• About us
  • Contact us
  • Disclaimer
Tuesday, April 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

Coastal Times by Coastal Times
November 15, 2025
in ರಾಷ್ಟ್ರೀಯ ಸುದ್ದಿ
ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
35
VIEWS
WhatsappTelegramShare on FacebookShare on Twitter

ಶ್ರೀನಗರ, ನ 15: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳ ಮಾದರಿ ಸಂಗ್ರಹಿಸಿಟ್ಟಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ 7 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಲ್ಲಿ ಕಾಣಿಸಿವೆ. ಗಾಯಗೊಂಡ ಪೊಲೀಸರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಮೃತಪಟ್ಟವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ಅಧಿಕಾರಿಗಳಾಗಿದ್ದಾರೆ. ಶ್ರೀನಗರ ಸರ್ಕಾರದ ಇಬ್ಬರು ಅಧಿಕಾರಿಗಳು, ಓರ್ವ ನೈಬ್ ತಹಶೀಲ್ದಾರ್ ಕೂಡ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಾಳುಗಳನ್ನು ಸೇನೆಯ 92 ಬೇಸ್ ಆಸ್ಪತ್ರೆ ಮತ್ತು ಶೇರ್-ಇ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ.

ಪೊಲೀಸ್ ಠಾಣೆಗೆ ಸ್ಫೋಟಕ ತಂದಿದ್ದೇಕೆ? : ಬಂಧಿತ ಉಗ್ರ, ವೈದ್ಯ ಮುಜಮ್ಮಿಲ್ ಗನೈ ಬಾಡಿಗೆ ಮನೆಯಿಂದ ವಶಪಡಿಸಿಕೊಂಡ 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳ ಪೈಕಿ ಒಂದಷ್ಟನ್ನು ಈಗಿನ ತನಿಖೆಯ ಅಂಗವಾಗಿ ಮಾದರಿಯಾಗಿ ಸಂಗ್ರಹಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವುಗಳಿಂದಾಗಿಯೇ ಸ್ಫೋಟ ಸಂಭವಿಸಿದೆ. ಸದ್ಯ ಘಟನಾ ಸ್ಥಳದಿಂದ ಆರು ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಮೃತರನ್ನು ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ. ಶವಗಳನ್ನು ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಗಿದೆ.

ಉಗ್ರನ ಮನೆಯಿಂದ ವಶಪಡಿಸಿಕೊಂಡಿದ್ದ ಕೆಲವು ಸ್ಫೋಟಕಗಳನ್ನು ಪೊಲೀಸ್ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸಂಗ್ರಹಿಸಲಾಗಿತ್ತು. 360 ಕಿಲೋಗ್ರಾಂಗಳಷ್ಟು ಸ್ಫೋಟಕಗಳಲ್ಲಿ ಹೆಚ್ಚಿನದ್ದನ್ನು ಭಯೋತ್ಪಾದಕ ಘಟಕದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಅಕ್ಟೋಬರ್ ಮಧ್ಯದಲ್ಲಿ ನೌಗಾಮ್‌ನ ಬನ್‌ಪೋರಾದಲ್ಲಿ ಗೋಡೆಗಳ ಮೇಲೆ ಬೆದರಿಕೆ ಪೋಸ್ಟರ್‌ಗಳನ್ನು ಪೊಲೀಸರು ಮತ್ತು ಭದ್ರತಾ ಪಡೆಗಳು ಪತ್ತೆ ಮಾಡಿದ ನಂತರ ಇಡೀ ಸಂಚು ಬಯಲಾಗಿತ್ತು. ಈ ಘಟನೆಯನ್ನು ದೇಶದ ಭದ್ರತೆಗೆ ಗಂಭೀರ ಬೆದರಿಕೆ ಎಂದು ಪರಿಗಣಿಸಿ, ಶ್ರೀನಗರ ಪೊಲೀಸರು ಅಕ್ಟೋಬರ್ 19 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ತಂಡವನ್ನು ರಚಿಸಿದ್ದರು. ತನಿಖೆ ನಡೆದು ಉಗ್ರರ ಬೃಹತ್ ಜಾಲವನ್ನು ಬೇಧಿಸಲಾಗಿತ್ತು. ಅದೇ ಸಂದರ್ಭದಲ್ಲೇ ದೆಹಲಿ ಸ್ಫೋಟವೂ ಸಂಭವಿಸಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನವಮಂಗಳೂರು ಬಂದರ್‌ನ ಸುವರ್ಣ ಮಹೋತ್ಸವ: 1,507 ಕೋಟಿ ರೂ.ಗಳ 20 ಯೋಜನೆಗಳಿಗೆ ಚಾಲನೆ, ದೇಶದಲ್ಲಿ ಹಡಗು ನಿರ್ಮಾಣದ ಕ್ಲಸ್ಟರ್ ಅಭಿವೃದ್ಧಿ; ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್

Next Post

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

Discussion about this post

Recent News

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
28
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

April 20, 2026
82
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

April 20, 2026
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d