• About us
  • Contact us
  • Disclaimer
Sunday, December 10, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

ಮಂಗಳೂರು: ” ನಾವು ಕಲಾವಿದರು ಸ್ವಾಭಿಮಾನಿಗಳು ” ಕಲಾ ಚಟುವಟಿಕೆಗಳನ್ನು ನಡೆಸಲು ಅವಕಾಶ ಮಾಡಿಕೊಡಿ

Coastal Times by Coastal Times
September 17, 2021
in ಕರಾವಳಿ
ಮಂಗಳೂರು: ” ನಾವು ಕಲಾವಿದರು ಸ್ವಾಭಿಮಾನಿಗಳು ” ಕಲಾ ಚಟುವಟಿಕೆಗಳನ್ನು ನಡೆಸಲು ಅವಕಾಶ ಮಾಡಿಕೊಡಿ
20
VIEWS
WhatsappTelegramShare on FacebookShare on Twitterinstagram

ಮಂಗಳೂರು: ಸಿನಿಮಾ, ನಾಟಕ ಪ್ರದರ್ಶನಗಳಿಗೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡುವ ಮೂಲಕ ಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ನೆರವಾಗಬೇಕು ಎಂದು ಕಲಾವಿದರಾದ ದೇವದಾಸ್ ಕಾಪಿಕಾಡ್, ವಿಜಯ್‌ಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ. ಶೆಟ್ಟಿ, ಸಿನಿಮಾ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಹಾಗೂ ಮೋಹನ್ ಕೊಪ್ಪಲ ಒತ್ತಾಯಿಸಿದರು.

ಗುರುವಾರ ಇಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ–ಕಾಲೇಜುಗಳು ತೆರೆದಿವೆ. ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಅದರೆ, ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡಿಲ್ಲ. ಇದರಿಂದಲೇ ಜೀವನ ಸಾಗಿಸುವ ಕಲಾವಿದರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ, ರಾಜ್ಯ ಸರ್ಕಾರಕ್ಕೆ ವಿಷಯ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ನಾವು ಕಲಾವಿದರು ಸ್ವಾಭಿಮಾನಿಗಳು ನಮಗೆ ಸರ್ಕಾರಿ ಕಿಟ್ ಅಥವಾ ನೆರವು ಬೇಕಿಲ್ಲ ನಮ್ಮನ್ನು ಬದುಕಲು ಬಿಡಿ ಕಲಾ ಚಟುವಟಿಕೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಿ , ‘ಕಲೆಯನ್ನು ನಂಬಿಕೊಂಡ ನೂರಾರು ಕುಟುಂಬಗಳು ಇವೆ. ಒಂದೂವರೆ ವರ್ಷದಿಂದ ಪ್ರದರ್ಶನ ಇಲ್ಲದೆ, ಕಲಾವಿದರು ನಿರ್ಗತಿಕರಾಗಿದ್ದಾರೆ. ಜಿಲ್ಲೆಯಲ್ಲಿ 30ಕ್ಕೂ ಮಿಕ್ಕಿ ನಾಟಕ ತಂಡಗಳು, 5,000ಕ್ಕೂ ಹೆಚ್ಚು ಕಲಾವಿದರು ಇದ್ದಾರೆ. ಕಲಾವಿದರು ಸಂಕಷ್ಟದಲ್ಲಿದ್ದಾಗ ಸರ್ಕಾರ ನೆರವಾಗಿಲ್ಲ. ನಮಗೆ ನಾಟಕ ಪ್ರದರ್ಶನ, ಸಿನಿಮಾ ಮಂದಿರಗಳಲ್ಲಿ ಪೂರ್ಣ ಪ್ರಮಾಣದ ಅವಕಾಶ ನೀಡಿ, ಕಲಾವಿದರ ಕುಟುಂಬಕ್ಕೆ ನೆರವಾಗಬೇಕು’ ಎಂದು ದೇವದಾಸ್ ಕಾಪಿಕಾಡ್ ತಿಳಿಸಿದರು.

ಇಲ್ಲಿಯ ಸಂಸ್ಕೃತಿ, ಭಾಷೆಗೆ ತುಳು ನಾಟಕಗಳು, ಸಿನಿಮಾಗಳು ವಿಶೇಷ ಕೊಡುಗೆ ನೀಡಿವೆ. ಮುಂಬರುವ ದಸರಾ, ದೀಪಾವಳಿ ಹಬ್ಬದ ದಿನಗಳಲ್ಲಿ ಎಲ್ಲ ತಂಡಗಳಿಗೂ ಪ್ರತಿದಿನ ಪ್ರದರ್ಶನಕ್ಕೆ ಅವಕಾಶ ನೀಡಲು ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು ಎಂದು ಕಿಶೋರ್ ಶೆಟ್ಟಿ ವಿನಂತಿಸಿದರು.

ಚಿತ್ರ ಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಿನಿಮಾ ಬಿಡುಗಡೆಗೊಳಿಸಲು ಅವಕಾಶ ನೀಡಬೇಕು. ಈಗಾಗಲೇ ಕೆಲವು ಸಿನಿಮಾ ಮಂದಿರಗಳು ಮುಚ್ಚಿವೆ. ಇನ್ನುಳಿದವನ್ನಾದರೂ ಉಳಿಸುವ ಪ್ರಯತ್ನ ಮಾಡಬೇಕು. ಚಿತ್ರಮಂದಿರಗಳಿಗೆ ವಿಧಿಸಿರುವ ನಿರ್ಬಂಧ ತೆರವುಗೊಳಿಸಿ, ಶೇ 100ರ ಸಾಮರ್ಥ್ಯದಲ್ಲಿ ಅವಕಾಶ ನೀಡಬೇಕು ಎಂದು ವಿಜಯಕುಮಾರ್ ಕೊಡಿಯಾಲ್ ಬೈಲ್ ಆಗ್ರಹಿಸಿದರು.

Previous Post

ಮುಂಬೈ : ಬೆಳ್ಳಂಬೆಳಗ್ಗೆ ಫ್ಲೈ ಓವರ್‌ ಕುಸಿತ: 14 ಮಂದಿ ಗಂಭೀರ ಗಾಯ

Next Post

ಬೆಳ್ತಂಗಡಿ: ಪತ್ನಿಗೆ ಉಗ್ರ ಸಂಘಟನೆಯ ಲಿಂಕ್ ಎಂದ ಪತಿ ಮೇಲೆ ಕೇಸ್

Related Posts

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್
ಕರಾವಳಿ

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

December 9, 2023
47
ಮಂಗಳೂರಿನಲ್ಲಿ ಮತ್ತೆ ವ್ಯಾಪಾರದಲ್ಲಿ ಧರ್ಮ ದಂಗಲ್: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮುಸ್ಲಿಂ ವ್ಯಾಪಾರಿಗಳ ಆಕ್ರೋಶ
ಕರಾವಳಿ

ಮಂಗಳೂರಿನಲ್ಲಿ ಮತ್ತೆ ವ್ಯಾಪಾರದಲ್ಲಿ ಧರ್ಮ ದಂಗಲ್: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮುಸ್ಲಿಂ ವ್ಯಾಪಾರಿಗಳ ಆಕ್ರೋಶ

December 8, 2023
109
Next Post
ಬೆಳ್ತಂಗಡಿ: ಪತ್ನಿಗೆ ಉಗ್ರ ಸಂಘಟನೆಯ ಲಿಂಕ್ ಎಂದ ಪತಿ ಮೇಲೆ ಕೇಸ್

ಬೆಳ್ತಂಗಡಿ: ಪತ್ನಿಗೆ ಉಗ್ರ ಸಂಘಟನೆಯ ಲಿಂಕ್ ಎಂದ ಪತಿ ಮೇಲೆ ಕೇಸ್

Discussion about this post

Recent News

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

December 10, 2023
114
ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

December 9, 2023
22
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

ಎಂಆರ್ ಪಿಎಲ್ ಟ್ಯಾಂಕರ್ ನಿಂದ ಡಾಮರು ಕಳ್ಳತನ ; ಬಂಟ್ವಾಳದಲ್ಲಿ ಹತ್ತು ಮಂದಿ ಬಂಧನ

December 10, 2023
ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

December 9, 2023
‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

December 9, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In