ಮಂಗಳೂರು: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ – ಯುವತಿಯನ್ನು ತಡೆದು ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಘಟನೆಯ ವಿವರ: ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರನ್ನು 5-6 ಜನರ ಗುಂಪು ಫಾಲೋ ಮಾಡಿದ್ದಾರೆ. ಹಿಂಬಾಲಿಸಿದ ಗುಂಪು, ಯುವಕ -ಯುವತಿಯನ್ನು ವಿಚಾರಿಸಿ, ಯುವಕನನ್ನು ನಿಂದಿಸಿ, ಥಳಿಸಿದ್ದಾರೆ. ಇದಾದ ಬಳಿಕ ಯುವಕ ಹಲ್ಲೆ ಮಾಡಿದ್ದಾರೆ , ಹಲ್ಲೆಗೀಡಾದ ಯುವಕನನ್ನು ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಯಾಸೀನ್ ಎಂದು ಗುರುತಿಸಲಾಗಿದೆ.
ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಯುವತಿಯ ಅಪಾರ್ಟ್ಮೆಂಟ್ ಖಾಲಿ ಮಾಡುತ್ತಿದ್ದ ಹಿನ್ನೆಲೆ ಲಗೇಜ್ ಶಿಫ್ಟ್ ಮಾಡಿ, ಯುವತಿಯನ್ನು ಕರೆದೊಯ್ಯುತ್ತಿದ್ದ ಯಾಸೀನ್ ರನ್ನು ಹಿಂಬಾಲಿಸಿದ 6 ಮಂದಿ ಯುವಕರ ತಂಡ ಹಲ್ಲೆ ನಡೆಸಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಇಬ್ಬರು ವಿದ್ಯಾರ್ಥಿಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಪಾರ್ಟ್ ಮೆಂಟ್ ಖಾಲಿ ಮಾಡುವ ಸಲುವಾಗಿ ಯಾಸೀನ್ ಆಕೆಗೆ ಸಹಾಯ ಮಾಡಲು ತೆರಳಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಯುವಕರ ತಂಡ ಅನ್ಯ ಧರ್ಮಿಯ ಯುವಕನ ಜೊತೆ ಓಡಾಡುತ್ತೀಯ ಎಂದು ಬೆದರಿಕೆ ಒಡ್ಡಿ ಧಳಿಸಿರುವುದಾಗಿ ತಿಳಿದು ಬಂದಿದೆ.
ಪ್ರಕರಣ ದಾಖಲಿಸಿ, ತಕ್ಷಣ ಕಾರ್ಯಚರಣೆಗೆ ಇಳಿದ ಪೊಲೀಸರು ಆರೋಪಿಗಳಾದ ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ರನ್ನು ಬಂಧಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post