ಮಂಗಳೂರು: ನಗರ ಮೆಸ್ಕಾಂನಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆಗಿರುವ ದಯಾಲು ಸುಂದರ್ರಾಜ್ ಮನೆ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.
ಕದ್ರಿ ಕಂಬಳದಲ್ಲಿರುವ ಅವರ ಸ್ವಂತ ಮನೆ, ಮಲ್ಲಿಕಟ್ಟೆಯಲ್ಲಿ ಅವರು ವಾಸವಾಗಿರುವ ಬಾಡಿಗೆ ಅಪಾರ್ಟ್ಮೆಂಟ್ ಮತ್ತು ಕಚೇರಿಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲಿಸಿದರು. ಸುಂದರ್ರಾಜ್ 10 ವರ್ಷಗಳಿಂದ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Discussion about this post