• About us
  • Contact us
  • Disclaimer
Saturday, May 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲಿಗೆ ವಿಹಿಂಪ ಬಜರಂಗದಳದಿಂದ ‘ಬಿಸಿ ರೋಡಿನಲ್ಲೇ ಶಕ್ತಿ ಪ್ರದರ್ಶನ

Coastal Times by Coastal Times
September 16, 2024
in ಕರಾವಳಿ
ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲಿಗೆ ವಿಹಿಂಪ ಬಜರಂಗದಳದಿಂದ ‘ಬಿಸಿ ರೋಡಿನಲ್ಲೇ ಶಕ್ತಿ ಪ್ರದರ್ಶನ
11
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.16: ನಾಗಮಂಗಲ ಕೋಮು ಕಿಚ್ಚಿನ ಬೆನ್ನಲ್ಲೇ ಕರಾವಳಿಯಲ್ಲೂ ದ್ವೇಷದ ಕಾವು ತೀವ್ರತೆ ಪಡ್ಕೊಂಡಿದೆ. ಈದ್ ಮೆರವಣಿಗೆ ತಡೆಯಿರಿ,  ಶರಣ್ ಪಂಪ್ವೆಲ್ ತಾಕತ್ತಿದ್ದರೆ ಬಿಸಿ ರೋಡಿಗೆ ಬಂದು ನೋಡಲಿ ಎಂದು ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಕಿದ ಸವಾಲಿಗೆ ಹಿಂದು ಸಂಘಟನೆ ಕಾರ್ಯಕರ್ತರು ಬಿಸಿ ರೋಡಿನಲ್ಲೇ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಇದು ಪಾಕಿಸ್ತಾನ ಅಲ್ಲ, ನಾವು ಭಾರತದಲ್ಲಿ ಎಲ್ಲಿ ಬೇಕಾದರೂ ಬರುತ್ತೇವೆ ತಡೆಯಿರಿ ನೋಡೋಣ ಎಂದು ಪ್ರತಿ ಸವಾಲು ಹಾಕಿದ್ದಾರೆ.

ನಾಗಮಂಗಲ ಗಲಭೆ ಘಟನೆ ಖಂಡಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮುಸ್ಲಿಮರ ಈದ್ ಮೆರವಣಿಗೆಯನ್ನು ಹಿಂದುಗಳು ವಿರೋಧಿಸಿದರೆ ಪರಿಸ್ಥಿತಿ ಏನಾಗಬಹುದು. ಇವರು ಗಲಭೆ ನಡೆಸುವುದಕ್ಕಾಗಿಯೇ ಈ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಈ ಸಲ ಈದ್ ಮೆರವಣಿಗೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಪೊಲೀಸರಿಗೆ ಆಗ್ರಹ ಮಾಡಿದ್ದರು. ಇದೇ ನೆಪದಲ್ಲಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಹಮ್ಮದ್ ಶರೀಫ್, ತಾಕತ್ತಿದ್ದರೆ ಶರಣ್ ಪಂಪ್ವೆಲ್ ಬಿಸಿ ರೋಡಿಗೆ ಬಂದು ನೋಡಲಿ. ಈದ್ ಮೆರವಣಿಗೆ ತಡೆಯಲಿ ಎಂದು ವಾಯ್ಸ್ ಮೆಸೇಜ್ ಹಾಕಿದ್ದರು. ಇದಕ್ಕೆ ಪ್ರತಿಯಾಗಿ ಬಜರಂಗದಳ ಮುಖಂಡರು, ನಾವು ಬಿಸಿ ರೋಡಿಗೆ ಬಂದೇ ಬರುತ್ತೇವೆ ಎಂದೂ ಫೇಸ್ಬುಕ್ ನಲ್ಲಿ ಪ್ರತಿ ಸವಾಲಿನ ಪೋಸ್ಟ್ ಹಾಕಿದ್ದರು.

ಇಂದು ಬೆಳಗ್ಗೆ ಎಂದಿನಂತೆ ಈದ್ ಮೆರವಣಿಗೆಯೂ ನಡೆದಿದೆ, ಪೊಲೀಸರು ಹೆಚ್ಚುವರಿ ಪಡೆಗಳನ್ನು ಕರೆಸಿ ಬಂದೋಬಸ್ತ್ ಮಾಡಿದ್ದಾರೆ, ಇದರ ಬೆನ್ನಲ್ಲೇ ಬಿಸಿ ರೋಡ್ ನಲ್ಲಿ ಸಾವಿರಾರು ಹಿಂದು ಸಂಘಟನೆ ಕಾರ್ಯಕರ್ತರು ಸೇರಿದ್ದಾರೆ. ಅಲ್ಲದೆ, ಶರಣ್ ಪಂಪ್ವೆಲ್ ಮತ್ತು ಇತರ ಹಿಂದು ಸಂಘಟನೆ ನಾಯಕರು ಆಗಮಿಸಿದ್ದು, ಪೊಲೀಸರು ಹಾಕಿದ್ದ ತಡೆಬೇಲಿಯನ್ನು ತಳ್ಳಿಕೊಂಡು ಬಂದು ಶಕ್ತಿಪ್ರದರ್ಶನ ಮಾಡಿದ್ದಾರೆ. ಶರಣ್ ಅವರನ್ನು ಮೇಲೆತ್ತಿ ಕೇಸರಿ ಕಾರ್ಯಕರ್ತರು ಜೈಕಾರ ಹಾಕಿದ್ದಾರೆ. ಆನಂತರ, ಎಸ್ಪಿ ಯತೀಶ್ ಕುಮಾರ್ ಹಿಂದು ಸಂಘಟನೆ ಮುಖಂಡರ ಜೊತೆಗೆ ಮಾತುಕತೆ ನಡೆಸಿದ್ದು, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶರಣ್ ಪಂಪ್ವೆಲ್, ಇದು ಪಾಕಿಸ್ತಾನ ಅಲ್ಲ, ಭಾರತ ಎನ್ನುವುದು ನೆನಪಿಟ್ಟುಕೊಳ್ಳಲಿ. ಯಾರೋ ಜಿಹಾದಿ ನಾಯಿಗಳು ಸವಾಲು ಹಾಕುತ್ತಾರೆ. ಅವರ ಹೇಳಿದ ಜಾಗಕ್ಕೆ ನಾವು ಬಂದಿದ್ದೇವೆ, ತಾಕತ್ತಿದ್ದರೆ ತಡೆದು ನೋಡಲಿ ಎಂದು ಪ್ರತಿ ಸವಾಲು ಹಾಕಿದ್ದಾರೆ. ಅಲ್ಲದೆ, ಯಾರೋ ಸವಾಲು ಹಾಕುತ್ತಾರೆಂದು ಹಿಂದು ಸಮಾಜ ಸುಮ್ಮನೆ ಕೂರೋದಿಲ್ಲ. ನಾವೇನು ಹೇಡಿಗಳಲ್ಲ, ನಮಗೂ ಶಕ್ತಿ ಪ್ರದರ್ಶನ ಮಾಡುವ ತಾಕತ್ತಿದೆ ಎಂದು ಹೇಳಿದ್ದಾರೆ.

ವಿಎಚ್‌ಪಿ, ಬಜರಂಗದಳ ಸಂಘಟನೆಗಳ ಪ್ರಮುಖರಾದ ಪುನೀತ್ ಅತ್ತಾವರ, ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕ‌ರ್ ಧರ್ಮಸ್ಥಳ, ನವೀನ್ ನೆರಿಯಾ, ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಕ, ನವೀನ್ ಮೂಡುಶೆಡ್ಡೆ, ಸಚಿನ್ ಮೆಲ್ಕಾರ್, ಆರ್.ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಮೂರು, ಸಂದೇಶ್ ಶೆಟ್ಟಿ ಅರೆಬೆಟ್ಟು, ಎ.ಗೋವಿಂದ ಪ್ರಭು, ಪುರುಷೋತ್ತಮ ಸಾಲಿಯಾನ್, ರಾಮದಾಸ್ ಬಂಟ್ವಾಳ ಮತ್ತಿತರರು ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಪಾವೂರು: ಮರಳು ಮಾಫಿಯಾ ದಂಧೆಕೋರರಿಂದ ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ..ಉಳಿಯ ದ್ವೀಪದ ನಿವಾಸಿಗಳಿಂದ ಪ್ರತಿಭಟನೆ

Next Post

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

Related Posts

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
32
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ
ಕರಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
17
Next Post
ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

Discussion about this post

Recent News

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
60
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d