ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ. ಗುರುವಾರ ಸಂಜೆ 4-30ರ ಸುಮಾರಿಗೆ ಮಂಗಳೂರು ಪೂರ್ವ ಪೊಲೀಸ್ ಠಾಣ ವ್ಯಾಪ್ತಿಯ ನಂತೂರು ಪದವು ಬಳಿ ನಿಟ್ಟೆ ಪಿಯು ಕಾಲೇಜಿನ ಪ್ರಥಮ ಪಿಯುನಲ್ಲಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ವಿದ್ಯಾರ್ಥಿ ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಪದವು ಪಿಯು ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಹಲ್ಲೆ ಮಾಡಿದ ಪದವು ಪಿಯು ಕಾಲೇಜಿನ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಠಾಣೆಗೆ ಕರೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಚಾಕುವಿನಿಂದ ಇರಿದ ಮತ್ತು ಇರಿತಕ್ಕೊಳಗಾದ ವಿದ್ಯಾರ್ಥಿಗಳು ಅಪ್ರಾಪ್ತರಾಗಿದ್ದಾರೆ. ಬಾಲಕರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು, ಕಾನೂನು ಸಂಘರ್ಷಕ್ಕೊಳಾಗದ ಬಾಲಕರ ವಿರುದ್ಧ ಬಾಲ ನ್ಯಾಯ ಮಂಡಳಿ ರವರಿಗೆ ಸೂಕ್ತ ವರದಿಯನ್ನು ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post