ನವದೆಹಲಿ: ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಅಧ್ಯಕ್ಷೀಯ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, 9 ಸಾವಿರಕ್ಕೂ ಹೆಚ್ಚು ಪಿಸಿಸಿ (ಪ್ರದೇಶ ಕಾಂಗ್ರೆಸ್ ಕಮಿಟಿ) ಪ್ರತಿನಿಧಿಗಳು ಇವರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. 24 ವರ್ಷಗಳ ಸುದೀರ್ಘ ಅಂತರದ ನಂತರ ಗಾಂಧಿ ಕುಟುಂಬತೇರ ಸದಸ್ಯರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಇಂದು ಆರನೇ ಬಾರಿಗೆ ಅಧ್ಯಕ್ಷೀಯ ಚುನಾವಣೆಗೆ ಮತದಾನ ನಡೆಯುತ್ತಿದೆ. 24 ವರ್ಷಗಳ ಸುದೀರ್ಘ ಅಂತರದ ನಂತರ ಗಾಂಧಿಯೇತರ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.
ಇಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ಸಮಿತಿ ಮತ್ತು ಪಿಸಿಸಿಯ 9,000 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ. ಎಲ್ಲಾ ರಾಜ್ಯಗಳ ಪಿಸಿಸಿ ಕಚೇರಿಗಳು, ಎಐಸಿಸಿ ಕೇಂದ್ರ ಕಚೇರಿ ಮತ್ತು ಭಾರತ್ ಜೋಡೋ ಯಾತ್ರಾ ಶಿಬಿರದಲ್ಲಿ ಮತದಾನ ನಡೆಯಲಿದೆ. ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾರತ್ ಜೋಡೋ ಯಾತ್ರೆ ಶಿಬಿರದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಮತದಾನಕ್ಕೆ ಕಾಂಗ್ರೆಸ್ ಪಕ್ಷ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾಂಗ್ರೆಸ್ ಚುನಾವಣಾ ಸಮಿತಿಯು ಪ್ರತಿ ರಾಜ್ಯಕ್ಕೆ ಒಬ್ಬ ಚುನಾವಣಾ ಅಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಾಗಿ ಹಲವು ನಾಯಕರನ್ನು ಆಯ್ಕೆ ಮಾಡಿದೆ. ತೆಲಂಗಾಣಕ್ಕೆ ಕೇರಳದ ನಾಯಕ ರಾಜಮೋಹನ್ ಉನ್ನಿಥಾನ್ ಹಾಗೂ ದೆಹಲಿಗೆ ಮಾಜಿ ಸಂಸದ ಪೊನ್ನಂ ಪ್ರಭಾಕರ್ ಚುನಾವಣಾಧಿಕಾರಿಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ರೇಸ್ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಈಗಾಗಲೇ ವಿವಿಧ ರಾಜ್ಯಗಳ ರಾಜಧಾನಿಗಳಿಗೆ ಭೇಟಿ ನೀಡಿದ್ದಾರೆ. ಅವರು ಪಿಸಿಸಿ ಪ್ರತಿನಿಧಿಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸಿದರು. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಹಿರಿಯರು ಅವರನ್ನು ಬೆಂಬಲಿಸುತ್ತಿದ್ದಾರೆ. ಈ ವಿಚಾರದಲ್ಲಿ ತರೂರ್ ಆರೋಪ ಮಾಡಿದರೂ ತಾವು ತಟಸ್ಥರೇ ಹೊರತು ಯಾರ ಪರವೂ ಅಲ್ಲ ಎಂದು ಗಾಂಧಿ ಕುಟುಂಬ ಈಗಾಗಲೇ ಸ್ಪಷ್ಟಪಡಿಸಿದೆ.
Discover more from Coastal Times Kannada
Subscribe to get the latest posts sent to your email.








Discussion about this post