ಮಂಗಳೂರು, ನ.15: ನಗರದ ಕದ್ರಿ ಪೊಲೀಸ್ ಠಾಣೆ ಮುಂದೆ ಕಾರೊಂದು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ನಡೆದಿದೆ. ತಲಪಾಡಿಯ ಅಂಕಿತ್ ಎಂಬವರು ಸೆಕೆಂಡ್ ಸೇಲ್ ಮಳಿಗೆಯಿಂದ ಶುಕ್ರವಾರ ಸಂಜೆ ಕಾರು ಖರೀದಿಸಿ ಕೊಂಡೊಯ್ಯು ತ್ತಿದ್ದರು. ಈ ವೇಳೆ ಕಾರನ್ನು ಕದ್ರಿ ಪೊಲೀಸ್ ಠಾಣೆಯ ಮುಂದೆ ಸ್ವಲ್ಪ ಸಮಯದ ಬಳಿಕ ಮತ್ತೆ ಕಾರನ್ನು ಚಾಲನೆ ಮಾಡಿ ದ್ದಾರೆ. ಆವಾಗ ಕಾರಿನ ಬೋನೆಟ್ನಲ್ಲಿ ಶಾರ್ಟ್ಸರ್ಕ್ಯೂಟ್ ಆಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಕಾರಿನಲ್ಲಿದ್ದವರು ಕೂಡಲೇ ಕಾರಿನಿಂದ ಹೊರಗೆ ಬಂದಿದ್ದಾರೆ. ನೋಡ-ನೋಡುತ್ತಿದ್ದಂತೆಯೇ ಬೆಂಕಿ ಇಡೀ ಕಾರನ್ನು ಆವರಿಸಿತ್ತು. ಕದ್ರಿ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚಣೆ ನಡೆಸಿ ಬೆಂಕಿ ನಂದಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post