• About us
  • Contact us
  • Disclaimer
Monday, December 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು: ಭಾವೈಕ್ಯದ ಸಂದೇಶ ಸಾರಿದ ಐತಿಹಾಸಿಕ ಕರಗ : ಹಜ್ರತ್ ತವಕ್ಕಲ್‌ ಮಸ್ತಾನ್‌ ದರ್ಗಾಕ್ಕೂ ಭೇಟಿ

Coastal Times by Coastal Times
April 17, 2022
in ರಾಜ್ಯ
ಬೆಂಗಳೂರು: ಭಾವೈಕ್ಯದ ಸಂದೇಶ ಸಾರಿದ ಐತಿಹಾಸಿಕ ಕರಗ : ಹಜ್ರತ್ ತವಕ್ಕಲ್‌ ಮಸ್ತಾನ್‌ ದರ್ಗಾಕ್ಕೂ ಭೇಟಿ
29
VIEWS
WhatsappTelegramShare on FacebookShare on Twitter

ಬೆಂಗಳೂರು: ಐತಿಹಾಸಿಕ ಧರ್ಮರಾಯ ಸ್ವಾಮಿ ಕರಗ ಉತ್ಸವ ಭಾನುವಾರ ನಸುಕಿನ ಜಾವ ವಿಜೃಂಭಣೆಯಿಂದ ನಡೆಯಿತು. ತವಕ್ಕಲ್‌ ಮಸ್ತಾನ್‌ ದರ್ಗಾಕ್ಕೆ ಭೇಟಿ ನೀಡುವ ಸಂಪ್ರದಾಯವನ್ನು ಪಾಲಿಸುವ ಮೂಲಕ ಈ ಹಬ್ಬವು ‘ನಾಡಿನ ಭಾವೈಕ್ಯಕ್ಕೆ ಧಕ್ಕೆ ತರುವ ತಂತ್ರಗಳು ಫಲಿಸುವುದಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಸಾರಿತು. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷ ಕರಗವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಮತ್ತೆ  ಕಳೆಗಟ್ಟಿದ ಉತ್ಸವ ಹಳೆ ವೈಭವಕ್ಕೆ ಮರಳಿತು.

ಪರಂಪರಾನುಗತವಾಗಿ ಭೇಟಿ ನೀಡುತ್ತಿದ್ದ ಪ್ರದೇಶಗಳಿಲ್ಲೆಲ್ಲ ಕರಗ ಸಾಗಿತು. ಈ ಬಾರಿಯೂ ಚಿಕ್ಕಪೇಟೆಯ ಅಕ್ಕಿಪೇಟೆ ಮುಖ್ಯರಸ್ತೆಯ ಹಜ್ರತ್ ತವಕ್ಕಲ್ ಶಾ ಮಸ್ತಾನ್ ಸೋಹರ್ವಾರ್ಡಿ ರಹಮತುಲ್ಲಾ ದರ್ಗಾಕ್ಕೆ ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಕರಗ ಪ್ರವೇಶಿಸುವ ಮೂಲಕ ಈ ಪರಂಪರೆಗೆ ತಗಾದೆ ತೆಗೆದ ಟೀಕಾಕಾರರಿಗೆ ಉತ್ತರ ನೀಡಿತು. ದರ್ಗಾದಲ್ಲಿ ಮುಸ್ಲಿಂ ಸಮುದಾಯದವರು ಸಾಂಪ್ರದಾಯಿಕ ಸ್ವಾಗತ ನೀಡಿದರು. ಭಕ್ತಾದಿಗಳಿಗೆ ಸಿಹಿ ತಿಂಡಿ, ನೀರು, ಹಣ್ಣುಗಳನ್ನು ನೀಡಿ ಸ್ವಾಗತಿಸಿದರು.

ಕರಗ ನೋಡಲು ದರ್ಗಾ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಮರು ಜಮಾಯಿಸಿದ್ದರು. ದರ್ಗಾದಲ್ಲಿ ಸೇರಿದ್ದವರು ‘ಗೋವಿಂದಾ ಗೋವಿಂದಾ…’ ಎಂದು ಕೂಗಿ ಕರಗದ ಸಂಭ್ರಮ ಹೆಚ್ಚಿಸಿದರು.

‘ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪ್ರತೀಕ ಇದು. ಬೆಂಗಳೂರು ಕರಗ ಕರ್ನಾಟಕದ ದೊಡ್ಡ ಹಬ್ಬ. ಶಾಂತಿಯುತವಾಗಿ ಸಹೋದರ ಭಾವನೆಯಿಂದ ಎಲ್ಲ ಕಾರ್ಯಗಳು ನಡೆದಿವೆ. ಈ ಬಾರಿ ರಂಜಾನ್‌ ಮತ್ತು ಕರಗ ಒಟ್ಟಿಗೆ ಬಂದಿವೆ. ಹಿಂದೂ–ಮುಸ್ಲಿಮರು ಒಗ್ಗಟ್ಟಿನಿಂದ ಇರಬೇಕು. ಈ ಹಬ್ಬವು ಕೋಮು ಸಾಮರಸ್ಯದ ಸಂಕೇತ. ಸಂಪ್ರದಾಯದ ಪ್ರಕಾರ ಎಲ್ಲವೂ ಒಳ್ಳೆಯ ರೀತಿಯಲ್ಲಿ ನಡೆದಿದೆ. ದರ್ಗಾ ಸುತ್ತಲೂ ಮೂರು ಸುತ್ತು ಕರಗ ಪ್ರದಕ್ಷಿಣೆ ಹಾಕಿತು. ಕೆಲವರು ಕರಗ ಬರುವುದಿಲ್ಲ ಎಂದು ಹೇಳುತ್ತಿದ್ದರು. ಅದೆಲ್ಲವೂ ರಾಜಕೀಯ ಅಷ್ಟೇ’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ದರ್ಗಾ ಕಾರ್ಯದರ್ಶಿ ಮಹಮ್ಮದ್‌ ಇನಾಯತ್‌ ಉಲ್ಲಾ ಹೇಳಿದರು.

ಕಬ್ಬನ್‍ಪೇಟೆ, ಆಂಜನೇಯ ಸ್ವಾಮಿ ದೇವಸ್ಥಾನ, ಗಣೇಶ ದೇವಸ್ಥಾನ, ಕಾಟನ್ ಪೇಟೆ,  ಬಳೇ ಪೇಟೆ ಸರ್ಕಲ್, ಅಣ್ಣಮ್ಮ ದೇವಸ್ಥಾನ, ಕುಂಬಾರ ಪೇಟೆ, ಚೌಡೇಶ್ವರಿ ದೇವಸ್ಥಾನ, ತಿಗಳರ ಪೇಟೆ ಮೂಲಕ ದೇವಸ್ಥಾನಕ್ಕೆ ದ್ರೌಪದಿ ಕರಗ ಹಿಂತಿರುಗಿತು. ಕರಗ ಸಾಗುವ ಮಾರ್ಗದಲ್ಲಿ  ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹಾಸನ: ಜೆಡಿಎಸ್‌ಗೆ ಬಿಜೆಪಿ ಬಗ್ಗೆ ಪ್ರೀತಿ‌ಯಿದ್ದರೆ ನೇರವಾಗಿ ಬೆಂಬಲಿಸಲಿ: ಸಿದ್ದರಾಮಯ್ಯ

Next Post

ಪುತ್ತೂರು : ಆಟೋ ಬಳಿಕ ಮಲ್ಲಿಗೆ ವ್ಯಾಪಾರಕ್ಕಿಳಿದ ಹಿಂದೂ ಸಂಘಟನೆಗಳು

Related Posts

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
16
BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ
ರಾಜ್ಯ

BREAKING NEWS: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಕಾರು ಅಪಘಾತದಲ್ಲಿ ದುರ್ಮರಣ

November 26, 2025
65
Next Post
ಪುತ್ತೂರು : ಆಟೋ ಬಳಿಕ ಮಲ್ಲಿಗೆ ವ್ಯಾಪಾರಕ್ಕಿಳಿದ ಹಿಂದೂ ಸಂಘಟನೆಗಳು

ಪುತ್ತೂರು : ಆಟೋ ಬಳಿಕ ಮಲ್ಲಿಗೆ ವ್ಯಾಪಾರಕ್ಕಿಳಿದ ಹಿಂದೂ ಸಂಘಟನೆಗಳು

Discussion about this post

Recent News

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
145
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಪಾಂಡೇಶ್ವರ ಠಾಣೆ ಎಎಸ್ಐ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

December 29, 2025
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

December 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d