• About us
  • Contact us
  • Disclaimer
Saturday, June 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ದೋಷಮುಕ್ತ: ಸಿಬಿಐ ನ್ಯಾಯಾಲಯ ತೀರ್ಪು

Coastal Times by Coastal Times
June 16, 2023
in ಕರಾವಳಿ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿ ದೋಷಮುಕ್ತ: ಸಿಬಿಐ ನ್ಯಾಯಾಲಯ ತೀರ್ಪು
174
VIEWS
WhatsappTelegramShare on FacebookShare on Twitter

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಇಂದು (ಜೂ.16) ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ರನ್ನು ಖುಲಾಸೆ ಮಾಡಿದೆ.

ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯಾ 2012 ಅಕ್ಟೋಬರ್ 9ರಂದು ಕಾಲೇಜಿನಿಂದ ಮನೆಗ ಬರುವಾಗ ನಾಪತ್ತೆಯಾಗಿದ್ದು ಮಾರನೇ ದಿನ ಆಕೆಯ ಮೃತದೇಹ ಅತ್ಯಾಚಾರವೆಸಗಿ ಕೊಲೆ ಮಾಡಿದ ರೀತಿಯಲ್ಲಿ ಪತ್ತೆಯಾಗಿತ್ತು.

ವಾರದ ಬಳಿಕ ಕಾರ್ಕಳ ಕುಕ್ಕುಂದೂರು ನಿವಾಸಿ ಸಂತೋಷ್ ರಾವ್ ಎಂಬಾತನನ್ನು ಸ್ಥಳೀಯ ಯುವಕರು ಹಿಡಿದು ಈತನೇ ಕೊಲೆ ಆರೋಪಿ ಎಂದು ಪೊಲೀಸರಿಗೆ ಒಪ್ಪಿಸಿದ್ದರು. ಪ್ರಕರಣದ ಹಿಂದೆ ಹಲವರು ಪ್ರಬಲರಿದ್ದಾರೆ ಎಂಬ ಆರೋಪ ಮನೆಯವರಿಂದ ಕೇಳಿ ಬಂದ ಹಿನ್ನಲೆಯಲ್ಲಿ ತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಭಾರೀ ಹೋರಾಟಗಳು ನಡೆದಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಸದ್ದು ಮಾಡಿದ್ದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ನನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಕೊಲೆಗಾರ ಎನ್ನುವುದಕ್ಕೆ ಸೂಕ್ತವಾದ ಸಾಕ್ಷ್ಯಾಧಾರಗಳು ಇಲ್ಲದೆ ಇರುವುದರಿಂದ ಆತನನ್ನು ಬಿಡುಗಡೆ ಮಾಡಲಾಡುತ್ತಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಸಿ.ಬಿ ಅವರು ನೀಡಿರುವ ತೀರ್ಪಿನಲ್ಲಿ ತಿಳಿಸಲಾಗಿದೆ.

ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ಅತ್ಯಾಚಾರ ಮಾಡಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖವಿಲ್ಲ. ಎರಡು ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆರೋಪಿ ಸಂತೋಷ್ ರಾವ್ ಪರ ವಕೀಲ ಮೋಹಿತ್ ಕುಮಾರ್ ವಾದ ಮಾಡಿದ್ದರು. ಇದೂ ಸೇರಿದಂತೆ ಇನ್ನೂ ಹಲವು ಅಂಶಗಳನ್ನು ಪರಿಗಣಿಸಿ ಕೋರ್ಟ್‌ ಆರೋಪಿಯನ್ನು ಬಂಧಮುಕ್ತಗೊಳಿಸಿದೆ.

ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿ ಇರುವ ಪಾಂಗಾಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿಯಾಗಿರುವ ಸೌಜನ್ಯಳ ಕೊಲೆ 2012ರ ಅಕ್ಟೋಬರ್‌ 9ರಂದು ಸಂಜೆ ನಡೆದಿತ್ತು. ಉಜಿರೆ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಆಕೆ ಅಂದು ಸಂಜೆ ಕಾಲೇಜಿನಿಂದ ಬಂದು ನೇತ್ರಾವತಿ ಸ್ನಾನ ಘಟ್ಟದ ಬಳಿ ಇಳಿದು ಮನೆ ಕಡೆಗೆ ಹೋಗಿದ್ದಳು.

ಆದರೆ, ಆಕೆ ಮನೆ ತಲುಪಿರಲಿಲ್ಲ. ರಾತ್ರಿಯಾದರೂ ಮಗಳು ಮನೆಗೆ ಬರಲಿಲ್ಲ ಎಂದು ಮನೆ ಮಂದಿ ಆತಂಕದಿಂದ ಹುಡುಕಾಡಿದ್ದರು. ಆಕೆ ಪಾಂಗಾಳದ ಮನೆ ಕಡೆ ಹೋಗಿರುವುದನ್ನು ಹಲವರು ಗಮನಿಸಿದ್ದರು. ಹೀಗಾಗಿ ಮನೆಗೆ ಹೋಗುವ ದಾರಿಯಲ್ಲಿ ಏನೋ ಅವಘಡ ನಡೆದಿದೆ ಎಂಬ ಸಂಶಯದಲ್ಲಿ ಹುಡುಕಾಟ ನಡೆಸಿದ್ದರು. ಇಡೀ ರಾತ್ರಿ ಹುಡುಕಾಡಿದರೂ ಆಕೆ ಸಿಕ್ಕಿರಲಿಲ್ಲ. ಆದರೆ ಮರುದಿನ ರಾತ್ರಿ ಮಣ್ಣಸಂಕ ಎಂಬಲ್ಲಿ ವಿದ್ಯಾರ್ಥಿನಿ ಸೌಜನ್ಯಳ ಮೃತದೇಹ ಸಿಕ್ಕಿತ್ತು. ಬೆಳ್ತಂಗಡಿಯ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಕೇಸ್ ದಾಖಲಾಗಿತ್ತು.

ಈ ನಡುವೆ, ಈ ಕೊಲೆಯ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದೆಲ್ಲ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಆಕೆ ನಾಪತ್ತೆಯಾದ ದಿನ ವಿಪರೀತ ಮಳೆ ಬಂದಿದ್ದು, ಅದರ ನಡುವೆಯೇ ಸಾವಿರಾರು ಮಂದಿ ಆಕೆಗಾಗಿ ಹುಡುಕಾಟ ನಡೆಸಿದ್ದರು. ಆದರೆ, ಅವರೆಲ್ಲರೂ ಹುಡುಕಾಡಿದ ಪ್ರದೇಶದ ಅನತಿ ದೂರದಲ್ಲೇ ಆಕೆಯ ಶವ ಪತ್ತೆಯಾಗಿದ್ದು ಹಲವು ರೀತಿಯ ಸಂಶಯಕ್ಕೆ ಕಾರಣವಾಗಿತ್ತು.

ಈ ನಡುವೆ, ಎರಡು ದಿನಗಳ ಬಳಿಕ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಒಬ್ಬ ಯುವಕ ಸಿಕ್ಕಿಬಿದ್ದಿದ್ದು, ಆತನನ್ನು ಬೆನ್ನಟ್ಟಿ ಬಂಧಿಸಲಾಗಿತ್ತು. ಆತನ ಮೇಲೆ ಸಂಶಯದಲ್ಲಿ ವಿಚಾರಿಸಲಾಗಿತ್ತು. ಅಂತಿಮವಾಗಿ ಕುಕ್ಕುಂದೂರು ಮೂಲದ ಆತನೇ ಸೌಜನ್ಯಳನ್ನು ಕೊಲೆ ಮಾಡಿದ್ದಾಗಿ ಪೊಲೀಸರು ತೀರ್ಮಾನಕ್ಕೆ ಬಂದಿದ್ದರು.

ಆದರೆ, ಸಂತೋಷ್‌ ರಾವ್‌ ಕೊಲೆಗಾರನಲ್ಲ. ಆತನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪ್ರಭಾವಿಗಳ ಕೈವಾಡವೇ ಇದರಲ್ಲಿ ಮುಖ್ಯವಾಗಿರುವುದು. ಅವರನ್ನು ಬಂಧಿಸಬೇಕು ಎಂಬ ಕೂಗು ಕೇಳಿಬಂದಿತ್ತು. ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿದ್ದವು. ಈ ಬೇಡಿಕೆ ಜೋರಾಗುತ್ತಿದ್ದಂತೆಯೇ ಆಗ ರಾಜ್ಯದಲ್ಲಿ ಆಡಳಿತದಲ್ಲಿದ್ದ ಸಿದ್ದರಾಮಯ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಸಿಬಿಐ ಅಧಿಕಾರಿಗಳು ಹಲವಾರು ಮಂದಿಯ ವಿಚಾರಣೆಯನ್ನು ನಡೆಸಿದ್ದು, ಹಲವು ಹಂತಗಳಲ್ಲಿ ತನಿಖೆಯನ್ನು ನಡೆಸಿತ್ತು. ಅಂತಿಮವಾಗಿ ಇದೀಗ ಸಂತೋಷ್‌ ರಾವ್‌ನನ್ನು ದೋಷಮುಕ್ತನೆಂದು ಸಿಬಿಐ ನ್ಯಾಯಾಲಯ ಹೇಳಿದೆ. ಹಾಗಿದ್ದರೆ ಇದರ ತನಿಖೆ ಮುಂದುವರಿಯುತ್ತದಾ? ಇಲ್ಲಿಗೇ ಮುಕ್ತಾಯವಾಗುತ್ತದಾ ಎಂದು ಕಾದು ನೋಡಬೇಕಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಏಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ; ಇನ್ಸ್ ಪೆಕ್ಟರ್ ಶರೀಫ್ ನೇತೃತ್ವ

Next Post

ಅತ್ತಾವರ ಮನೆ ಕಳ್ಳತನ ಪ್ರಕರಣ- ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ

Related Posts

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ
ಕರಾವಳಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
12
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್
ಕರಾವಳಿ

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
77
Next Post
ಅತ್ತಾವರ ಮನೆ ಕಳ್ಳತನ ಪ್ರಕರಣ- ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ

ಅತ್ತಾವರ ಮನೆ ಕಳ್ಳತನ ಪ್ರಕರಣ- ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ

Discussion about this post

Recent News

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
14
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d