಯರಿಗೆ ಚುಡಾಯಿಸುವ ಕೆಲಸ ನಡೆಯುತ್ತಿದೆ. ಈ ಬಗ್ಗೆ ಅಲ್ಲಿನ ನಿವಾಸಿಗಳು ಬರ್ಕೆ ಠಾಣೆಗೆ ಎರಡು ಬಾರಿ ದೂರು ಕೊಟ್ಟಿದ್ದಾರೆ. ಈ ಬಗ್ಗೆ ನಿಮ್ಮ ಗಮನಕ್ಕೆ ಬಂದಿಲ್ಲವೇ.. ಈಗ ಅದೇ ಪ್ರದೇಶದಲ್ಲಿ ನಿಂತು ಪ್ರತಿಭಟನೆ ನಡೆಸುತ್ತಿದ್ದೀರಿ. ಕೋಮು ಪ್ರಚೋದನೆ ಮಾಡುತ್ತಿದ್ದೀರಿ. ಅದಕ್ಕೆ ನಮ್ಮ ಹೆಸರನ್ನು ಎಳೆದು ತಂದಿದ್ದೀರಿ. ನೀವು ಈ ಬಗ್ಗೆ ಬಹಿರಂಗ ಕ್ಷಮೆ ಯಾಚಿಸದಿದ್ದರೆ ನಾವು ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಜೊತೆಗೆ, ನಿಮ್ಮ ಖಾಸಗಿ ವಹಿವಾಟಿನ ಬಗ್ಗೆ ಪುರಾವೆ ಸಹಿತ ಮುಂದಿಡಲಿದ್ದೇವೆ ಎಂದು ಸಂಘಟನೆಯ ರಾಕೇಶ್ ಪೂಜಾರಿ ಹೇಳಿದರು.

ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಸದಸ್ಯ ಉದಯ ಪೂಜಾರಿ, ರಾಕೇಶ್ ಸಾಲ್ಯಾನ್ ಸೇರಿದಂತೆ 25ಕ್ಕೂ ಹೆಚ್ಚು ವಿವಿಧ ಘಟಕಗಳ ಸದಸ್ಯರು ಸುದ್ದಿಗೋಷ್ಟಿಯಲ್ಲಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಟಿ-20 ಮಾರ್ಷ್-ವಾರ್ನರ್ ಅಬ್ಬರ; ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

Next Post

ಕುಲಶೇಖರ ವೀರನಾರಾಯಣ ದೇವಸ್ಥಾನ: ಗೋ ಪೂಜೆ ಭಜನೆ , ಸತ್ಯನಾರಾಯಣ ಮಹಾಪೂಜೆ, ಅನ್ನಸಂತರ್ಪಣೆ, ವೀರನಾರಾಯಣ ದೇವಸ್ಥಾನ ಕುಲಾಲರ ಅಸ್ಮಿತೆ; ಮಯೂರ್ ಉಳ್ಳಾಲ್

Related Posts

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ
ಕರಾವಳಿ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
20
Next Post
ಕುಲಶೇಖರ ವೀರನಾರಾಯಣ ದೇವಸ್ಥಾನ: ಗೋ ಪೂಜೆ ಭಜನೆ , ಸತ್ಯನಾರಾಯಣ ಮಹಾಪೂಜೆ, ಅನ್ನಸಂತರ್ಪಣೆ, ವೀರನಾರಾಯಣ ದೇವಸ್ಥಾನ ಕುಲಾಲರ ಅಸ್ಮಿತೆ; ಮಯೂರ್ ಉಳ್ಳಾಲ್

ಕುಲಶೇಖರ ವೀರನಾರಾಯಣ ದೇವಸ್ಥಾನ: ಗೋ ಪೂಜೆ ಭಜನೆ , ಸತ್ಯನಾರಾಯಣ ಮಹಾಪೂಜೆ, ಅನ್ನಸಂತರ್ಪಣೆ, ವೀರನಾರಾಯಣ ದೇವಸ್ಥಾನ ಕುಲಾಲರ ಅಸ್ಮಿತೆ; ಮಯೂರ್ ಉಳ್ಳಾಲ್

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d