ಮಂಗಳೂರು, ಮೇ 17 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಓಎಂ ಪಿಎಲ್ ಘಟಕಕ್ಕೆ ಸೇರಿದ ಬಸ್ಸಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ- ಪೆರ್ಮುದೆಯಲ್ಲಿ ಇರುವ ಒಎಂಪಿಎಲ್ ಕೈಗಾರಿಕೆಗೆ ಕಟೀಲು ಭಾಗದಿಂದ ನೌಕರರನ್ನು ಒಯ್ಯುತ್ತಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ.
ಕಟೀಲು ಕಡೆಯ ನೌಕರರನ್ನು ಬಿಟ್ಟು ಬಸ್ ವಾಪಸ್ಸಾಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದರು. ಅವರು ಕೂಡಲೇ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಶಾಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದ್ದು ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.
ಘಟನೆಯಿಂದ ದೇವಳದ ಆವರಣ ಹಾಗೂ ಸ್ಥಳೀಯರು ಭಯಭೀತರಾಗಿದ್ದು ಕೂಡಲೇನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ ಎಂದು ತಿಳಿದುಬಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post