• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ RTI ಪ್ರಶ್ನೆಗೆ ಅಧಿಕೃತ ಉತ್ತರ ನೀಡಿದೆ.

Coastal Times by Coastal Times
August 16, 2025
in ಕರಾವಳಿ
ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ RTI ಪ್ರಶ್ನೆಗೆ ಅಧಿಕೃತ ಉತ್ತರ ನೀಡಿದೆ.
74
VIEWS
WhatsappTelegramShare on FacebookShare on Twitter

ಮಂಗಳೂರು, ಆಗಸ್ಟ್ 16: ಒಂದೆಡೆ ಧರ್ಮಸ್ಥಳದ ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ. 1987 ರಿಂದ 2025 ರ ಅವಧಿಯಲ್ಲಿ ಧರ್ಮಸ್ಥಳ ಆಸುಪಾಸಿನಲ್ಲಿ ಶಿಶುಗಳದ್ದೂ ಸೇರಿದಂತೆ 279 ಶವಗಳನ್ನು ಹೂಳಲಾಗಿದೆ. ಇವುಗಳಲ್ಲಿ ಹೆಚ್ಚಿನವು ಆತ್ಮಹತ್ಯೆ ಪ್ರಕರಣಗಳು ಎಂದು ಆರ್​​ಟಿಐ ಅಡಿ ಪಡೆಯಲಾದ ಮಾಹಿತಿಯಿಂದ ತಿಳಿದುಬಂದಿದೆ.

ಧರ್ಮಸ್ಥಳ ಆಸುಪಾಸಿನಲ್ಲಿ ಹೂಳಲಾದ 279 ಅನಾಥ ಶವಗಳಲ್ಲಿ 219 ಪುರುಷರ ಶವಗಳು ಮತ್ತು 46 ಮಹಿಳೆಯರ ಶವಗಳಾಗಿವೆ. ಶಿಶುಗಳದ್ದು ಸೇರಿದಂತೆ 14 ಶವಗಳ ಲಿಂಗವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯತಿಯ ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ) ಅವರಿಂದ ಆರ್‌ಟಿಐ ಅಡಿಯಲ್ಲಿ ಪಡೆದ ಮಾಹಿತಿಯಿಂದ ತಿಳಿದುಬಂದಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

2003-2004, 2006-2007 ಮತ್ತು 2014-2015ರ ಅವಧಿಯಲ್ಲಿ 17 ಅನಾಥ ಶವಗಳನ್ನು ಹೂಳಲಾಗಿದೆ. ಕಳೆದ 10 ವರ್ಷಗಳಿಂದ 101 ಅನಾಥ ಶವಗಳನ್ನು ಹೂಳಲಾಗಿದೆ. ಧರ್ಮಸ್ಥಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರು ತಿಂಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ವೈದ್ಯರೊಬ್ಬರು, ಅನಾಥ ಶವಗಳಲ್ಲಿ ಹೆಚ್ಚಿನವು ಕಾಡಿನೊಳಗೆ ಪತ್ತೆಯಾಗಿದ್ದವು ಎಂದು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಹೆಚ್ಚಿನ ಸಾವುಗಳು ಆತ್ಮಹತ್ಯೆಯಿಂದಾಗಿ ಸಂಭವಿಸಿವೆ ಎಂಬುದು ಆರ್​ಟಿಐ ಅರ್ಜಿ ಅಡಿ ಪಡೆದ ಮಾಹಿತಿಯಿಂದ ತಿಳಿದುಬಂದಿದೆ. ಮೃತದೇಹಗಳು ಕೊಳೆತು ದುರ್ವಾಸನೆ ಬರುತ್ತಿರುವ ಸ್ಥಿತಿಯಲ್ಲಿದ್ದುದರಿಂದ ಅವುಗಳನ್ನು ಅಲ್ಲಲ್ಲೇ ಹೂಳಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಸದ್ಯ ಎಸ್​ಐಟಿ ತನಿಖೆ ಪ್ರಗತಿಯಲ್ಲಿದ್ದು, ಕಳೆದ ಕೆಲವು ದಿನಗಳಿಂದ ಉತ್ಖನನ ನಡೆಯುತ್ತಿದೆ. ಇಂದು ಶೋಧ ಕಾರ್ಯಾಚರಣೆ ನಡೆಸದಿರಲು ಎಸ್ಐಟಿ ನಿರ್ಧರಿಸಿದೆ. ದೂರುದಾರ ಅನಾಮಿಕ ವ್ಯಕ್ತಿ ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲೇ ಇದ್ದು, ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆತ ನ್ಯಾಯಾಲಯಕ್ಕೆ ತಂದಿದ್ದ ಬುರುಡೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸೂಕ್ತ ಮಾಹಿತಿ ದೊರಕಿದಲ್ಲಿ ಇಂದು ಸ್ಥಳ ಮಹಜರು ಸಾಧ್ಯತೆ ಇದೆ. ಏತನ್ಮಧ್ಯೆ, ಎಸ್​​ಐಟಿ ಅಧಿಕಾರಿಗಳ ಪ್ರಶ್ನೆಗೆ ಅನಾಮಿಕ ಗೊಂದಲದ ಹೇಳಿಕೆ ನೀಡುತ್ತಿದ್ದಾನೆ ಎನ್ನಲಾಗಿದೆ.

ಮತ್ತೊಂದೆಡೆ, ಪ್ರಕರಣವು ರಾಜಕೀಯ ಆಯಾಮವನ್ನೂ ಪಡೆದುಕೊಂಡಿದ್ದು, ಬಿಜೆಪಿಯು ‘ಧರ್ಮಸ್ಥಳ ಚಲೋ’ ಯಾತ್ರೆಯನ್ನು ಹಮ್ಮಿಕೊಂಡಿದೆ. ತನಿಖೆ ಹೆಸರಿನಲ್ಲಿ ವೃಥಾ ವಿಳಂಬ ಮಾಡಿ ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯಬಾರದು ಎಂದು ಬಿಜೆಪಿ ಆಗ್ರಹಿಸಿದೆ.

ಸದ್ಯಕ್ಕೆ, ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿರಾಮ ನೀಡಲಾಗಿತ್ತು. ಶನಿವಾರ, ಭಾನುವಾರವೂ ಶೋಧ ಕಾರ್ಯ ನಡೆಯುವ ಸಾಧ್ಯತೆ ಇಲ್ಲ‌. ಎಸ್‌ಐಟಿ ತನಿಖಾ ತಂಡದಿಂದ ಜು.28ರಂದು ಶೋಧ ಕಾರ್ಯ ಆರಂಭಿಸಿದ್ದು ರಜಾ ದಿನಗಳನ್ನು ಹೊರತುಪಡಿಸಿ 15 ದಿನಗಳಲ್ಲಿ 17 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ವಿಪಕ್ಷಗಳ ಆಗ್ರಹ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ಸದನದಲ್ಲಿ ಪ್ರಕರಣದ ಕುರಿತು ಉತ್ತರ ನೀಡಲಿದ್ದಾರೆ ಎನ್ನಲಾಗುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯನ್ನು ಕಾರಿನಲ್ಲಿ ಅಪಹರಿಸಿ 350 ಗ್ರಾಮ್ ಚಿನ್ನ ದರೋಡೆ

Next Post

55 ರ ಆಂಟಿಗೆ 33 ರ ಯುವಕನ ಜತೆ ಲವ್! ಗಂಡನನ್ನೇ ಕೊಲೆ ಮಾಡಿಸಿ ತಪ್ಪಿಸಿಕೊಂಡಿದ್ದಾಕೆ ಅರೆಸ್ಟ್

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
30
Next Post
55 ರ ಆಂಟಿಗೆ 33 ರ ಯುವಕನ ಜತೆ ಲವ್! ಗಂಡನನ್ನೇ ಕೊಲೆ ಮಾಡಿಸಿ ತಪ್ಪಿಸಿಕೊಂಡಿದ್ದಾಕೆ ಅರೆಸ್ಟ್

55 ರ ಆಂಟಿಗೆ 33 ರ ಯುವಕನ ಜತೆ ಲವ್! ಗಂಡನನ್ನೇ ಕೊಲೆ ಮಾಡಿಸಿ ತಪ್ಪಿಸಿಕೊಂಡಿದ್ದಾಕೆ ಅರೆಸ್ಟ್

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
68
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d