• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭೀಕರವಾಗಿ ಹತ್ಯೆ ಮಾಡಿ ತಿಂಗಳವರೆಗೂ ಶ್ರದ್ಧಾಳ ಇನ್​ಸ್ಟಾ ಅಕೌಂಟ್ ಚಾಲನೆಯಲ್ಲಿಟ್ಟಿದ್ದ ಅಫ್ತಾಬ್!

Coastal Times by Coastal Times
November 15, 2022
in ಕ್ರೈಮ್ ನ್ಯೂಸ್
ಭೀಕರವಾಗಿ ಹತ್ಯೆ ಮಾಡಿ ತಿಂಗಳವರೆಗೂ ಶ್ರದ್ಧಾಳ ಇನ್​ಸ್ಟಾ ಅಕೌಂಟ್ ಚಾಲನೆಯಲ್ಲಿಟ್ಟಿದ್ದ ಅಫ್ತಾಬ್!
108
VIEWS
WhatsappTelegramShare on FacebookShare on Twitter

ನವದೆಹಲಿ: ಶ್ರದ್ಧಾ ವಾಲ್ಕರ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ, ಆಕೆ ಇನ್ನೂ ಬದುಕಿದ್ದಾಳೆಂದು ಜಗತ್ತಿಗೆ ತೋರಿಸಲು, ಆತ ಜೂನ್​ವರೆಗೆ ಆಕೆಯ ಇನ್‌ಸ್ಟಾಗ್ರಾಮ್ ಖಾತೆಯನ್ನು ಚಾಲನೆಯಲ್ಲಿಟ್ಟಿದ್ದ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ತಿಳಿಯಲು ಪೊಲೀಸ್ ತಂಡಗಳು ಅವರ ಫೋನ್ ಅನ್ನು ಸ್ಕ್ಯಾನ್ ಮಾಡುತ್ತಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ಮೆಹ್ರೌಲಿ ಪ್ರದೇಶದಲ್ಲಿ ಮೇ 18 ರಂದು ತನ್ನ ಲಿವ್-ಇನ್ ಪಾರ್ಟನರ್ ಶ್ರದ್ಧಾಳನ್ನು ಅಫ್ತಾಬ್ ಕೊಲೆ ಮಾಡಿದ್ದ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಅವಧಿಯಲ್ಲಿ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಎಸೆದು ಬರುತ್ತಿದ್ದ. ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕೊನೆಗೂ ಶನಿವಾರ ಬಂಧಿಸಲಾಗಿದೆ.

26ರ ಹರೆಯದ ಶ್ರದ್ಧಾ ಕೆಲವೊಮ್ಮೆ ಅಫ್ತಾಬ್ ತನ್ನನ್ನು ಥಳಿಸುತ್ತಾನೆ ಎಂದು ತಾಯಿಗೆ ತಿಳಿಸುತ್ತಿದ್ದಳು ಎಂದು ಆಕೆಯ ಕುಟುಂಬ ಹೇಳಿಕೊಂಡಿದೆ. ಎಫ್‌ಐಆರ್‌ ಪ್ರಕಾರ, ಸಂತ್ರಸ್ತೆಯ ಕುಟುಂಬವು ಇವರಿಬ್ಬರ ಸಂಬಂಧವನ್ನು ಒಪ್ಪಿರಲಿಲ್ಲ. ಆದರೆ ತನಗೆ 25 ವರ್ಷ ವಯಸ್ಸಾಗಿದ್ದರಿಂದ ತಾನು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಹೊಂದಿದ್ದೇನೆ ಎಂದು ಹೇಳಿ ಸಂಬಂಧವನ್ನು ಮುಂದುವರಿಸಿದ್ದಳು.

ಶ್ರದ್ಧಾ ತನ್ನ ಮನೆ ತೊರೆದು ಅಫ್ತಾಬ್ ಜೊತೆ ವಾಸಿಸುತ್ತಿದ್ದಳು. ಅಫ್ತಾಬ್ ತನ್ನನ್ನು ಹೊಡೆಯುತ್ತಾನೆ ಎಂದು ತಾಯಿಗೆ ಅನೇಕ ಬಾರಿ ಹೇಳಿದ್ದಳಂತೆ. 2020 ರಲ್ಲಿ ತನ್ನ ತಾಯಿಯ ಮರಣದ ಸುಮಾರು 15 ರಿಂದ 20 ದಿನಗಳ ನಂತರ, ತಂದೆಗೆ ಕರೆ ಮಾಡಿ ಇದೇ ವಿಷಯವನ್ನು ತಿಳಿಸಿದ್ದಳು ಎಂದು ಎಫ್ಐಆರ್​ನಲ್ಲಿ ನಮೂದಿಸಲಾಗಿದೆ.

ತರಬೇತಿ ಪಡೆದ ಚೆಫ್ (ಬಾಣಸಿಗ) ಆಗಿದ್ದ ಅಫ್ತಾಬ್ ಚಾಕು ಬಳಸುವುದರಲ್ಲಿ ನಿಪುಣನಾಗಿದ್ದ ಎಂದು ಮೂಲಗಳು ತಿಳಿಸಿವೆ. ಆದರೆ, ಕೃತ್ಯಕ್ಕೆ ಬಳಸಿದ ಚಾಕು ಇನ್ನೂ ಪತ್ತೆಯಾಗಿಲ್ಲ. ಅಫ್ತಾಬ್‌ನನ್ನು ಪೊಲೀಸರು ಸೋಮವಾರ ಮೆಹ್ರೌಲಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ವಿಲೇವಾರಿ ಮಾಡಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

10 ತಿಂಗಳಲ್ಲಿ ಮನಿ ಡಬ್ಲಿಂಗ್ ; ಬಿಗ್ ಪ್ಲಸ್ ಫಿನ್ ಟ್ರೇಡಿಂಗ್ ಹೆಸರಲ್ಲಿ 2 ಸಾವಿರ ಕೋಟಿ ಹಗರಣ, ಕೇರಳ- ಕರ್ನಾಟಕದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹ

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿದೆ ಮಡ್ರಾಸ್ ಐ (ಕೆಂಗಣ್ಣು) – 1,440 ಪ್ರಕರಣ ದಾಖಲು

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
41
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
60
Next Post
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿದೆ ಮಡ್ರಾಸ್ ಐ (ಕೆಂಗಣ್ಣು) – 1,440 ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿದೆ ಮಡ್ರಾಸ್ ಐ (ಕೆಂಗಣ್ಣು) - 1,440 ಪ್ರಕರಣ ದಾಖಲು

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
41
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d