ಮಂಗಳೂರು, ಜೂ 16 : ನಗರದ ಅತ್ತಾವರ ಕೆಎಂಸಿ ಆಸ್ಪತ್ರೆ ಸಮೀಪದ ಎರಡು ಮನೆಗಳಲ್ಲಿ ಕಳ್ಳತನ ನಡೆಸಿ ಪರಾರಿಯಾಗಲು ಯತ್ನಿಸಿದ ಹೊರ ರಾಜ್ಯದ ನಾಲ್ಕು ಮಂದಿಯನ್ನು ಪಾಂಡೇಶ್ವರ ಪೊಲೀಸರು ಕೃತ್ಯ ನಡೆದ ಐದು ಗಂಟೆಯೊಳಗೆ ಬಂಧಿಸಿದ ಘಟನೆ ಗುರುವಾರ ನಡೆದಿದೆ. ಬಂಧಿತ ಆರೋಪಿಗಳನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಇವರಿಂದ ಕಳ್ಳತನ ನಡೆಸಿದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಲಾಗಿದೆ. ನಗರದ ಅತ್ತಾವರದ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ಮನೆಯ ಬಾಗಿಲನ್ನು ಗುರುವಾರ ಮಧ್ಯಾಹ್ನ 1ರಿಂದ 3ರ ಮಧ್ಯೆ ಮುರಿದ ಆರೋಪಿಗಳು ಕಪಾಟಿನಲ್ಲಿಟ್ಟಿದ್ದ ವಿವಿಧ ವಿನ್ಯಾಸದ ಚಿನ್ನಾಭರಣ, ನಗದು ಸಹಿತ ಸುಮಾರು 4.45 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ವಿಜಯಪುರ ಮೂಲದ ಪೂಜಾ ಎಂಬಾಕೆ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಣಂಬೂರು ಬೀಚ್ ಬಳಿ ರಾತ್ರಿ ಸುಮಾರು 8ಕ್ಕೆ ಸಂಶಯಾಸ್ಪದ ರೀತಿಯಲ್ಲಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಿಸಿದರು.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Discover more from Coastal Times Kannada
Subscribe to get the latest posts sent to your email.







Discussion about this post