• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 1.5 ಕೋಟಿಗೂ ಅಧಿಕ ವಂಚನೆ: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ, ಮೂವರ ಬಂಧನ

Coastal Times by Coastal Times
November 16, 2024
in ಕ್ರೈಮ್ ನ್ಯೂಸ್
ಮಂಗಳೂರು: 1.5 ಕೋಟಿಗೂ ಅಧಿಕ ವಂಚನೆ: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ, ಮೂವರ ಬಂಧನ
138
VIEWS
WhatsappTelegramShare on FacebookShare on Twitter

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲ.ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲ.ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕಾವೂರು ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇರಳ ಎರ್ನಾಕುಲಂ ಆಲುವಾ ತಾಲೂಕಿನ ನಿಸಾರ್‌, ಕೋಝಿಕೋಡ್‌ ತಿರುವನ್ನೂರಿನ ಸಾಹಿಲ್‌ ಮತ್ತು ಕೋಯಿಲಾಂಡಿಯ ಮುಹಮ್ಮದ್‌ ನಶಾತ್‌ ಬಂಧಿತ ಆರೋಪಿಗಳು. ಬಂಧಿತರ ಪೈಕಿ ನಿಸಾರ್‌ ಸಿಬಿಐ ಅಧಿಕಾರಿ ಎಂದು ಬೆದರಿಸಿ ಸಾಫ್ಟ್ವೇರ್‌ ಎಂಜನಿಯರ್‌ ಓರ್ವರಿಂದ 68 ಲ.ರೂ.ಗಳನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿ. ಸಾಹಿಲ್‌ ಮತ್ತು ನಶಾತ್‌ ಹೂಡಿಕೆ ಹೆಸರಿನಲ್ಲಿ ವಂಚಿಸಿದ ಪ್ರಕರಣದ ಆರೋಪಿಗಳು. ಆರೋಪಿಗಳನ್ನು ಕೇರಳದಿಂದ ವಶಕ್ಕೆ ಪಡೆದು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ಸಿಬಿಐ ಅಧಿಕಾರಿಗಳೆಂದು ಹೆದರಿಸಿ ಸುಲಿಗೆ : ಮಂಗಳೂರು ನಗರದ ನಿವಾಸಿಯಾಗಿರುವ ಸಾಫ್ಟ್ವೇರ್‌ ಎಂಜಿನಿಯರ್‌ ಓರ್ವರ ಮೊಬೈಲ್‌ಗೆ ಅ. 10ರಂದು ಅಪರಾಹ್ನ ಆರೋಪಿಗಳು ಕರೆ ಮಾಡಿ ‘ನಿಮ್ಮ ಹೆಸರಿನಲ್ಲಿ ಹೊಸದಿಲ್ಲಿಯಿಂದ ಪಾರ್ಸೆಲ್‌ ಹೋಗಿದ್ದು ಅದರಲ್ಲಿ ಡ್ರಗ್ಸ್‌, ಐಪೋನ್‌, ಬಟ್ಟೆ ಇತ್ತು. ನಾವು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ಕನೆಕ್ಟ್ ಮಾಡುತ್ತೇವೆ’ ಎಂದು ತಿಳಿಸಿದರು. ಕೆಲವೇ ಹೊತ್ತಿನಲ್ಲಿ ಕರೆ ಮಾಡಿದ ಬೇರೆ ವ್ಯಕ್ತಿಗಳು “ನಾವು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಿಂದ ಕರೆ ಮಾಡುತ್ತಿದ್ದು ನಿಮ್ಮ ಮೇಲೆ 3 ದೂರುಗಳು ದಾಖಲಾಗಿವೆ. ತನಿಖೆ ಮಾಡುವುದಕ್ಕಾಗಿ ಕರೆಯನ್ನು ಸಿಬಿಐ ಅಧಿಕಾರಿಗೆ ಕನೆಕ್ಟ್ ಮಾಡುತ್ತೇವೆ’ ಎಂದು ಹೇಳಿದರು. ಬಳಿಕ ಸಿಬಿಐ ಅಧಿಕಾರಿಯೆಂದು ಪರಿಚರಿಸಿಕೊಂಡ ವ್ಯಕ್ತಿಯೋರ್ವ “ನಿಮ್ಮ ಖಾತೆಯನ್ನು ಯಾರೋ ದುರುಪಯೋಗ ಪಡಿಸುತ್ತಿದ್ದಾರೆ. ಬ್ಯಾಂಕ್‌ ವಿವರಗಳನ್ನು ನೀಡಿ ನಾವು ಪರಿಶೀಲಿಸುತ್ತೇವೆ’ ಎಂದ. ಕೆಲವು ಹೊತ್ತಿನ ಬಳಿಕ ಸಾಫ್ಟ್ವೇರ್‌ ಎಂಜಿನಿಯರ್‌ ಅವರಿಗೆ ಸಂಶಯ ಬಂದು ಪ್ರಶ್ನಿಸಿದಾಗ ಆರೋಪಿಗಳು ಗದರಿಸಲು ಆರಂಭಿಸಿ ಹಣ ವಾರ್ಗಯಿಸುವಂತೆ ಹೇಳಿದ್ದರು. ಅವರನ್ನು ಬಂಧನದ ರೀತಿಯಲ್ಲಿ (ಡಿಜಿಟಲ್‌ ಅರೆಸ್ಟ್‌) ನಡೆಸಿಕೊಂಡು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದರು. ಹೀಗೆ ಒಟ್ಟು 68 ಲ.ರೂ.ಗಳನ್ನು ಆರೋಪಿಗಳು ಅವರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ್ದರು.

ಹೂಡಿಕೆ ಹೆಸರಿನಲ್ಲಿ 90 ಲ.ರೂ. ವಂಚನೆ: ಮೆಡಿಕಲ್‌ ರೆಪ್ರಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಯೋರ್ವರ ವಾಟ್ಸ್‌ಆ್ಯಪ್‌ಗೆ ಸ್ಟಾಕ್‌ ಮಾರ್ಕೆಟ್‌ನ ಹೆಸರಿದ್ದ ಗ್ರೂಪ್‌ವೊಂದರಿಂದ ಸಂದೇಶ ಬಂದಿತ್ತು. ಅದರಲ್ಲಿ ಷೇರು ಟ್ರೇಡಿಂಗ್‌ ಬಗ್ಗೆ ಮಾಹಿತಿ ಇತ್ತು. ಬಳಿಕ ಅದರಲ್ಲಿ ಖಾತೆ ತೆರೆಯಲು ಲಿಂಕ್‌ ಬಂದಿತ್ತು. ಖಾತೆ ತೆರೆದು ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿದಂತೆ ದೂರುದರಾರರು ಹಣ ಹೂಡಿಕೆ ಮಾಡಿದ್ದರು. ಅದರಂತೆ ಹಂತ ಹಂತವಾಗಿ 90.90 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಆದರೆ ಅದನ್ನು ಹಿಂಪಡೆಯಲು ಯತ್ನಿಸಿದಾಗ ಸಾಧ್ಯವಾಗಲಿಲ್ಲ. ಅನುಮಾನ ಬಂದು ಅವರು ಪೊಲೀಸರಿಗೆ ದೂರು ನೀಡಿದ್ದರು.

ಕಾವೂರು ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ರಾಘವೇಂದ್ರ ಬೈಂದೂರು, ಉಪನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್‌ ಎನ್‌. ಹಾಗೂ ಮಾಲತೇಶ ಅವರು ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕದ್ರಿ ಪೊಲೀಸ್ ಠಾಣೆ ಮುಂದೆ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Next Post

ಟಿವಿ9 ಪ್ರಾಪರ್ಟಿ ಎಕ್ಸ್​ಪೋ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್​ಗಳು; ಜನರಿಂದ ಉತ್ತಮ ಸ್ಪಂದನೆ

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
52
Next Post
ಟಿವಿ9 ಪ್ರಾಪರ್ಟಿ ಎಕ್ಸ್​ಪೋ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್​ಗಳು; ಜನರಿಂದ ಉತ್ತಮ ಸ್ಪಂದನೆ

ಟಿವಿ9 ಪ್ರಾಪರ್ಟಿ ಎಕ್ಸ್​ಪೋ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್​ಗಳು; ಜನರಿಂದ ಉತ್ತಮ ಸ್ಪಂದನೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d