• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

Coastal Times by Coastal Times
November 15, 2025
in ಕರಾವಳಿ
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
10
VIEWS
WhatsappTelegramShare on FacebookShare on Twitter

ಮಂಗಳೂರು, ನ.14: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿ ಸುವ ಉದ್ಧೇಶದಿಂದ ನ.16ರಂದು ನಡೆಯುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ ‘ಸಹಕಾರ ಮಾಣಿಕ್ಯ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ಧೈಯವಾಕ್ಯದೊಂದಿಗೆ ಈ ಬಾರಿ ಆಚರಿಸಲಾಗುತ್ತಿದೆ. ಅದೇ ರೀತಿಯಾಗಿ 7 ದಿನಗಳ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆಯೂ ಚಿಂತನ-ಮಂಥನ ನಡೆಯುತ್ತಿದೆ. ನವೆಂಬರ್ 16ರಂದು ಮಂಗಳೂರಿನಲ್ಲಿ ನಡೆಯುವ ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು” ಎಂಬ ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಲಿದೆ.

ಸಹಕಾರ ವ್ಯವಸ್ಥೆಯ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವ ಪ್ರಯತ್ನ ಸಹಕಾರ ಸಪ್ತಾಹ ಆಚರಣೆಯಲ್ಲಿ ನಡೆಯುತ್ತಿದೆ. ರಾಷ್ಟ್ರ ಮತ್ತು ರಾಜ್ಯ ಸರಕಾರಗಳು ಸಹಕಾರ ಚಳುವಳಿಯ ಬೆಳವಣಿಗೆಗೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತಿದ್ದು, ಈ ಸಹಕಾರ ಸಪ್ತಾಹ ವೈವಿಧ್ಯಮಯ ಚಟುವಟಿಕೆಯ ಮೂಲಕ ಗುರುತಿಸಿಕೊಂಡಿದೆ.

ಈ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ಧ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಹಕಾರ ಸಪ್ತಾಹಕ್ಕೆ ವಸ್ತು ಪ್ರದರ್ಶನ ಮತ್ತು ಬೃಹತ್ ಸಹಕಾರ ಮೆರವಣಿಗೆ ಮೆರುಗು ನೀಡಅದೆ. ಇದಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ಮುಂಭಾಗದಲ್ಲಿ ಸಹಕಾರಿ ಬಂಧುಗಳು ಆಸೀನರಾಗಲು ವಿಶಾಲವಾದ ಚಪ್ಪರವನ್ನು ಹಾಕಲಾಗಿದೆ. ಪ್ರಥಮ ಹಂತದಲ್ಲಿ ಗಣ್ಯರಿಗೆ ಹಾಗೂ ಮಾಧ್ಯಮದ ಬಂಧುಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ. ಭದ್ರತೆಯ ದೃಷ್ಟಿಯಿಂದಾಗಿ ನಾನಾ ಹಂತಗಳಲ್ಲಿ ಆಸನವನ್ನು ವಿಭಜಿಸಲಾಗಿದೆ. ಸಭಾಂಗಣವಿಡೀ ತಂಪಾಗಿರಿಸಲು ಬೃಹತ್ ಗಾತ್ರದ ಫ್ಯಾನ್‌ಗಳನ್ನು ಜೋಡಿಸಲಾಗಿದೆ.

ಸಹಕಾರ ಮಾಣಿಕ್ಯ ಪ್ರಶಸ್ತಿ: ಈಗಾಗಲೇ “ಸಹಕಾರ ಮಾಣಿಕ್ಯ ಪ್ರಶಸ್ತಿ”ಯನ್ನು 3 ಸಹಕಾರ ಸಂಸ್ಥೆಗಳಿಗೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಲಾ 1 ಉತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳನ್ನು ಹಾಗೂ 1 ಪತ್ತಿನ ಸಹಕಾಲಿ ಸಂಘವನ್ನು 2025ನೇ ಸಾಲಿನ “ಸಹಕಾರ ಮಾಣಿಕ್ಯ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000 ನಗದು ಹಾಗೂ ಪಾಲಿತೋಷಕವನ್ನು ನೀಡಲಾಗುವುದು. ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾಲಿಕೆ ಕ್ರೆಡಿಟ್ ಸೊಸೈಟಿ, ಮೀನುಗಾರಿಕಾ ಸಹಕಾರಿ ಸಂಘ, ಸೌಹಾರ್ಧ ಸಹಕಾಲಿ ಸಂಘ ಹಾಗೂ ಮಹಿಳಾ ಸಹಕಾಲಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ 1 ಹಾಗೂ ವಜ್ರ ಮಹೋತ್ಸವ ಮತ್ತು ಸುವರ್ಣ ಮಹೋತ್ಸವ ಪೂರೈಸಿದ ಸಂಘಗಳನ್ನು ಗೌರವಿಸಲಾಗುವುದು.

ಆಕರ್ಷಕ ಮೆರವಣಿಗೆ: ಸಹಕಾರ ಸಪ್ತಾಹವನ್ನು ಅತ್ಯಂತ ಆಕರ್ಷಕ ರೀತಿಯಲ್ಲಿ ನಡೆಸುವ ಉದ್ದೇಶದಿಂದ ನವೆಂಬರ್ 16ರಂದು ಬೆಳಗ್ಗೆ 9.00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆವರಣದಿಂದ ಕರುನಾಡಿನ ವೈವಿಧ್ಯತೆಯನ್ನೊಳಗೊಂಡ ಸಹಕಾರ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಸಹಕಾರ ಬಂಧುಗಳು ಹಾಗೂ ಸ್ವ-ಸಹಾಯ ಗುಂಪಿನ ಸದಸ್ಯರು ಸೇರಿ ಸುಮಾರು 15,000 ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಈ ಸಹಕಾರ ಮೆರವಣಿಗೆಯಲ್ಲಿ ಸುಮಾರು 50ಕ್ಕೂ ಹೆಚ್ಚಿನ ಟ್ಯಾಬ್ಲೊಗಳು ಭಾಗವಹಿಸಲಿದೆ.

ಸಹಕಾರ ರಥ, ಘಟೋತ್ಕಜ, ಚೆಂಡೆ, ಕೊಂಬು, ಸಹಕಾರಿ ಬಣ್ಣದ ಕೊಡೆಗಳು, ಭುವನೇಶ್ವರಿ ದೇವಿಯ ಸ್ತಬ್ಧಚಿತ್ರ, ಪುರುಷರ ಹಾಗೂ ಮಹಿಳೆಯರ ಡೊಳ್ಳು ಕುಣಿತ, ಮೊಳಹಳ್ಳಿ ಶಿವರಾವ್‌ ಸ್ತಬ್ಧಚಿತ್ರ, ಮಹಿಳೆಯರ ವೀರಗಾಸೆ, ಹೈನುಗಾರಿಕೆಯ ಸ್ತಬ್ಧಚಿತ್ರ, ಮೀನುಗಾಲಿಕೆಯ ಸ್ತಬ್ಧಚಿತ್ರ, ಹೊನ್ನಾವರ ಬ್ಯಾಂಡ್, ಕೆ.ಎಂ.ಎಫ್. – ನಂದಿನಿ ಆನ್ ಬೀಲ್ ಸ್ತಬ್ಧಚಿತ್ರ, ಸುಗ್ಗಿ ಕುಣಿತ, ತುಳುನಾಡು ವೈಭವ ಸ್ತಬ್ಧಚಿತ್ರ, ನವೋದಯ ಪ್ರಚಾರ ವಾಹನ, ಪುರವಂತಿಗೆ, ಗ್ರಾಮೀಣ ಬ್ಯಾಂಕಿಂಗ್ ಚಟುವಟಿಕೆಯ ಸ್ತಬ್ಧಚಿತ್ರ, ಚೆಂಡೆ ವಾಹನ, ಸೋಮನ ಕುಣಿತ, ಪಟ್ಟದ ಕುಣಿತ, ಶಿವನ ಮೂರ್ತಿಯ ಸ್ತಬ್ಧಚಿತ್ರ, ನವೋದಯ ಗುಂಪಿನ ಸಭೆ ನಡೆಸುವ ಸ್ತಬ್ಧಚಿತ್ರ, ಗೊರವರ ಕುಣಿತ, ಪ್ರಾಥಮಿಕ ಪತ್ತಿನ ಸಂಘದ ಸ್ತಬ್ಧಚಿತ್ರ, ಕೃಷಿ ಚಟುವಟಿಕೆಯ ಸ್ತಬ್ಧಚಿತ್ರ, ಉಳುಮೆ ಮಾಡುವ ರೈತನ ಸ್ತಬ್ಧಚಿತ್ರ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮೊಬೈಲ್‌ ಬ್ಯಾಂಕ್‌ ವಾಹನ ಸೇರಿದಂತೆ 50 ಕ್ಕೂ ಅಧಿಕ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

Next Post

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
15
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
72
Next Post
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
13
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d