• About us
  • Contact us
  • Disclaimer
Friday, January 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಬಲಾ ಮಾಂತ್ರಿಕ ಜಾಕಿರ್​ ಹುಸೇನ್ ಇನ್ನಿಲ್ಲ ! ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನ

Coastal Times by Coastal Times
December 16, 2024
in ಕೋಸ್ಟಾಲ್ ಟೈಮ್ಸ್ ವಿಶೇಷ
ತಬಲಾ ಮಾಂತ್ರಿಕ ಜಾಕಿರ್​ ಹುಸೇನ್ ಇನ್ನಿಲ್ಲ ! ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನ
31
VIEWS
WhatsappTelegramShare on FacebookShare on Twitter

ನವದೆಹಲಿ: ತಬಲಾ ವಾದನದಿಂದ ವಿಶ್ವವನ್ನೇ ಬೆರಗು ಮೂಡಿಸಿದ್ದ ‘ಮಾಂತ್ರಿಕ’ ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಸಮಸ್ಯೆ ತುತ್ತಾಗಿ ಭಾನುವಾರ ರಾತ್ರಿ ಅಮೆರಿಕದಲ್ಲಿ ನಿಧನರಾದರು. ಪ್ರಖ್ಯಾತ ಶಾಸ್ತ್ರೀಯ ಸಂಗೀತಗಾರನ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ದೃಢಪಡಿಸಿದೆ. ಈ ಮೊದಲು ಅವರ ಪಿಆರ್​​ಒ ಪಿಆರ್​ಒ ಮೃತಪಟ್ಟಿಲ್ಲ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಭಾನುವಾರ ತಿಳಿಸಿದ್ದರು. ಅಂತಿಮವಾಗಿ ಅವರ ಕುಟುಂಬ ವರ್ಗ ಹುಸೇನ್​ ನಿಧನರಾಗಿದ್ದಾರೆ ಎಂದು ದೃಢಪಡಿಸಿದೆ.

“ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ನಂತರ ಅವರು ಅಸ್ವಸ್ಥರಾಗಿದ್ದು, ಐಸಿಯುನಲ್ಲಿ ದಾಖಲಾಗಿದ್ದರು. ನಾವೆಲ್ಲರೂ ಅವರ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ” ಎಂದು ಅವರ ಸ್ನೇಹಿತ ಮತ್ತು ಕೊಳಲು ವಾದಕ ರಾಕೇಶ್ ಚೌರಾಸಿಯಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಇಹಲೋಕ ತ್ಯಜಿಸಿದ್ದಾರೆ.

ಹೃದಯ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಬಲಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ 73 ವರ್ಷದ ಸಂಗೀತಗಾರನಿಗೆ ರಕ್ತದೊತ್ತಡ ಸಮಸ್ಯೆ ಉಂಟಾಗಿತ್ತು ಎಂದು ಹುಸೇನ್​ ಅವರ ಮ್ಯಾನೇಜರ್ ನಿರ್ಮಲಾ ಬಚಾನಿ ಹೇಳಿದ್ದಾರೆ.

ಸಾಧಕ ದೈತ್ಯನ ಸಾಧನೆಯ ಹಾದಿ: ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಮಗನಾಗಿರುವ ಜಾಕಿರ್​ ಹುಸೇನ್ ಅವರು ತಮ್ಮ ತಂದೆಯ ಹೆಜ್ಜೆಗಳನ್ನು ಅನುಸರಿಸಿದರು. ಭಾರತ ಸೇರಿದಂತೆ ವಿಶ್ವದಲ್ಲಿಯೇ ತಬಲಾ ವಾದನವನ್ನು ಪ್ರಖ್ಯಾತಿಗೆ ತಂದರು. ಹುಸೇನ್ ತಮ್ಮ ವೃತ್ತಿಜೀವನದಲ್ಲಿ ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ 66ನೇ ಗ್ರ್ಯಾಮಿ ಪ್ರಶಸ್ತಿ ಸಮಾರಂಭದಲ್ಲಿ ಮೂರು ಪ್ರಶಸ್ತಿ ಗೆದ್ದಿದ್ದರು. ತಾಳವಾದ್ಯ ಮಾಂತ್ರಿಕ ಹುಸೇನ್​ ಅವರು, ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿದ್ದು, ಅವರಿಗೆ 1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಅರಸಿ ಬಂದಿವೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನಕಲಿ ಜಾಮೀನಿಗೆ 5 ಸಾವಿರ! ದಂಧೆ ಬಯಲಿಗೆಳೆದ ಪೊಲೀಸರು, 13 ಮಂದಿ ಸೆರೆ

Next Post

ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜ.18-19ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Related Posts

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು
ಕೋಸ್ಟಾಲ್ ಟೈಮ್ಸ್ ವಿಶೇಷ

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

October 22, 2025
65
ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
Next Post
ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜ.18-19ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜ.18-19ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
10
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d