• About us
  • Contact us
  • Disclaimer
Thursday, November 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಪ್ರಿಲ್ 26ರಂದು ಲೋಕಸಭಾ ಚುನಾವಣೆ; ದ.ಕ. ಜಿಲ್ಲೆಯಲ್ಲಿ 17,96,826 ಮತದಾರರು: ಡಿಸಿ ಮುಲ್ಲೈ ಮುಗಿಲನ್

Coastal Times by Coastal Times
March 16, 2024
in ಕರಾವಳಿ
ಎಪ್ರಿಲ್ 26ರಂದು ಲೋಕಸಭಾ ಚುನಾವಣೆ; ದ.ಕ. ಜಿಲ್ಲೆಯಲ್ಲಿ 17,96,826 ಮತದಾರರು: ಡಿಸಿ ಮುಲ್ಲೈ ಮುಗಿಲನ್
37
VIEWS
WhatsappTelegramShare on FacebookShare on Twitter

ಮಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, 2024ರ ಮಾರ್ಚ್ 15ರವರೆಗೆ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ನಿರ್ದೇಶನದಂತೆ ಚುನಾವಣೆಗೆ ನಾಮ ಪತ್ರ ಸಲ್ಲಿಕೆಯ 10 ದಿನಗಳ ಮುಂಚಿನವರೆಗೆ ಅಂದರೆ ಮಾ. 24ವರೆಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದೆ. ಅರ್ಹ ಮತದಾರರು ನಿಗದಿತ ಸಮಯದೊಳಗೆ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಿದರು. ದ.ಕ. ಜಿಲ್ಲೆಯಲ್ಲಿ ಒಟ್ಟು 35,689 ಯುವ ಮತದಾರರನ್ನು ಗುರುತಿಸಲಾಗಿದ್ದು, 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಸೇರಿದಂತೆ 36082 ಮತದಾರರಿದ್ದಾರೆ ಎಂದು ಅವರು ಹೇಳಿದರು.

ಮತದಾನದ ಹಿಂದಿನ ದಿನದವರೆಗೆ ಕಾಯುವ ಬದಲು ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವು ದನ್ನು ಖಾತರಿಪಡಿಸಿಕೊಂಡು ತಮ್ಮ ಮತದಾನದ ಕೇಂದ್ರಗಳನ್ನು ತಿಳಿದುಕೊಳ್ಳುವುದು ಉತ್ತಮ. ಸಾರ್ವಜನಿಕರು ವೆಬ್‌ಸೈಟ್ https://voters.eci.gov.in ನಲ್ಲಿ ಮತದಾರರ ಪಟ್ಟಿಗೆ ಸಂಬಂಧಿತ ಅರ್ಜಿಗಳು ಮತ್ತು ಸೇವೆಗಳನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಡಿಜಿಟಲ್ ಅಥವಾ ಸಾಮಾಜಿಕ ಮಾಧ್ಯಮದ ಮೂಲಕ ಹಿಂದಿನ ಘಟನೆಗಳ ವೀಡಿಯೋ, ವರದಿ ಅಥವಾ ಫೋಟೋ ಗಳನ್ನು ಬಳಸಿ ವದಂತಿಗಳನ್ನು ಹಬ್ಬಿಸಿದರೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ 8 ಮಾದರಿ ನೀತಿ ಸಂಹಿತೆ ತಂಡಗಳು, 24 ವೀಡಿಯೋ ವಿಚಕ್ಷಣ ತಂಡಗಳು, 8 ವೀಡಿಯೋ ಪರಿಶೀಲನಾ ತಂಡ, 72 ಫ್ಲೈಯಿಂಗ್ ಸ್ಕಾಡ್‌ಗಳು, 186 ಸೆಕ್ಟರ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

“ಮಾರ್ಚ್ 15 ರ ಇತ್ತೀಚಿನ ಮತದಾರರ ಮಾಹಿತಿಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು 1,796,826 ಅರ್ಹ ಮತದಾರರಿದ್ದಾರೆ, ಇದರಲ್ಲಿ 877,438 ಪುರುಷರು, 919,321 ಮಹಿಳೆಯರು ಮತ್ತು 67 ಟ್ರಾನ್ಸ್ಜೆಂಡರ್ ವ್ಯಕ್ತಿಗಳು ಇದ್ದಾರೆ. , ಮಂಗಳೂರು ದಕ್ಷಿಣವು ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಒಟ್ಟು 248,956 ಮತದಾರರನ್ನು ಹೊಂದಿದೆ ಎಂದು ಹೇಳಿದರು. ಮುಂಬರುವ ಚುನಾವಣೆಗಳಿಗೆ 523 ವ್ಯಕ್ತಿಗಳು (481 ಪುರುಷರು ಮತ್ತು 42 ಮಹಿಳೆಯರು) ಸೇರಿದಂತೆ ಸೇವಾ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 35,689 ಪ್ರಥಮ ಬಾರಿ ಮತದಾರರಿದ್ದು, 5,058 ಹೊಸಬರೊಂದಿಗೆ ಬೆಳ್ತಂಗಡಿ ಈ ವಿಭಾಗದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 3 ಅಂತರ್ ರಾಜ್ಯ ಗಡಿಗಳು ಸೇರಿದಂತೆ 12 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದ್ದು, ಅಕ್ರಮ ಹಣ ಅಥವಾ ಮದ್ಯ ರವಾನೆ ಬಗ್ಗೆ ನಿಗಾ ಇರಿಸಲಾಗಿದೆ. ಶಾಂತಿಯುತ ಚುನಾವಣೆಗೆ ಸಂಬಂಧಿಸಿ, ಶಾಂತಿಗೆ ಭಂಗ ಮಾಡುವವರ ಮೇಲೆ ಪ್ರತಿಬಂಧಕ ಕ್ರಮಗಳಿಗೆ ಇಲಾಖೆ ಮುಂದಾಗಿದ್ದು, ಈಗಾಗಲೇ ನಗರ ವ್ಯಾಪ್ತಿಯಲ್ಲಿ 777 ಮಂದಿಯ ವಿರುದ್ಧ ಕ್ರಮ ವಹಿಸಲಾಗಿದೆ. ಸಮಾಜದಲ್ಲಿ ತೊಂದರೆ ನೀಡುವವರನ್ನು ಗಡೀಪಾರು, ಗೂಂಡಾಕಾಯ್ದೆ ಮೂಲಕ ನಿಯಂತ್ರಿಸಲಾಗುತ್ತಿದ್ದು, ಇಂದು ಓರ್ವನ ಗಡಿಪಾರು ಮಾಡಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರಗಳನ್ನು (ಕೋವಿ, ಬಂದೂಕು, ಗನ್ ಸೇರಿದಂತೆ) ಪೊಲೀಸರು ವಶಪಡಿಸಿಕೊಳ್ಳಲಿದ್ದು, ನಗರದಲ್ಲಿ ಇಂತಹ 1700 ಮಂದಿ ಶಸ್ತ್ರಾಸ್ತ್ರ ಪರವನಿಗೆದಾರರಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹೇಳಿದರು.

ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯವಲ್ಲಿ 7 ಅಂತರ್ ರಾಜ್ಯ ಗಡಿಗಳು ಸೇರಿದಂತೆ 11 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ. ಹಿಂದಿನ ಚುನಾವಣೆ ಸೇರಿದಂತೆ ಅಪರಾಧ ಹಿನ್ನೆಲೆಯಳ್ಳ 1058 ಮಂದಿಯ ವಿರುದ್ಧ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 57 ಮಂದಿಯ ಗಡೀಪಾರಿಗೆ ಪ್ರಸ್ತಾವನೆ ಮಾಡಲಾಗಿದೆ. ಗೂಂಡಾಕಾಯ್ದೆಯ ಬಗ್ಗೆಯ ಕ್ರಮ ನಡೆಯುತ್ತಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 9000 ಶಸ್ತ್ರಾಸ್ತ್ರ ಪರವಾನಿಗೆದಾರರಿದ್ದಾರೆ ಎಂದು ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್ ತಿಳಿಸಿದರು.

ಅನುಮತಿ ಇಲ್ಲದೆ ಸಭೆ, ಮೆರವಣಿಗೆ ನಡೆಸುವಂತಿಲ್ಲ : ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಸಭೆ, ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಸಭೆ, ಪ್ರಚಾರ ಸಭೆ ನಡೆಸಲು ಸಾರ್ವಜನಿಕರು ಅಥವಾ ರಾಜಕೀಯ ಪಕ್ಷದವರು ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ಫ್ಲೈಯಿಂಗ್ ಸ್ಕಾಡ್ ಟೀಮ್, ಸ್ಟಾಟಿಕ್ ಸರ್ವೆಲೆನ್ಸ್ ಟೀಮ್, ವೀಡಿಯೋ ಸರ್ವೆಲೆನ್ಸ್ ಟೀಮ್‌ಗಳು ಎಲ್ಲಾ ರೀತಿಯ ಕಾರ್ಯಕ್ರಮಗಳ ಮೇಲೆ ನಿಗಾವ ಹಿಸಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಸಹಾಯಕ ಚುನಾವಣಾಧಿರಿಗಳು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’

Next Post

ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ ಜಾಮೀನು

Related Posts

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು
ಕರಾವಳಿ

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

November 13, 2025
0
ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು
ಕರಾವಳಿ

ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

November 13, 2025
174
Next Post
ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ ಜಾಮೀನು

ಸುರತ್ಕಲ್: ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ ಜಾಮೀನು

Discussion about this post

Recent News

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

November 13, 2025
0
ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

November 13, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

November 13, 2025
ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

November 13, 2025
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d