ಮಂಗಳೂರು, ಅ.16: ರಾ.ಹೆ.66ರ ಉಳ್ಳಾಲ (ನೇತ್ರಾವತಿ) ಸೇತುವೆಯಲ್ಲಿ ಇಂದು ಸಂಜೆ ಸರಣಿ ಅಪಘಾತ ಸಂಭವಿಸಿದೆ. ಈ ಸರಣಿ ಅಪಘಾತದಲ್ಲಿ ನಾಲ್ಕು ಕಾರು, ಒಂದು ಲಾರಿ ಮತ್ತು ಆಟೋ ರಿಕ್ಷಾಗಳಿಗೆ ಹಾನಿಯಾಗಿವೆ. ಆದರೆ, ಯಾರಿಗೂ ಗಾಯ ಅಪಾಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿ ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿದೆ. ಇದೇ ವೇಳೆ ಭಾರೀ ಮಳೆ ಆರಂಭವಾಗಿತ್ತು. ನಿಯಂತ್ರಣ ಕಳೆದುಕೊಂಡ ಆಲ್ಟೋ ಕಾರು ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬಳಿಕ ಒಂದರ ಹಿಂದೆ ಇನ್ನೊಂದರಂತೆ ರಿಟ್ಝ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಕೊನೆಯದಾಗಿ ಕುಂಪಲ ಕಡೆಗೆ ತೆರಳುವ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.
ಇನ್ನು ಘಟನೆಯಲ್ಲಿ ಕೆಲವರಿಗೆ ಸ್ವಲ್ಪಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ರಾ.ಹೆ66 ರಲ್ಲಿ ಎರಡು ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ವಾಹನಗಳನ್ನು ತೆರವು ಮಾಡಿದರು.
Discussion about this post