• About us
  • Contact us
  • Disclaimer
Tuesday, July 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಒಮ್ಮೆ ಚಾರ್ಜ್‌ ಮಾಡಿದರೆ 650 ಕಿ.ಮೀ: ‘ಟೊಯೊಟಾ ಮಿರೈ’ ಗ್ರೀನ್ ಹೈಡ್ರೋಜನ್ ವಾಹನ ಬಿಡುಗಡೆ

Coastal Times by Coastal Times
March 16, 2022
in ಗ್ಯಾಜೆಟ್
ಒಮ್ಮೆ ಚಾರ್ಜ್‌ ಮಾಡಿದರೆ 650 ಕಿ.ಮೀ: ‘ಟೊಯೊಟಾ ಮಿರೈ’ ಗ್ರೀನ್ ಹೈಡ್ರೋಜನ್ ವಾಹನ ಬಿಡುಗಡೆ
92
VIEWS
WhatsappTelegramShare on FacebookShare on Twitter

ನವದೆಹಲಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಭಾರತದ ಮೊದಲ ಹಸಿರು ಹೈಡ್ರೋಜನ್ ಆಧಾರಿತ ಸುಧಾರಿತ ಇಂಧನ ಕೋಶದ ಎಲೆಕ್ಟ್ರಿಕ್ ವೆಹಿಕಲ್ (ಎಫ್‌ಸಿಇವಿ) ‘ಟೊಯೊಟಾ ಮಿರೈ’ ಅನ್ನು ಬಿಡುಗಡೆ ಮಾಡಿದ್ದಾರೆ. ಇದು ಭಾರತದಲ್ಲಿನ ಮೊದಲ ಯೋಜನೆಯಾಗಿದೆ ಎಂದು ಅವರು ಹೇಳಿದ್ಧಾರೆ.

ವಾಹನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ಹೈಡ್ರೋಜನ್‌ನಿಂದ ಚಾಲಿತವಾಗಿರುವ ಎಫ್‌ಸಿಇವಿ ವಾಹನವು ಶೂನ್ಯ-ಅನಿಲ ಹೊರಸೂಸುವ ವಾಹನವಾಗಿದೆ ಎಂದಿದ್ದಾರೆ. ಇದು ಸಂಪೂರ್ಣವಾಗಿ ಪರಿಸರ ಸ್ನೇಹಿಯಾಗಿದ್ದು, ನೀರನ್ನು ಹೊರತುಪಡಿಸಿ ಬೇರೆ ಯಾವುದೇ ಅನಿಲವನ್ನು ಹೊರಸೂಸುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹೇಳಿದ್ದಾರೆ.

ಟೊಯೊಟಾ ಮಿರೈ ವಾಹನವು ಹೈಡ್ರೋಜನ್ ಫ್ಯುಯಲ್ ಸೆಲ್ ಬ್ಯಾಟರಿ ಪ್ಯಾಕ್‌ನಿಂದ ಚಾಲಿತವಾಗಿದೆ ಮತ್ತು ಒಂದೇ ಚಾರ್ಜ್‌ನಲ್ಲಿ 650 ಕಿಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಹೇಳಿಕೊಂಡಿದೆ.

ಜಪಾನ್ ಭಾಷೆಯಲ್ಲಿ ‘ಮಿರೈ’ ಪದದ ಅರ್ಥ ‘ಭವಿಷ್ಯ’ ಎಂಬುದಾಗಿದೆ.

ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಹೇರಳವಾಗಿ ಲಭ್ಯವಿರುವ ಜೀವರಾಶಿಗಳ ಹಸಿರು ತ್ಯಾಜ್ಯದಿಂದ ಜಲಜನಕವನ್ನು ಉತ್ಪಾದಿಸಬಹುದು ಎಂದು ಗಡ್ಕರಿ ಹೇಳಿದರು.

ಹಸಿರು ಹೈಡ್ರೋಜನ್‌ನ ಸಾಮರ್ಥ್ಯವನ್ನು ಬಳಸಿಕೊಳ್ಳುವ ತಂತ್ರಜ್ಞಾನದ ಪರಿಚಯ ಮತ್ತು ಅಳವಡಿಕೆಯು ಭಾರತಕ್ಕೆ ಶುದ್ಧ ಮತ್ತು ಕೈಗೆಟುಕುವ ಇಂಧನ ಭವಿಷ್ಯವನ್ನು ಭದ್ರಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಟೊಯೊಟಾ ಕಿರ್ಲೊಸ್ಕರ್ ಮೋಟಾರ್ (ಟಿಕೆಎಂ) ಕಂಪನಿಯು ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಆಟೋಮೋಟಿವ್ ಟೆಕ್ನಾಲಜಿ (ಐಸಿಎಟಿ) ಜೊತೆಗೆ, ಭಾರತೀಯ ರಸ್ತೆಗಳು ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ಹೈಡ್ರೋಜನ್‌ನಲ್ಲಿ ಚಲಿಸುವ ವಿಶ್ವದ ಅತ್ಯಾಧುನಿಕ ಎಫ್‌ಸಿಇವಿ ಟೊಯೊಟಾ ಮಿರೈ ವಾಹನದ ಅಧ್ಯಯನ ಮತ್ತು ಮೌಲ್ಯಮಾಪನಕ್ಕಾಗಿ ಪ್ರಾಯೋಗಿಕ ಯೋಜನೆಯನ್ನು ನಡೆಸುತ್ತಿದೆ.

ಕಾರ್ಯಕ್ರಮದಲ್ಲಿ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್ ಮತ್ತು ಭಾರಿ ಕೈಗಾರಿಕೆ ಸಚಿವ ಮಹೇಂದ್ರ ನಾಥ್ ಪಾಂಡೆ ಉಪಸ್ಥಿತರಿದ್ದರು.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಆಕರ್ಷಕ ವಿನ್ಯಾಸದ “Probuds 21″ಇಯರ್‌ಬಡ್ಸ್ ಪರಿಚಯಿಸಿದ ಲಾವಾ

Next Post

ತಣಿಯದ ಹಿಜಾಬ್ ಕಾವು; ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ಕೇಂದ್ರಗಳು ಸ್ವಯಂ ಬಂದ್ ನಡೆಸಲು ಕರೆ

Related Posts

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್
ಗ್ಯಾಜೆಟ್

ಎನ್ವಿಡಿಯಾಗೆ ಭಾರೀ ಶಾಕ್! ಗೂಗಲ್​ ನಿಂದ ಪವರ್‌ಫುಲ್ ಎಐ ಚಿಪ್ ಲಾಂಚ್

April 26, 2026
30
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
34
Next Post
ತಣಿಯದ ಹಿಜಾಬ್ ಕಾವು; ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ಕೇಂದ್ರಗಳು ಸ್ವಯಂ ಬಂದ್ ನಡೆಸಲು ಕರೆ

ತಣಿಯದ ಹಿಜಾಬ್ ಕಾವು; ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ಕೇಂದ್ರಗಳು ಸ್ವಯಂ ಬಂದ್ ನಡೆಸಲು ಕರೆ

Discussion about this post

Recent News

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
21
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d