• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ರಾಜ್ಯ

ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Coastal Times by Coastal Times
January 17, 2022
in ರಾಜ್ಯ
ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
17
VIEWS
WhatsappTelegramShare on FacebookShare on Twitterinstagram

ಬೆಂಗಳೂರು: ಕೋವಿಡ್-19 ರ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. 

ಕೋವಿಡ್-19 ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನವು ಭಾನುವಾರಕ್ಕೆ ಒಂದು ವರ್ಷವನ್ನು ಪೂರೈಸಿದೆ. ಈ ನಡುವಲ್ಲೇ ನಗರದಲ್ಲಿ ಅಬಲಾಶ್ರಮ ಎಂಬ ಎನ್‌ಜಿಒ ಸಂಸ್ಥೆ ಭಾನುವಾರ ಏರ್ಪಡಿಸಿದ್ದ ಸ್ವಾಸ್ಥ್ಯ ಎಂಬ ಉಚಿತ ಆರೋಗ್ಯ ಸೇವಾ ಶಿಬಿರವನ್ನು ಸಚಿವರು ಉದ್ಘಾಟಿಸಿದರು.

ಬಸವನಗುಡಿಯ ಅಬಲಾಶ್ರಮದಲ್ಲಿ ‘ಸ್ವಾಸ್ಥ್ಯ’ ಉದ್ಘಾಟನಾ ಕಾರ್ಯಕ್ರಮ

ಈ ವೇಳೆ ಲಸಿಕೆ ಕುರಿತು ಮಾತನಾಡಿರುವ ಸಚಿವರು, ಕರ್ನಾಟಕದಲ್ಲಿ ಈವರೆಗೆ 9 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಇದರಲ್ಲಿ ಎರಡೂ ಡೋಸ್‌ಗಳನ್ನು ಪಡೆದ 8 ಕೋಟಿಗೂ ಹೆಚ್ಚು ವಯಸ್ಕರು ಮತ್ತು 15 ರಿಂದ 17 ವರ್ಷದೊಳಗಿನ 19 ಲಕ್ಷ ಮಕ್ಕಳು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇದಲ್ಲದೆ, ಸುಮಾರು ಮೂರು ಲಕ್ಷ ನಾಗರೀಕರು ತಮ್ಮ ಮುನ್ನೆಚ್ಚರಿಕಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಸೋಂಕು ತಗುಲಿದವರಿಗೆ ಪರಿಣಾಮಕಾರಿಯಾಗಿ ಮತ್ತು ತಕ್ಷಣವೇ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ತಂತ್ರಜ್ಞಾನ ಮತ್ತು ಡೇಟಾ ಬಳಕೆಯ ಮೂಲಕ ಸಾಂಕ್ರಾಮಿಕ ರೋಗದ 3ನೇ ಅಲೆಯನ್ನು ನಿಯಂತ್ರಿಸಲಾಗುವುದು. 10,000 ಕ್ಕೂ ಹೆಚ್ಚು ವೈದ್ಯರಿಗೆ ಹೋಮ್ ಐಸೋಲೇಶನ್ ಪ್ರಕರಣಗಳನ್ನು ಹೇಗೆ ನಿರ್ವಹಿಸಬೇಕು, ರೋಗಿಗಳಿಗೆ ಯಾವ ರೀತಿ ಸಲಹೆ ನೀಡುವುದು, ಯಾವುದನ್ನು ಮಾಡಬೇಕು, ಮಾಡಬಾರದು ಎಂಬುದರ ಕುರಿತು ಶಿಕ್ಷಣ ನೀಡಲಾಗುತ್ತದೆ. ಈ ಮೂಲಕ ರಾಜ್ಯವು ಮೂರನೇ ಅಲೆಗೆ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಇದೇ ರೀತಿಯ ತರಬೇತಿ ನೀಡಲಾಗುವುದು ಎಂದರು.

ಅಬಲಾಶ್ರಮವು ಮಹಿಳೆಯರಿಗೆ ಸಹಾಯ ಮಾಡುವ ಮತ್ತು ಸಬಲೀಕರಣ ಮಾಡುವ ಗುರಿಯನ್ನು ಹೊಂದಿದೆ. ಉಚಿತ ಆರೋಗ್ಯ ಸೇವಾ ಶಿಬಿರದ ಮೂಲಕ ಅಗತ್ಯವಿರುವವರಿಗೆ ಬಹು-ವಿಶೇಷ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ನೀಡುತ್ತದೆ.

Related Posts

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!
ರಾಜ್ಯ

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

September 16, 2023
62
ಹಾಸನ| ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
ರಾಜ್ಯ

ಹಾಸನ| ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

September 1, 2023
96

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
110
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
20
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In