• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಯೋಧ್ಯೆ ರಾಮಮಂದಿರ ; ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಪ್ರತಿಷ್ಠಾಪನೆ

Coastal Times by Coastal Times
January 16, 2024
in ರಾಷ್ಟ್ರೀಯ ಸುದ್ದಿ
ಅಯೋಧ್ಯೆ ರಾಮಮಂದಿರ ; ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಪ್ರತಿಷ್ಠಾಪನೆ
27
VIEWS
WhatsappTelegramShare on FacebookShare on Twitter

ಮೈಸೂರು, ಜ16: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಜನವರಿ 22ರಂದು ನಡೆಯಲಿದೆ. ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀ ರಾಮನ ಪ್ರತಿಮೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಸಂಕ್ರಾಂತಿ ದಿನವಾದ ಸೋಮವಾರ ಈ ಕುರಿತು ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಾಹಿತಿ ನೀಡಿದೆ. ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದೆ.

ಅಯೋಧ್ಯೆಯ ಶ್ರೀ ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮಧ್ಯಾಹ್ನ 12.20ಕ್ಕೆ ಪ್ರಾಣ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್. ಡಿ. ಕೋಟೆಯದ್ದು ಎಂಬುದು ಕರ್ನಾಟಕಕ್ಕೆ ಮತ್ತೊಂದು ಗರಿಯಾಗಿದೆ. ಶ್ರೀ ರಾಮನ ಮೂರ್ತಿ ಕೆತ್ತುವ ಐತಿಹಾಸಿಕ ಮತ್ತು ಪುಣ್ಯ ಕಾರ್ಯದಲ್ಲಿ ಭಾಗಿಯಾದ ಕರುನಾಡಿನ ಹೆಮ್ಮೆಯ ಶಿಲ್ಪಿಗೆ ವಿವಿಧ ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಮೂವರು ಶಿಲ್ಪಿಗಳು ಕೆತ್ತನೆ ಮಾಡಿರುವ ವಿಗ್ರಹಗಳನ್ನು ಕಳೆದ ವಾರ ಆಯ್ಕೆ ಮಾಡಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆ ಸಹ ಆಯ್ಕೆಯಾಗಿತ್ತು. ಆದರೆ ಈ ಕುರಿತು ಅಧಿಕೃತ ಘೋಷಣೆಯಾಗಿರಲಿಲ್ಲ.

ಪ್ರಾಣ ಮೂರ್ತಿ ಪ್ರತಿಷ್ಠಾಪನೆ ಪೂರ್ವಭಾವಿ ವಿಧಿಗಳು ಜನವರಿ 16ರಂದು ಆರಂಭವಾಗಲಿದೆ. ಜನವರಿ 21ರ ತನಕ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಪ್ರತಿಷ್ಠಾಪನೆಯ ಅಗತ್ಯವಿರುವ ಕೆಲವು ವಿಧಿಗಳು ಮಾತ್ರ ಜನವರಿ 22ರಂದು ನಡೆಯಲಿದೆ. ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವ ವಿಗ್ರಹ 150 ರಿಂದ 200 ಕೆಜಿ ತೂಕವಿದೆ. ರಾಮನನ್ನು ಐದು ವರ್ಷದ ಬಾಲಕನ ಪ್ರತಿರೂಪದಂತೆ ಕೆತ್ತನೆ ಮಾಡಲಾಗಿದೆ. ಕಳೆದ 70 ವರ್ಷಗಳಿಂದ ಪೂಜಿಸಲಾಗುತ್ತಿರುವ ರಾಮ ಲಲ್ಲಾನ ವಿಗ್ರಹವನ್ನು ಸಹ ನೂತನ ದೇವಾಲಯದ ಗರ್ಭಗುಡಿಯಲ್ಲಿ ಇಟ್ಟು ಪೂಜಿಸಲಾಗುತ್ತದೆ.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಕುಲಶೇಖರ : ಪತ್ನಿಯಿಂದ ಪತಿಗೆ ಹಲ್ಲೆ , ಪ್ರಕರಣ ದಾಖಲು

Next Post

ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

Related Posts

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
38
ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
29
Next Post
ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d